Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

‘ಕಾವೇರಿ’ದ ಹೋರಾಟ : ಸಂಜೆಯ ಸಂಪುಟ ಸಭೆಯಲ್ಲಿ ಏನೆಲ್ಲಾ ತೀರ್ಮಾನವಾಗಲಿದೆ..?

Facebook
Twitter
Telegram
WhatsApp

 

ಬೆಂಗಳೂರು: ಸದ್ಯಕ್ಕೆ ಇರುವ ಕಾವೇರಿ ನೀರನ್ನು ಹಾಗೆಯೇ ಉಳಿಸಿಕೊಂಡರೆ ರೈತರಿಗೆ, ಕುಡಿಯುವುದಕ್ಕೆ ಅನುಕೂಲವಾಗಲಿದೆ. ಆದರೆ ಈಗಿರುವ ಅಷ್ಟೊ ಇಷ್ಟೋ ನೀರಿನಲ್ಲಿಯೇ ಪ್ರತಿದಿನ ತಮಿಳುನಾಡಿಗೆ 5 ಸಾವಿರ‌ ಕ್ಯೂಸೆಕ್ ಬಿಡುವಂತೆ ಸುಪ್ರೀಂ ಕೋರ್ಟ್ ಕೂಡ ಸೂಚನೆ ನೀಡಿದೆ. ಹೀಗಾಗಿ ರೈತರು ರೊಚ್ಚಿಗೆದ್ದಿದ್ದಾರೆ. ಇನ್ನು ಕಾವೇರಿ ಗಲಾಟೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಇಂದು ಸಿದ್ದರಾಮಯ್ಯ ಅವರು ಸಂಪುಟ ಸಭೆ ಕರೆದಿದ್ದಾರೆ.

ಇಂದು ಸಂಜೆ 6 ಗಂಟೆಗೆ ವಿಧಾನಸೌಧದಲ್ಲಿ ಸಂಪುಟ ಸಭೆ ನಡೆಯಲಿದೆ. ಈ ವೇಳೆ ಕಾವೇರಿ ವಿಚಾರಕ್ಕೆ ಸುಪ್ರೀಂ ಕೋರ್ಟ್ ನೀಡಿರುವ ಹೇಳಿಕೆ ಸಂಬಂಧ ಚರ್ಚೆ ನಡೆಯುವ ಸಾಧ್ಯತೆ ಇದೆ. ಕಾವೇರಿ ನೀರು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಉಳಿಸಿಕೊಳ್ಳಬಹುದಾದ ಮಾರ್ಗ ಯಾವುದು ಎಂಬುದನ್ನು ಸಿಎಂ ಸಿದ್ದರಾಮಯ್ಯ ಅವರು ಸಚಿವರ ಜೊತೆಗೆ ಚರ್ಚೆ ಮಾಡಲಿದ್ದಾರೆ.

ಮಳೆ‌ ಕೊರತೆ ಇರುವ ಕಾರಣ ಕಾವೇರಿ ಕೊಳ್ಳದಲ್ಲಿ ನೀರು ಕಡಿಮೆ ಪ್ರಮಾಣದಲ್ಲಿ ಸಂಗ್ರಹವಾಗಿದೆ. ಕೆಆರ್ಎಸ್, ಹೇಮಾವತಿ, ಕಬಿನಿ, ಹಾರಂಗಿಯಲ್ಲಿ ಈಗ ಕೇವಲ 42.15 ಅಡಿಗಳಷ್ಟು ನೀರು ಮಾತ್ರ ಬಳಸಿಕೊಳ್ಳಲು ಸಾಧ್ಯವಿದೆ. ಆ ನೀರು ನಮ್ಮ ರಾಜ್ಯದ ಜನರಿಗೆ ಕುಡಿಯುವ ಹಾಗೂ ಕೃಷಿ ಕಾರ್ಯಗಳಿಗೆ ಸಾಕಾಗುವುದಿಲ್ಲ. ಇನ್ನು ತಮಿಳುನಾಡಿಗೂ ಬಿಡಬೇಕು ಎಂದರೆ ಕಷ್ಟಸಾಧ್ಯ ಅಂತಾನೇ ರೈತರು ನಿರಂತರ ಹೋರಾಟದಲ್ಲಿ ತೊಡಗಿದ್ದಾರೆ.

ಮಂಡ್ಯ ಭಾಗದಲ್ಲಿ ಕಾವೇರಿಗಾಗಿ ರೈತರ ಹೋರಾಟ‌ ಕಾವೇರಿದೆ. ರಾಜ್ಯದ ಜನರಲ್ಲೂ ಈ ಹೋರಾಟಕ್ಕೆ ಬೆಂಬಲ ಸೂಚಿಸಲು ರೈತರು ಮನವಿ ಮಾಡಿದ್ದಾರೆ. ಅದರಲ್ಲೂ ಬೆಂಗಳೂರಿನ ಮಂದಿಗೆ ಎಚ್ವರಿಕೆ ನೀಡಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ಬೆಂಗಳೂರಿನ ಮಂದಿಗೆ ಕುಡಿಯುವ ನೀರಿಗೆ ಬೇಕಾಗಿರುವುದು ಕಾವೇರಿ. ಹೀಗಾಗಿ ರೈತರ ಜೊತೆಗೆ ಕೈಜೋಡಿಸಿ ಎಂದೇ ಹೇಳುತ್ತಿದ್ದಾರೆ. ಈಗಾಗಲೇ ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳು ಸೋಷಿಯಲ್ ಮೀಡಿಯಾ‌ ಮೂಲಕವೇ ಬೆಂಬಲ ಸೂಚಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

error: Content is protected !!