Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸೀಟು ಹಂಚಿಕೆ ಕಗ್ಗಂಟ್ಟಿಗೆ ದೊಡ್ಡ ಗೌಡ್ರು ಎಂಟ್ರಿ : ಮೋದಿಗೆ ಕೊಟ್ಟ ಸಲಹೆ ಏನು..? ಆ ಬಗ್ಗೆ ಪ್ರಧಾನಿ ಏನಂದ್ರು..?

---Advertisement---

 

ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಗಾಗಿ ಬಿಜೆಪಿ ಮತ್ತು ಜೆಡಿಎಸ್ ಒಂದಾಗಿವೆ. ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಉರುಳಿಸಲು ಸಜ್ಜಾಗಿವೆ. ಆದರೆ ಇದರ ನಡುವೆ ಗೊಂದಲ ಉಂಟು ಮಾಡಿರುವುದೇ ಕ್ಷೇತ್ರ ಹಂಚಿಕೆ ವಿಚಾರ. ಜೆಡಿಎಸ್ ಮತ್ತು ಬಿಜೆಪಿ ನಡುವೆ ಕೆಲವೊಂದು ಕ್ಷೇತ್ರಗಳು ಬಹಳ ಮುಖ್ಯವಾಗುತ್ತದೆ. ಈ ಮೂಲಕ ಕ್ಷೇತ್ರ ಹಂಚಿಕೆಯೇ ಕಗ್ಗಂಟಾಗಿ ಉಳಿದಿತ್ತು. ಇದಕ್ಕೆ ಮಾಜಿ ಪ್ರಧಾನಿ ದೇವೇಗೌಡ ಅವರೇ ಸಲಹೆ ನೀಡಿದ್ದು, ಆ ಸಲಹೆಗೆ ಪ್ರಧಾನಿ ಮೋದಿ ಕೂಡ ಅಸ್ತು ಎಂದಿದ್ದಾರಂತೆ.

ದೋಸ್ತಿ ರಾಜಕಾರಣದಲ್ಲಿ ಬಿಜೆಪಿಯ ಅಂದಾಜಿನ ಪ್ರಕಾರ ಜೆಡಿಎಸ್ ಗೆ ಮೂರು ಮತ್ತೊಂದು ಕೊಡುವುದಕ್ಕೆ ರೆಡಿಯಾಗಿತ್ತು. ಆದರೆ ಈಗ ಜೆಡಿಎಸ್ ಕನಿಷ್ಠ ಆರು ಕ್ಷೇತ್ರ ಆದರೂ ಬೇಕು ಅಂತಿದೆ. ಹೀಗಾಗಿ ಮೋದಿ ಅವರಿಗೆ ದೇವೇಗೌಡ್ರೆ ಸಲಹೆ ನೀಡಿದ್ದು, ಎಲೆಕ್ಷನ್ ಗೂ ಮುನ್ನ ಸರ್ವೇ ನಡೆಸಲು ಸೂಚಿಸಿದ್ದಾರೆ.

ಜೆಡಿಎಸ್ ಗೆಲ್ಲುವ ಕ್ಷೇತ್ರಗಳಲ್ಲಿ ನಾನು ಸಮೀಕ್ಷೆ ಮಾಡಿಸುತ್ತೇನೆ. ಬಿಜೆಪಿ ಗೆಲ್ಲುವ ಕ್ಷೇತ್ರಗಳಲ್ಲಿ ನೀವು ಸರ್ವೇ ಮಾಡಿಸಿ ಅಂತ ಸಲಹೆ‌ ನೀಡಿದ್ದಾರೆ. ಈ ಸರ್ವೇ ಬಳಿಕ ಸೀಟು ಹಂಚಿಕೆ ಬಗ್ಗೆ ತೀರ್ಮಾನ ಮಾಡೋಣ ಅಂತ ಗೌಡರು ಸಜೆಸ್ಟ್​​ ಮಾಡಿದ್ದಾರೆ. ಈ ಮಾತಿಗೆ ಒಪ್ಪಿಗೆ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ನಾಯಕರಿಗೆ ಸರ್ವೇ ಮಾಡಿಸಲು ಆರ್ಡರ್​​​ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...