Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲೆಜೆಂಡ್ ಗಳು ಹುಟ್ಟಿದ ದಿನವೇ ಧ್ರುವ ಸರ್ಜಾ ಮಗನ ಹುಟ್ಟು : ಆಕ್ಷನ್ ಪ್ರಿನ್ಸ್ ಹೇಳಿದ್ದೇನು..?

Facebook
Twitter
Telegram
WhatsApp

 

ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಎರಡನೇ ಬಾರಿಗೆ ತಂದೆಯಾಗಿದ್ದಾರೆ. ಇಂದು ಪ್ರೇರಣಾ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ. ಗಣೇಶನ ಹಬ್ಬದ ದಿನವೇ ಗಂಡು ಮಗು ಬಂದಿದೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದೇ ಮಾಹಿತಿ ಲಭ್ಯವಾಗಿದೆ.

ಇನ್ನು ಧ್ರುವ ಸರ್ಜಾಗೆ ಗಂಡು ಮಗು ಆದ ಖುಷಿಯಲ್ಲಿ ಅಭಿಮಾನಿಗಳೆಲ್ಲಾ ಆಸ್ಪತ್ರೆಯ ಮುಂಭಾಗ ಸೇರಿದ್ದರು. ಧ್ರುವ ಸರ್ಜಾ ಮಗನನ್ನು ನೋಡಿಕೊಂಡು ಬಂದ ಖುಷಿಯನ್ನು ಅಭಿಮಾನಿಗಳು ಹಾಗೂ ಮಾಧ್ಯಮದವರ ಬಳಿ ಹೇಳಿದ್ದಾರೆ. ಅಭಿಮಾನಿಗಳಿಗೆಲ್ಲಾ ಸಿಹಿಯನ್ನು ತಿನಿಸಿದ್ದಾರೆ.

ಇದೆ ವೇಳೆ‌ ಮಾತನಾಡಿದ ಅವರು, ಈಗ ಎರಡನೇ ಮಗು ಆಗಿದೆ. ಲೆಕ್ಕದ ಪ್ರಕಾರ ಇದು ಮೂರನೇ ಮಗು. ರಾಯನ್ ಮೊದಲ ಮಗ. ಆಮೇಲೆ‌ ಹೆಣ್ಣು ಮಗು ಹುಟ್ಟಿದೆ. ಆದರೆ ಅವಳಿಗೆ ಇನ್ನು ಹೆಸರಿಟ್ಟಿಲ್ಲ. ಈಗ ಮಗ ಹುಟ್ಟಿದ್ದಾನೆ. ಮನೆಯಲ್ಲಿ ಈಗ ಮೂರು ಮಕ್ಕಳಿದ್ದಾರೆ. ಪ್ರೇರಣಾ ಮತ್ತು ಮಗ ಆರೋಗ್ಯವಾಗಿದ್ದಾರೆ. ಮಗು ಯಾವಾಗ ಹುಟ್ಟಿದರು ಅದು ಒಳ್ಳೆಯ ದಿನವೇ. ಲೆಜೆಂಡರಿಗಳು ಹುಟ್ಟಿದ ದಿನ ಜೊತೆಗೆ ಗೌರಿ ಗಣೇಶ ಹಬ್ಬ ಬೇರೆ ಇನ್ನಷ್ಟು ಖುಷಿ ಕೊಟ್ಟಿದೆ ಎಂದಿದ್ದಾರೆ. ಇದೇ ವೇಳೆ ತನ್ನ ಅಣ್ಣನನ್ನು ನೆನೆದಿದ್ದಾರೆ.

ಅಣ್ಣ ಎಂದರೆ ಧ್ರುವ ಸರ್ಜಾಗೆ ಇನ್ನಿಲ್ಲದ ಪ್ರೀತಿ. ಅಣ್ಣನಿಗೆ ತೋಟದ ಮನೆ ಎಂದರೆ ಬಲು ಇಷ್ಟ. ಈಗಾಗಿಯೇ ಧ್ರುವ ಸರ್ಜಾ ಫ್ಯಾಮಿಲಿ ಈಗ ತೋಡದ‌ ಮನೆಗೆ ಶಿಫ್ಟ್ ಆಗಿದ್ದಾರೆ. ಪ್ರೇರಣಾ ಅವರ ಸೀಮಂತ ಕಾರ್ಯ ಕೂಡ ತೋಟದ ಮನೆಯಲ್ಲಿಯೇ ಆಗಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

error: Content is protected !!