Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅದ್ದೂರಿಯಾಗಿ ಪುರ ಪ್ರವೇಶಿಸಿದ ಹಿಂದೂ ಮಹಾ ಗಣಪತಿ : ಕಣ್ತುಂಬಿಕೊಂಡ ಚಿತ್ರದುರ್ಗದ ಮಹಾಜನತೆ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಸೆ.17 :ತೀವ್ರ ಕುತೂಹಲದಿಂದ ಕಾಯುತ್ತಿದ್ದ ಹಿಂದೂ ಮಹಾ ಗಣಪತಿಯ ಪುರ ಪ್ರವೇಶವನ್ನು ಚಿತ್ರದುರ್ಗದ ಮಹಾಜನತೆ ಕೊನೆಗೂ ಕಣ್ತುಂಬಿಕೊಂಡರು.

ವಿಶ್ವ ಹಿಂದೂ ಪರಿಷದ್-ಬಜರಂಗದಳ ನೇತೃತ್ವದಲ್ಲಿ ಹಿಂದೂ ಮಹಾ ಗಣಪತಿ ಮಹೋತ್ಸವವು ಎಂದಿನಂತೆ ಈ ಬಾರಿಯೂ ಅದ್ದೂರಿಯಾಗಿ ಪುರ ಪ್ರವೇಶಿಸಿತು.

ಶ್ರೀ ಮಾದಾರ ಚನ್ನಯ್ಯ ಗುರುಪೀಠಕ್ಕೆ ಮಧ್ಯಾನ್ಹ 3  ಗಂಟೆ ವೇಳೆಗೆ ಆಗಮಿಸುತ್ತಿದ್ದಂತೆ ಮಠದ ಆವರಣದಲ್ಲಿ ನೆರೆದಿದ್ದ ಅಪಾರ ಸಂಖ್ಯೆಯ ಕಾರ್ಯಕರ್ತರು, ಭಕ್ತಾದಿಗಳು 13 ಅಡಿ ಎತ್ತರದ ಬೃಹತ್ ಗಾತ್ರದ ಗಣಪತಿ ಮೂರ್ತಿಯನ್ನು
ಅಲ್ಲಿ ಅದ್ದೂರಿಯಾಗಿ  ಸ್ವಾಗತಿಸಲಾಯಿತು.
ಕಂಡೊಡನೇ ಹಿಂದೂ ಮಹಾಗಣಪತಿ ಕೀ ಜೈ, ಭಾರತ್ ಮಾತಾಕೀ ಜೈ, ವಂದೇ ಮಾತರಂ ಎಂಬ ಜಯಘೋಷ ಕೂಗುತ್ತಾ ಸಂಭ್ರಮಿಸಿದರು. ನಂತರ ಧಾರ್ಮಿಕ ಪೂಜಾವಿಧಿಗಳನ್ನು ನೆರವೇರಿಸಿದ ಬಳಿಕ
ಮಾದಾರ ಚನ್ನಯ್ಯ ಗುರುಪೀಠದಿಂದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಸಹಸ್ರಾರು ಸಂಖ್ಯೆಯ ಭಕ್ತಾಧಿಗಳು, ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ಮೂಲಕ ಚಳ್ಳಕೆರೆ ಗೇಟ್ ನಿಂದ ಬಿ.ಡಿ.ರಸ್ತೆಯ ಜೈನಧಾಮಕ್ಕೆ 4:30 ರ ವೇಳೆಗೆ ಆಗಮಿಸಿತು. ಈ ವೇಳೆ ಅಲ್ಲಿ ನೆರೆದಿದ್ದ ಭಕ್ತ ಸಮೂಹದ ಸಂಭ್ರಮ ಮುಗಿಲು ಮುಟ್ಟಿತ್ತು. ಮೊಬೈಲ್ ಗಳಲ್ಲಿ ಫೋಟೋ ಮತ್ತು ವಿಡಿಯೋ ತೆಗೆದುಕೊಂಡು ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಹಿಂದೂ ಮಹಾಗಣಪತಿಯ ಸಮಿತಿಯ ಅಧ್ಯಕ್ಷರಾದ ಜಿ.ಎಂ. ಸುರೇಶ್,  ಸಮಿತಿಯ ಮಾರ್ಗದರ್ಶಕರಾದ ಬದ್ರಿನಾಥ್, ಬಜರಂಗದಳ ಪ್ರಾಂತ ಸಹ ಸಂಯೋಜಕರು ಪ್ರಭಜನ್ , ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ಪಿ.ರುದ್ರೇಶ್ , ಜಿಲ್ಲಾ ಸಹ ಕಾರ್ಯದರ್ಶಿ ಕೇಶವ್  , ಬಜರಂಗದಳ ಜಿಲ್ಲಾ ಸಂಯೋಜಕರು,  ಜಿಲ್ಲಾ ಮುಖಂಡರಾದ ಅಶೋಕ್ ,  ವಿಶ್ವ ಹಿಂದೂ ಪರಿಷದ್  ನಗರ ಅಧ್ಯಕ್ಷರು ಶ್ರೀನಿವಾಸ್,  ನಗರ ಸಹ ಕಾರ್ಯದರ್ಶಿ ರಂಗಸ್ವಾಮಿ  , ಗ್ರಾಮಾಂತರ ಕಾರ್ಯದರ್ಶಿ ಶ್ರೀನಿವಾಸ್ ಡೈರಿ ,  ನಗರ ಸಂಯೋಜಕರು ರಂಗಸ್ವಾಮಿ,  ನಗರಸಭೆ ಸದಸ್ಯರು ನವೀನ್ ಚಾಲುಕ್ಯ, ಶಶಿಧರ್, ಸಮಿತಿಯ ಸದಸ್ಯರಾದ ಪ್ರಶಾಂತ್ ಅಪ್ಪಾಜಿ ಪರಿಸರ, ವಿಫಲ್ ಜೈನ್, ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಥೈರಾಯಿಡ್ ಸಮಸ್ಯೆ ಇರುವವರು ಈ ಆಹಾರಗಳನ್ನು ಸೇವಿಸಬಾರದು….!

ಸುದ್ದಿಒನ್ : ಆಹಾರ ಕ್ರಮ ಸರಿಯಾಗಿಲ್ಲದಿದ್ದರೆ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಇತ್ತೀಚಿನ ದಿನಗಳಲ್ಲಿ ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿ ಸಮಸ್ಯೆಗಳು ಸೇರಿದಂತೆ ಥೈರಾಯ್ಡ್ ಸಮಸ್ಯೆಗಳು  ಹೆಚ್ಚಾಗುತ್ತಿವೆ. ಥೈರಾಯ್ಡ್ ಸಮಸ್ಯೆ ಇರುವವರಿಗೆ ಆಹಾರ ಪದ್ಧತಿ ಬಹಳ

ಈ ರಾಶಿಯವರು ಕಳೆದುಕೊಂಡಿರುವ ದುಡ್ಡು ಲೆಕ್ಕಾಚಾರ ಮಾಡಿದರೆ ಎದೆ ಡಬ್ ಎನ್ನುತ್ತದೆ, ಇದಕ್ಕೇನು ಮಾಡಬೇಕು?

ಈ ರಾಶಿಯವರು ಕಳೆದುಕೊಂಡಿರುವ ದುಡ್ಡು ಲೆಕ್ಕಾಚಾರ ಮಾಡಿದರೆ ಎದೆ ಡಬ್ ಎನ್ನುತ್ತದೆ, ಇದಕ್ಕೇನು ಮಾಡಬೇಕು? ಈ ರಾಶಿಯವರಿಗೆ ಮದುವೆ ಮಾಡಿಕೊಳ್ಳಲು ತುಂಬಾ ಜನ ಬರುತ್ತಾರೆ ಆದರೆ ಯಾವುದು ಫಿಕ್ಸ್ ಆಗಲ್ಲ ಏಕೆ? ಮಂಗಳವಾರ- ರಾಶಿ

ವಾಲ್ಮೀಕಿ ನಿಗಮದ ನೌಕರನ ಆತ್ಮಹತ್ಯೆಗೆ ಟ್ವಿಸ್ಟ್ : 85 ಕೋಟಿ ಅವ್ಯವಹಾರದ ವಾಸನೆ..?

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕೌಂಟ್ ಸೂಪರಿಂಟೆಂಡೆಂಟ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಅವ್ಯವಹಾರದ ವಾಸನೆ ಬಡಿಯುತ್ತಿದೆ. 50 ವರ್ಷ ಚಂದ್ರಶೇಖರ್ , ಮೂಲತಃ ಶಿವಮೊಗ್ಗದವರು. ಬೆಂಗಳೂರಿನ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ

error: Content is protected !!