Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉದ್ಯೋಗ ವಾರ್ತೆ : ಚಿತ್ರದುರ್ಗ ಜಿಲ್ಲಾ  ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ವ್ಯವಸ್ಥಾಪಕರು, FDA, SDA ಸೇರಿದಂತೆ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ :  ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಚಿತ್ರದುರ್ಗ ಇದರ ವಿವಿಧ ವೃಂದಗಳಲ್ಲಿ ಖಾಲಿ ಇರುವ ಈ ಕೆಳಕಂಡ 68 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್  ಮುಖಾಂತರ ((Online)) ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಕೋರಿಯರ್/ಖುದ್ದಾಗಿ/ಅಂಚೆ ಮೂಲಕ ಪ್ರತ್ಯೇಕವಾಗಿ ಕಳುಹಿಸಲು ಅವಕಾಶವಿರುವುದಿಲ್ಲ ಎಂದು ಈ ಮೂಲಕ ಸ್ಟಷ್ಟಪಡಿಸಿದೆ. ನೇರ ನೇಮಕಾತಿಗೆ ಸಂಬಂಧಿಸಿದ ಮಾಹಿತಿಗಳಾದ ಅರ್ಜಿ ನಮೂನೆ, ಅರ್ಜಿ ಸಲ್ಲಿಸುವ ವಿಧಾನ, ಮೀಸಲಾತಿ ವರ್ಗೀಕರಣ, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ ಹಾಗೂ ಅರ್ಜಿ ಶುಲ್ಕ, ಸಲ್ಲಿಸಬೇಕಾದ ದಾಖಲೆಗಳು, ಆಯ್ಕೆ ವಿಧಾನ, ಸೂಚನೆಗಳು ಇತ್ಯಾದಿ ಎಲ್ಲಾ ಹೆಚ್ಚಿನ ವಿವರಗಳನ್ನು ಬ್ಯಾಂಕ್ ಅಧಿಕೃತ ವೆಬ್ ಸೈಟ್ www.chitradurgadccbank.com ರಲ್ಲಿ ನೀಡಲಾಗಿದೆ. ಹುದ್ದೆಗಳ ವಿವರ ಈ ಕೆಳಕಂಡಂತಿದೆ.

ಕ್ರ. ಸಂ.ಹುದ್ದೆಗಳ ಹೆಸರು ಮತ್ತು ಖಾಲಿ ಇರುವ ಹುದ್ದೆಗಳ ಸಂಖ್ಯೆ

1.  ಸಹಾಯಕ ಪ್ರಧಾನ ವ್ಯವಸ್ಥಾಪಕರು- 06
2.  ಪ್ರಥಮ ದರ್ಜೆ ಗುಮಾಸ್ತರು – 09
3.   ದ್ವಿತೀಯ ದರ್ಜೆ ಗುಮಾಸ್ತರು – 35
4.   ಕಂಪ್ಯೂಟರ್ ಇಂಜೀನಿಯರ್ – 02
5.   ವಾಹನ ಚಾಲಕರು – 02
6.   ಅಟೆಂಡರ್/ಸಹಾಯಕರು -14

ಒಟ್ಟು 68 ಹುದ್ದೆಗಳು ಖಾಲಿ ಇದ್ದು ಅನ್ ಲೈನ್ ಮೂಲಕ ಅರ್ಜಿಯನ್ನು ದಿನಾಂಕ:15.09.2023 ರಿಂದ ದಿನಾಂಕ:16.10.2023 ರವರೆಗೆ ಸಲ್ಲಿಸಬಹುದಾಗಿರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬ್ಯಾಂಕಿನ ಅಧಿಕೃತ ವೆಬ್ ಸೈಟ್ www.chitradurgadccbank.com ರಲ್ಲಿ ಲಭ್ಯವಿದ್ದು, ಆಸಕ್ತಿವುಳ್ಳ ಅಭ್ಯರ್ಥಿಗಳು ಬ್ಯಾಂಕ್ ವೆಬ್‍ಸೈಟ್‍ಗೆ ಭೇಟಿ ನೀಡಿ ಅನ್‍ಲೈನ್ ಮೂಲಕ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಎಂದು
ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ. ಚಿತ್ರದುರ್ಗ, ಇದರ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :
ಚಿತ್ರದುರ್ಗ ಜಿಲ್ಲಾ  ಸಹಕಾರ ಕೇಂದ್ರ ಬ್ಯಾಂಕ್ ನಿ., ಚಿತ್ರದುರ್ಗ
ಪ್ರಧಾನ ಕಛೇರಿ, ಜಿಲ್ಲಾಧಿಕಾರಿಗಳ ರಸ್ತೆ ,                  ಚಿತ್ರದುರ್ಗ -577501.
Email. ID : [email protected]
ದೂರವಾಣಿ ಸಂಖ್ಯೆ :08194 – 222546.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!