Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರದ ವಿರುದ್ದ ಕಿಡಿಕಾರಿದ ಕಾಂಗ್ರೆಸ್ ನಾಯಕರು..!

Facebook
Twitter
Telegram
WhatsApp

ಬೆಂಗಳೂರು:ಸರ್ಕಾರದ ಖಜಾನೆ ಖಾಲಿಯಾಗಿದೆಯಾ? ಎಂದು ಮಾಜಿ ಸಚಿವ ಪ್ರಿಯಾಂಕ ಖರ್ಗೆ ಟ್ವಿಟರ್​​ ಮೂಲಕ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.

ಯಾವುದೇ ಯೋಜನೆಗಳಿಗೂ ಹಣ ಇಲ್ವೇ? ನೀರಾವರಿ ನಿಗಮಗಳ ಅನುದಾನವೂ ಪೆಂಡಿಂಗ್ ಉಳಿದಿವೆ. ಇದೀಗ ಸಮಾಜಕಲ್ಯಾಣ ಇಲಾಖೆಯ ಅನುದಾನವೂ ಇಲ್ಲ. ಎಂಟು ನಿಗಮಗಳ ಅನುದಾನ ರಿಲೀಸ್ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ವರ್ಷ ಅನುದಾನವನ್ನೇ ಕೊಟ್ಟಿಲ್ಲ. ಸಮಾಜಕಲ್ಯಾಣ ಇಲಾಖೆ ನಿಗಮಗಳಿಗೆ ಕೊಟ್ಟಿಲ್ಲ. ಕಳೆದ ವರ್ಷದ ಅನುದಾನವೂ ಕಟ್ ಆಗಿದೆ. ಬಿಜೆಪಿ ಸರ್ಕಾರ ಶೇ.50 ಕಡಿತಗೊಳಿಸಿದೆ. ಸೌಲಭ್ಯ ಪಡೆಯುವವರ ಅರ್ಜಿಗಳು ಹೆಚ್ಚಾಗಿವೆ. ಮೂರು ಪಟ್ಟು ಅರ್ಜಿಗಳು ನಿಗಮಗಳಿಗೆ ಬಂದಿವೆ. ಇದಕ್ಕೆ ಸಚಿವ ಕೋಟಾ ಅವ್ರೇ ಏನು ಉತ್ತರ ಕೊಡ್ತೀರಾ ಎಂದು ಪ್ರಶ್ನಿಸಿದ್ದಾರೆ.

ಇನ್ನೂ ಈಶ್ವರ್ ಖಂಡ್ರೆ ಟ್ವೀಟ್ ಮಾಡಿದ್ದು, ವಿ.ಎಚ್.ಪಿ. ನಾಯಕರು ಗೋಹತ್ಯೆ, ಲವ್ ಜಿಹಾದ್ ವಿರುದ್ಧ ತಾವು ಕತ್ತಿ ಹಿಡಿದರೆ ಶವ ಹೂಳಲೂ ಜಾಗ ಸಿಗದು ಎನ್ನುವ ಹೇಳಿಕೆ ಕೊಡುತ್ತಿದ್ದಾರೆ. ರಾಜ್ಯ ಬಿಜೆಪಿ ಪಕ್ಷದವರು ನೈತಿಕ ಪೊಲೀಸ್ ಗಿರಿಗೆ ಬೆಂಬಲ ಕೊಡುತ್ತಿದ್ದಾರೆ. ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯೇ? ಬಸವರಾಜ್ ಬೊಮ್ಮಾಯಿ ಸರ್ಕಾರ ಏಕೆ ಕೈಕಟ್ಟಿ ಕುಳಿತಿದೆ.

ಏಕೆ ಇಂತಹ ಸಂಘಟನೆ ನಿಷೇಧಿಸುವುದಿಲ್ಲ? ಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲದಂತೆ ಆಗಿದೆ. ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಭಯದಿಂದ ಬದುಕುವ ಸ್ಥಿತಿ ಬಂದಿದೆ. ಇದು ಸರ್ಕಾರ ನಡೆಸುವ ರೀತಿಯೇ? ಇದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಹೊತ್ತಿ ಉರಿದ ಎರಡು ಲಾರಿಗಳು…!

ಸುದ್ದಿಒನ್, ಹಿರಿಯೂರು, ಮೇ. 19 : ಪ್ರತ್ಯೇಕ ಘಟನೆಯಲ್ಲಿ ನಿಲ್ಲಿಸಿದ್ದ ಎರಡು ಲಾರಿಗಳಲ್ಲಿ ಆಕಸ್ಮಿಕ ಬೆಂಕಿ ಸಂಭವಿಸಿದ್ದು, ಎರಡು ಲಾರಿಯ ಮುಂಭಾಗದಲ್ಲಿ ಸಂಪೂರ್ಣ ಸುಟ್ಟು ಹೋದ ಘಟನೆ ನಡೆದಿದೆ. ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ

ಅಶ್ವಿನಿ ಪುನೀತ್ ರಾಜ್‍ಕುಮಾರ್ ನಿಂದಿಸಿದ ಕಿಡಿಗೇಡಿಗಳು ಈಗ ಗಪ್ ಚಿಪ್..!

ಆರ್ಸಿಬಿ ಆಟಗಾರರು ಆರಂಭದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುತ್ತಾ ಬಂದಿತ್ತು. ಇದು ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರವಾಗಿತ್ತು. ಆದರೆ ಈ ಸೋಲು-ನೋವಿನ ನಡುವೆ ಯಾರೋ ಕಿಡಿಗೇಡಿಗಳು ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಕೆಟ್ಟ

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

error: Content is protected !!