Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತೀರಾ..? : ನಿಖಿಲ್ ಕುಮಾರಸ್ವಾಮಿ ಉತ್ತರ ಏನಾಗಿತ್ತು..?

---Advertisement---

ಬೀದರ್:ನಿಖಿಲ್ ಕುಮಾರಸ್ವಾಮಿ ಅವರು ಚುನಾವಣೆಗೆ ಸ್ಪರ್ಧಿಸಿ ಎರಡು ಬಾರೀ ಸೋಲು ಕಂಡಿದ್ದಾರೆ. ಇತ್ತಿಚೆಗೆ ದೊಡ್ಡ ಬ್ಯಾನರ್ ನಲ್ಲಿ ಸಿನಿಮಾ ಆರಂಭಿಸಿದ್ದಾರೆ. ಅಂದೇ ಮಾಜಿ ಸಿಎಂ ಕುಮಾರಸ್ವಾಮಿ ಅವರು ನಿಖಿಲ್ ರಾಜಕೀಯದ ಬಗ್ಗೆ ಭವಿಷ್ಯ ಹೇಳಿದ್ದರು. ನಿಖಿಲ್ ಇನ್ನು ಐದು ವರ್ಷ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಸಿನಿಮಾದ ಕಡೆಗೆ ಹೆಚ್ಚು ಗಮನ ನೀಡುತ್ತಾರೆ ಎಂದಿದ್ದರು.

ಇದೀಗ ಅದೇ ವಿಚಾರವಾಗಿ ನಿಖಿಲ್ ಕುಮಾರಸ್ವಾಮಿ ಕೂಡ ಉತ್ತರ ನೀಡಿದ್ದಾರೆ. ನಾನು ಸಿನಿಮಾ ಶೂಟಿಂಗ್ ಆರಂಭಿಸಿ ಒಂದು ವಾರ ಆಗಿದೆ. ರಾಜಕೀಯದಿಂದ ದೂರ ಉಳಿಯಬೇಕು ಅಂತಾನೆ ಸಿನಿಮಾ ಕಡೆ ಗಮನ ಕೊಟ್ಟಿರುವುದು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತನಾಗಿ ಓಡಾಡುತ್ತೇನೆ ಎಂದು ಸ್ಪರ್ಧೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಇನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಬಗ್ಗೆ ಮಾತನಾಡಿ, ಮೈತ್ರಿ ಬಗೆಗಿನ ವಿಚಾರದಲ್ಲಿ ನಮ್ಮ‌ ಪಕ್ಷದ ವರಿಷ್ಠರೆ ತೆರೆ ಎಳೆಯುತ್ತಾರೆ‌. ಯಾರು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂಬುದನ್ನು ಅವರೇ ತೀರ್ಮಾನ ಮಾಡುತ್ತಾರೆ. ಒಂದು ಪ್ರಾದೇಶಿಕ ಪಕ್ಷ ಕಟ್ಟುವುದು ಅಷ್ಟು ಸುಲಭವಲ್ಲ. ದೇವೇಗೌಡರ ಪರಿಶ್ರಮದಿಂದ, ಕಾರ್ಯಕರ್ತರಿಂದ ಜೆಡಿಎಸ್ ಪಕ್ಷ ಇದೆ. ಬಹಳಷ್ಟು ನಾಯಕರ ಕೊಡುಗೆ ಇದೆ. ಕುಮಾರಸ್ವಾಮಿ ಅವರು ಕೂಡ ಕಳೆದ 25 ವರ್ಷಗಳಿಂದ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಕೇಸ್ : ಸುಪ್ರೀಂಕೋರ್ಟ್ ನಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ವಜಾ

ಚಿತ್ರದುರ್ಗ : ಅಪ್ರಾಪ್ತ ಬಾಲಕನಿಗೆ ಸ್ಕೂಟಿ ನೀಡಿದ್ದ ವಾಹನ ಮಾಲೀಕನಿಗೆ ₹30,000 ದಂಡ, ಶಿಕ್ಷೆ!

‘ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ’ : ಗುರು ಅಂಧಕಾರ ಕಳೆದು ಅರಿವಿನ ದಾರಿ ತೋರುವ ದಿವ್ಯ ಚೇತನ

ಪೊಲೀಸರಿಗೆ ಮಾಸಿಕ ಕಷ್ಟ ಪರಿಹಾರ ಭತ್ಯೆ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರಿನ  ಲಾಲ್ ಬಾಗ್ ನಲ್ಲಿ ಸ್ವಾತಂತ್ರೋತ್ಸವ ಫಲಪುಷ್ಪ ಪ್ರದರ್ಶನ : ವಿವಿಧ ಸ್ಪರ್ಧೆಗಳು, ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುವ ಅವಕಾಶಗಳಿಲ್ಲದಂತೆ ಪ್ರಕ್ರಿಯೆಗಳನ್ನು ಪಾರದರ್ಶಕವಾಗಿಸಲು ಸುರಕ್ಷಿತ ಬ್ಲಾಕ್‌ಚೈನ್ ತಂತ್ರಜ್ಞಾನದ ಆಧಾರಿತ ಆನ್ಲೈನ್ ಪರೀಕ್ಷಾ ವ್ಯವಸ್ಥೆ ಅನಿವಾರ್ಯ

Leave a Comment