ಮಂಡ್ಯ: ಕಾವೇರಿ ನೀರು ಉಳಿಸುವುದಕ್ಕಾಗಿ ಮಂಡ್ಯ ರೈತರು ಸಾಕಷ್ಟು ಹೋರಾಟ ಮಾಡುತ್ತಿದ್ದಾರೆ. ಕಾವೇರಿ ವಿಚಾರಕ್ಕೇ
ನೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ದೆಹಲಿಯಲ್ಲಿ ಸಭೆ ನಡೆಯುತ್ತಿದೆ. ಆದರೆ ಸ್ಯಾಂಡಲ್ ವುಡ್ ನ ಸೆಲೆಬ್ರೆಟಿಗಳು ಯಾರೂ ಕೂಡ ಕಾವೇರಿಯ ಬಗ್ಗೆ ಗಮನ ಕೊಡುತ್ತಿಲ್ಲ. ಇದು ರೈತರ ಅಕ್ರೋಶಕ್ಕೆ ಕಾರಣವಾಗಿದೆ.
ನಟ-ನಟಿಯರು ಇಲ್ಲಿಯ ತನಕ ಕಾವೇರಿ ಹೋರಾಟಕ್ಕೆ ಬೆಂಬಲ ನೀಡದೆ ಇರುವುದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿ, ಸೋಷಿಯಲ್ ಮೀಡಿಯಾದಲ್ಲಿ ಧಿಕ್ಕಾರ ಕೂಗುತ್ತಿದ್ದಾರೆ. ಸ್ಟಾರ್ ನಟರ ಫೋಟೋಗಳನ್ನು ಅಂಟಿಸಿ, ವಿರೋಧಿಸುತ್ತಿದ್ದಾರೆ. ಪೋಸ್ಟರ್ ನಲ್ಲಿ ಬಾಯಿಗೆ ಪ್ಲಾಸ್ಟರ್ ಹಾಕುವ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ.
ಹೋರಾಟದ ವೇಳೆ ದಿವಂಗತ ನಟರನ್ನು ನೆನೆದಿದ್ದಾರೆ. ಯಾಕಂದ್ರೆ ಅಣ್ಣಾವ್ರು, ವಿಷ್ಣುವರ್ಧನ್, ಅಂಬರೀಶ್ ಈ ಎಲ್ಲಾ ದೊಡ್ಡ ದೊಡ್ಡ ನಟರು ರೈತರಿ ಅನ್ಯಾಯ ಆಗ್ತಾ ಇದೆ ಎಂದಾಗ ಆ ಪ್ರತಿಭಟನೆ ಯಲ್ಲಿ ಭಾಗಿಯಾಗುತ್ತಿದ್ದರು. ರೈತರ ಕಷ್ಟಗಳಿಗೆ ಸ್ಪಂದಿಸುತ್ತಿದ್ದರು. ಆದರೆ ಈಗಿನ ನಟರು ಯಾವುದೇ ಹೋರಾಟಕ್ಕೂ ಸ್ಪಂದಿಸುತ್ತಿಲ್ಲ. ನಮ್ಮಿಂದ ನಟರೇ ವಿನಃ ನಟರಿಂದ ನಾವಲ್ಲ. ನಟರನ್ನು ನಂಬದೇ ಎಲ್ಲಾ ಕನ್ನಡಿಗರು ರೈತರ ಪರವಾಗಿ ನಿಲ್ಲಬೇಕು. ರೈತನಿಲ್ಲದೆ ಜಗತ್ತು ಇಲ್ಲ. ರೈತ ಉಳಿದರೆ ಜಗತ್ತು ಉಳಿದಂತೆ ಎಂದು ಪೋಸ್ಟ್ ಗಳನ್ನು ಅಂಟಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















