Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಧಾನಿ ಮೋದಿ ಅವರ ಹುಟ್ಟುಹಬ್ಬಕ್ಕೆ 16 ದಿನಗಳ ಕಾರ್ಯಕ್ರಮ ರೂಪಿಸಿದ ಬಿಜೆಪಿ..!

---Advertisement---

ಬೆಂಗಳೂರು: ಪ್ರಧಾನಿ ಮೋದಿ ಅವರ ಹುಟ್ಟಿದ ದಿನ ಬಂದೇ ಬಿಟ್ಟಿದೆ. ನಾಳೆ ಅಂದ್ರೆ ಸೆಪ್ಟೆಂಬರ್17ರಂದು ಪ್ರಧಾನಿ ಮೋದಿ ಅವರ ಹುಟ್ಟುಹಬ್ಬ. ಕಳೆದ ಬಾರಿ ಭಾರತಕ್ಕೆ ಹುಟ್ಟುಹಬ್ಬದ ವಿಶೇಷವಾಗಿ ಚೀತಾಗಳನ್ನು ತರಿಸಲಾಗಿತ್ತು. ಈ ವರ್ಷ ಮೋದಿ ಅವರ ಹುಟ್ಟುಹಬ್ಬವನ್ನು ಸ್ಪೆಷಲ್ ಆಗಿಸಲು ಬಿಜೆಪಿ ತಯಾರಿ ನಡೆಸಿದೆ. ಅದು ಒಂದಲ್ಲ ಎರಡಲ್ಲ ಬರೋಬ್ಬರಿ 16 ದಿನಗಳ ಕಾಲ ಕಾರ್ಯಕ್ರಮದ ರೂಪಿಸಲಾಗಿದೆ.

ಪ್ರಧಾನಿ ಮೋದಿಯವರು 73ನೇ ವಸಂತಕ್ಕೆ ಕಾಲಿಡಲಿದ್ದಾರೆ. ಈ ಸಂಧರ್ಭವನ್ನು ಬಿಜೆಪಿ ಪಕ್ಷ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2ರವರೆಗೆ ಕಾರ್ಯಕ್ರಮ ಮಾಡಲು ಯೋಜಿಸಲಾಗಿದೆ. ಸೇವಾ ಹೀ ಎಂಬ ಹೆಸರಿನಲ್ಲಿ ಹದಿನಾರು ದಿನಗಳ ಕಾಲ ಕಾರ್ಯಕ್ರಮ ಆಯೋಜನೆ ಮಾಡಿದೆ. ಗಾಂಧಿ ಜಯಂತಿಯಂದು ಈ ಕಾರ್ಯಕ್ರಮ ಮುಕ್ತಾಯವಾಗಲಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಮ್ ಚುಗ್, ವಿನೋದ್ ತಾವ್ಡೆ, ಸುನಿಲ್ ಬನ್ಸಾಲ್, ಸಂಜಯ್ ಬಂಡಿ ಮತ್ತು ಕೈಲಾಶ್ ವಿಜಯವರ್ಗಿಯ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮದ ಸಿದ್ಧತೆಗಳ ಸಭೆ ನಡೆಯಿತು. ಈ ಕಾರ್ಯಕ್ರಮದ ಅಡಿಯಲ್ಲಿ ಪಕ್ಷವು ಜಿಲ್ಲಾ ಮಟ್ಟದಲ್ಲಿ ಪ್ರಧಾನಿ ಮೋದಿಯವರ ಪ್ರದರ್ಶನಗಳನ್ನು ಆಯೋಜಿಸಿತ್ತು. ಬಿಜೆಪಿಯು ಸೆಪ್ಟೆಂಬರ್ 25 ರಂದು ದೀನದಯಾಳ್ ಉಪಾಧ್ಯಾಯ ಜಯಂತಿ ಮತ್ತು ಅಕ್ಟೋಬರ್ 2 ರಂದು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಸೇವಾ ಪಖ್ವಾಡಾ ಎಂದು ಆಚರಿಸಲಿದೆ. ಪ್ರಧಾನಿ ಮೋದಿಯವರ ಹುಟ್ಟುಹಬ್ಬವನ್ನು ವಿಶೇಷವಾಗಿಸಲು ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment