Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಒಂದು ಯುಗ ಮುಗಿದಿದೆ, ನಾಳೆಯಿಂದ ನೂತನ ಸಂಸತ್ ಭವನದಲ್ಲಿ ಸಭೆ: ಲೋಕಸಭೆ ಸ್ಪೀಕರ್

---Advertisement---

ನವದೆಹಲಿ : ಹಳೆಯ ಸಂಸತ್ ಭವನದ ಯುಗ ಇಂದಿಗೆ ಅಂತ್ಯಗೊಂಡಿದೆ. ನಾಳೆಯಿಂದ ಹೊಸ ಕಟ್ಟಡದಲ್ಲಿ ಸಂಸತ್ ಅಧಿವೇಶನ ನಡೆಯಲಿದೆ ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಘೋಷಿಸಿದ್ದಾರೆ. 

ಸಂಸತ್ತಿನ ವಿಶೇಷ ಅಧಿವೇಶನದ ಮೊದಲ ದಿನವಾದ ಸೋಮವಾರ ಸಂಜೆ ಕಲಾಪ ಮುಗಿಯುವ ಮುನ್ನ ಈ ಕುರಿತು ಸದಸ್ಯರಿಗೆ ಮಾಹಿತಿ ನೀಡಿದರು.

ಸದನವನ್ನು ನಾಳೆಗೆ ಮುಂದೂಡಲಾಗುವುದು ಎಂದು ಪ್ರಕಟಿಸಿದ ಸ್ಪೀಕರ್ ಓಂ ಬಿರ್ಲಾ, ನಾಳೆಯಿಂದ ಹೊಸ ಸಂಸತ್ ಭವನದಲ್ಲಿ ಸಭೆಗಳು ನಡೆಯಲಿವೆ ಎಂದು ತಿಳಿಸಿದರು.
ನೂತನ ಸಂಸತ್ ಭವನದಲ್ಲಿ ಬೆಳಗ್ಗೆ ಗಣಪತಿ ಪೂಜೆ ನಡೆಯಲಿದೆ ಎಂದು ವರದಿಯಾಗಿದೆ.

ಮೊದಲು 9.30. ಪ್ರದೇಶದಲ್ಲಿ ಫೋಟೋ ಸೆಷನ್ ಆಯೋಜಿಸಲಾಗುವುದು. ನಂತರ ಕೇಂದ್ರ ಸಭಾಂಗಣದಲ್ಲಿ ಸಂಸದರು ಸಭೆ ನಡೆಸಲಿದ್ದಾರೆ. ಪ್ರಧಾನಿ ಮೋದಿ ಅವರು ಸಂಸದರೊಂದಿಗೆ ನೂತನ ಸಂಸತ್ ಭವನ ಪ್ರವೇಶಿಸಲಿದ್ದಾರೆ.

ಈ ಸಂದರ್ಭದಲ್ಲಿ ಎಲ್ಲ ಸಂಸದರಿಗೂ ಉಡುಗೊರೆ ನೀಡಲಾಗುವುದು.
ಈ ಉಡುಗೊರೆ ಚೀಲದಲ್ಲಿ ಸಂವಿಧಾನದ ಪುಸ್ತಕ, ಸಂಸತ್ತಿನ ಪುಸ್ತಕಗಳು, ಸ್ಮರಣಾರ್ಥ ನಾಣ್ಯ ಮತ್ತು ಅಂಚೆಚೀಟಿ ಇರುತ್ತದೆ ಎಂದು ವರದಿಯಾಗಿದೆ. ನಂತರ ಮಧ್ಯಾಹ್ನ 1.15ಕ್ಕೆ ಲೋಕಸಭೆ ಅಧಿವೇಶನ  ಮತ್ತು 2.15 ನಿಮಿಷಕ್ಕೆ ರಾಜ್ಯಸಭೆ ಅಧಿವೇಶನ ಆರಂಭವಾಗಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment