ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ. ಅದರಲ್ಲೂ ಯಾವುದೇ ಯೋಜನೆಗಳನ್ನು ಜಾರಿಗೆ ತಂದರೂ ಸಹ ಅದರಲ್ಲಿ ಬಡವರ ಪರವಾಗಿಯೇ ಇರಲಿದೆ. ಐದು ಗ್ಯಾರಂಟಿಗಳು ಕೂಡ ಅದೇ ದಿಕ್ಕಿನಲ್ಲಿ ಸಾಗುತ್ತಿವೆ. ಇದೀಗ ಮತ್ತೊಂದು ಯೋಜನೆಯನ್ನು ಜಾರಿಗೆ ತರಲು ಹೊರಟಿದ್ದಾರೆ.
ಗ್ರಾಮೀಣ ಭಾಗದ ಜನರಿಗಾಗಿ ಕೂಸಿನ ಮನೆಯನ್ನು ಲೋಕಾರ್ಪಣೆ ಮಾಡಲು ಹೊರಟಿರುವ ಬಗ್ಗೆ ಕಾಂಗ್ರೆಸ್ ತನ್ನ ಅಕೌಂಟ್ ನಲ್ಲಿ ತಿಳಿಸಿದೆ. ಇದು ಶಿಶುಪಾಲನ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶವಾಗಿದೆ.
ಗ್ರಾಮೀಣ ಭಾಗದ ಜನತೆಗೆ ಮತ್ತೊಂದು ವಿಶಿಷ್ಠ ಯೋಜನೆ ರೂಪಿಸಿದೆ ನಮ್ಮ ಸರ್ಕಾರ. ನರೇಗಾ ಕೂಲಿ ಕಾರ್ಮಿಕರು, ಗ್ರಾಮೀಣ ಮಹಿಳೆಯರಿಗೆ ಸ್ವಾವಲಂಭಿ ಬದುಕು ಕಟ್ಟಿಕೊಡುವ ನಿಟ್ಟಿನಲ್ಲಿ ನೆರವಾಗಲು ಸಚಿವ @PriyankKharge ಅವರ ನೇತೃತ್ವದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವತಿಯಿಂದ 4000 ಗ್ರಾಮ ಪಂಚಾಯತಿಗಳಲ್ಲಿ “ಕೂಸಿನ ಮನೆ” ಶಿಶುಪಾಲನಾ ಕೇಂದ್ರಗಳನ್ನು ಲೋಕಾರ್ಪಣೆಗೊಳಿಸಲಾಗುತ್ತಿದೆ.
ಗ್ರಾಮೀಣ ಜನರ ಬದುಕನ್ನು ಹಸನಾಗಿಸುವ ಗುರಿಯನ್ನು ನಮ್ಮ ಸರ್ಕಾರ ತಲುಪುವುದು ನಿಶ್ಚಿತ ಎಂದು ಮಾಹಿತಿ ಹಂಚಿಕೊಳ್ಳಲಾಗಿದೆ. ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ಅದೆಷ್ಟೋ ಕೂಲಿ ಕಾರ್ಮಿಕರ ಮಕ್ಕಳಿಗೆ ಈ ಶಿಶುಪಾಲನ ಕೇಂದ್ರದಿಂದ ಸಹಾಯವಾಗಲಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












