Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಂಗಾರಪ್ಪನವರಂತೆ ನಿರ್ಧಾರ ತೆಗೆದುಕೊಳ್ಳಲು ಒತ್ತಾಯ : ಅಂದು ಕಾವೇರಿಗಾಗಿ ಬಂಗಾರಪ್ಪ ಮಾಡಿದ್ದೇನು ಗೊತ್ತಾ..?

---Advertisement---

 

ಮಂಡ್ಯ: ಕಾವೇರಿ ನದಿಯಲ್ಲಿ ನೀರು ದಿನೇ ದಿನೇ ಕಡಿಮೆ ಆಗುತ್ತಲೇ ಇದೆ. ಈ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಕೂಡ ತಮಿಳುನಾಡಿನ ಪರವಾಗಿಯೇ ಆದೇಶ ಕೊಟ್ಟಿದೆ. ಹೀಗಾಗಿ ರೈತರು ಕೆರಳಿ ಕೆಂಡವಾಗಿದ್ದಾರೆ. ಬಂಗಾರಪ್ಪ ಅವರಂತೆ ನಿರ್ಧಾರ ತೆಗೆದುಕೊಳ್ಳಿ ಎಂದು ಒತ್ತಾಯಿಸುತ್ತಿದ್ದಾರೆ.

ಕಾವೇರಿ ನದಿ ನೀರಿನ ಹೋರಾಟ ನಿನ್ನೆ ಮೊನ್ನೆಯದ್ದಲ್ಲ. ಬಂಗಾರಪ್ಪ ಅವರು ಸಿಎಂ ಆಗಿದ್ದ ಕಾಲದಲ್ಲೂ ಕಾವೇರಿ ಹೋರಾಟ ನಡೆಯುತ್ತಿತ್ತು. ಆ ವೇಳೆ ಸುಗ್ರಿವಾಜ್ಞೆ ತಂದು, ತಮಿಳುನಾಡಿಗೆ ಸೆಡ್ಡು ಹೊಡೆದಿದ್ದರು. ಆ ದಿನಗಳನ್ನು ಇದೀಗ ರೈತರು ನೆನಪಿಸಿಕೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರಕ್ಕೂ ಒತ್ತಾಯಿಸುತ್ತಿದ್ದಾರೆ. 1991ರಲ್ಲಿ ಬಂಗಾರಪ್ಪ ಅವರು ಎಷ್ಟು ಗಟ್ಟಿ‌ ನಿರ್ಧಾರ ಮಾಡಿದ್ದರೋ, ನೀವೂ ಕೂಡ ಅಷ್ಟೇ ಗಟ್ಟಿ ನಿರ್ಧಾರ ಮಾಡಬೇಕಾಗಿದೆ. ಅದೇ ರೀತಿ‌ ಸುಗ್ರಿವಾಜ್ಞೆ ತನ್ನಿ ಎನ್ನುತ್ತಿದ್ದಾರೆ.

ಅಷ್ಟಕ್ಕೂ ಅಂದು ಏನಾಗಿತ್ತು..?

1991 ರಲ್ಲಿ ತಮಿಳುನಾಡಿಗೆ 205 ಟಿಎಂಸಿ ನೀರು ಬಿಡುವಂತೆ ಕಾವೇರಿ ಟ್ರಿಬ್ಯೂನಲ್ ಆದೇಶ ನೀಡಿತ್ತು. ಆದರೆ ಆ ಸಂದರ್ಭದಲ್ಲಿ ತೀರ್ಪಿಗೆ ವಿರುದ್ಧವಾಗಿ ನಿಂತಿದ್ದವರು ಆಗಿನ ಸಿಎಂ ಬಂಗಾರಪ್ಪನವರು. ಡ್ಯಾಂನಲ್ಲಿರುವ ನೀರನ್ನು ನಮ್ಮ ರಾಜ್ಯಕ್ಕೆ ಸಂಗ್ರಹಿಸಿಡುವಂತೆ ಆದೇಶ ನೀಡಿದ್ದರು. ಇದೇ ವಿಚಾರವಾಗಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಬಂದ್ ಗೂ ಬಂಗಾರಪ್ಪನವರು ಪರೋಕ್ಷವಾಗಿ ಬೆಂಬಲ ಸೂಚಿಸಿದ್ದರು. ರೈತರಷ್ಟೇ ಅಲ್ಲ ಅಂದು‌ ಮುಖ್ಯಮಂತ್ರಿ ಸ್ಥಾನದಲ್ಲಿದ್ದ ಬಂಗಾರಪ್ಪನವರು ಕೂಡ ಕಾವೇರಿ ಹೋರಾಟಕ್ಕೆ ಇಳಿದಿದ್ದರು.

ಇದೀಗ ಆ ಹೋರಾಟವನ್ನು ನೆನದಿರುವ ರೈತರು, ರಾಜ್ಯ ಸರ್ಕಾರಕ್ಕೂ ಅಂಥದ್ದೆ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಒತ್ತಾಯ ಹಾಕಿದ್ದಾರೆ. ಸುಪ್ರೀಂ ಕೋರ್ಟ್ ಹೇಳಿದಂತೆ ರಾಜ್ಯದಿಂದ ಪ್ರತಿ ದಿನ ಹದಿನೈದು ದಿನದವರೆಗೆ ಐದು ಸಾವಿರ ಕ್ಯೂಸೆಕ್ ನೀರು ಬಿಟ್ಟರೆ ಕುಡಿಯುವ ನೀರಿಗೂ ಕಷ್ಟ ಎದುರಾಗಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment