Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಅಕ್ಟೋಬರ್ 13 ರಂದು ಅದ್ದೂರಿಯಾಗಿ ರಾಜ ವೀರ ಮದಕರಿ ನಾಯಕ ಜಯಂತೋತ್ಸವ ಆಚರಣೆ : ಬಿ.ಕಾಂತರಾಜ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ,(ಸೆ.22) :  ಅಕ್ಟೋಬರ್ 13 ರಂದು ರಾಜ ವೀರ ಮದಕರಿ ನಾಯಕರವರ ಜಯಂತೋತ್ಸವವನ್ನು ಆಚರಣೆ ಮಾಡಲು ನಾಯಕ ಸಮಾಜ ತೀರ್ಮಾನ ಮಾಡಲಾಗಿದೆ ಎಂದು ತಾಲ್ಲೂಕು ನಾಯಕ ಸಮಾಜದ ಅಧ್ಯಕ್ಷರಾದ ಬಿ.ಕಾಂತರಾಜ್ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇದುವರೆವಿಗೂ ಸರಳವಾಗಿ ಆಚರಣೆ ಮಾಡಲಾಗುತ್ತಿದ್ದ ಮದಕರಿ ನಾಯಕರ ಜಯಂತೋತ್ಸವವನ್ನು ಈ ಸಾಲಿನಿಂದ ಅದ್ದೂರಿಯಾಗಿ ಆಚರಣೆ ಮಾಡಲು ತೀರ್ಮಾನ ಮಾಡಲಾಗಿದೆ. ಅಂದು ಮೆರವಣಿಗೆಯನ್ನು ಮಾಡುವುದರ ಮೂಲಕ ಮದಕರಿ ನಾಯಕರ ಜಯಂತೋತ್ಸವವನ್ನು ನಡೆಸಲಾಗುವುದು. ಇದು ಪ್ರಾರಂಭೀಕವಾಗಿ ಚಿತ್ರದುರ್ಗದಲ್ಲಿ ನಡೆಸಲಾಗುತ್ತಿದೆ ಮುಂದಿನ ದಿನಮಾನದಲ್ಲಿ ರಾಜ್ಯವ್ಯಾಪ್ತಿ ಹಬ್ಬಲಿದೆ ಎಂದರು.

ಮದಕರಿನಾಯಕರ ಜಯಂತೋತ್ಸವದ ಅಂಗವಾಗಿ ನೂತನವಾಗಿ ಮದಕರಿನಾಯಕರ ಭಾವಚಿತ್ರವನ್ನು ಮುಂದಿನ ದಿನದಲ್ಲಿ ಬೀಡುಗಡೆ ಮಾಡಲಾಗುವುದು. ಇದಕ್ಕೆ ತಯಾರಿ ನಡೆಯುತ್ತಿದೆ ಈ ಸಂಬಂದ ಇತಿಹಾಸ ಸಂಶೋಧಕರಾದ ಲಕ್ಷ್ಮಣ್ ತೆಲಗಾವಿ ಮತ್ತು ಬಿ.ರಾಜಶೇಖರಪ್ಪ ರವರ ಜೊತೆ ಹಲವಾರು ಬಾರಿ ಮಾತನಾಡಿದ್ದು ಕ್ರಿಯೇಟಿವ್ ವೀರೇಶ್ ರವರಿಂದ ರೇಖಾ ಚಿತ್ರವನ್ನು ತಯಾರು ಮಾಡಲಾಗುತ್ತಿದೆ. ನಮ್ಮ ಜಯಂತೋತ್ಸವದಲ್ಲಿ ಈ ಚಿತ್ರವನ್ನೆ ಇಡಲಾಗುವುದು ಇದು ಮುಂದಿನ ದಿನಮಾನದಲ್ಲಿ ರಾಜ್ಯಾವ್ಯಾಪ್ತಿ ಈ ಚಿತ್ರವೇ ಪ್ರಚಾರಕ್ಕೆ ಬರಬಹುದು ಎಂದು ಕಾಂತರಾಜ್ ತಿಳಿಸಿದರು.

ಮದಕರಿನಾಯಕರ ಮೇ 15 ರಂದು ಜಯಂತಿ ನಡೆಯಲ್ಲಿದ್ದು ಅಂದು ವೇದಿಕೆ ಕಾರ್ಯಕ್ರಮ ನಡೆಯಲಿದೆ ಅ. 15 ರಂದು ನಡೆಯುವ ಜಯಂತೋತ್ಸವದಲ್ಲಿ ವೇದಿಕೆ ಕಾರ್ಯಕ್ರಮ ಇರದೇ ಬರೀ ಮೆರವಣಿಗೆ ಮಾತ್ರ ನಡೆಯಲಿದೆ ಎಂದ ಕಾಂತರಾಜ್, ಈ ಕಾರ್ಯಕ್ರಮದಲ್ಲಿ ಡಿಜೆಯನ್ನು ಬಳಕೆ ಮಾಡಿಕೊಳ್ಳಲಾಗುವುದು ಜೊತೆಗೆ ವಿವಿದ ಕಲಾತಂಡಗಳು ಸಹಾ ಭಾಗವಹಿಸಲಿವೆ ಎಂದರು.

ನಾಯಕ ಸಮಾಜದ ಜಿಲ್ಲಾಧ್ಯಕ್ಷರಾದ ಎಚ್.ಜೆ.ಕೃಷ್ಣಮೂರ್ತಿ ಮಾತನಾಡಿ, ಅ.13ರ ಕಾರ್ಯಕ್ರಮವನ್ನು ಯಾರಿಂದ ಉದ್ಘಾಟನೆ ಮಾಡಿಸಬೇಕೆಂಬುದನ್ನು ಸಮಾಜದ ಮುಖಂಡರು ತೀರ್ಮಾನವನ್ನು ಮುಂದಿನ  ದಿನಮಾನದಲ್ಲಿ ಮಾಡಲಾಗುವುದು ಅಲ್ಲದೆ ಅಂದಿನ ಕಾರ್ಯಕ್ರಮಕ್ಕೆ ಮಠಾಧೀಶರು ಸಹಾ ಭಾಗವಹಿಸಲಿದ್ದಾರೆ. ಇದರ ಬಗ್ಗೆ ಮಾಹಿತಿಯನ್ನು ಮುಂದಿನ  ದಿನದಲ್ಲಿ ನೀಡಲಾಗುವುದು ಎಂದರು.

ಗೋಷ್ಟಿಯಲ್ಲಿ ನಾಯಕ ಸಮಾಜದ ಗೋಪಾಲಸ್ವಾಮಿ ನಾಯಕ್, ಸೋಮು, ಸ್ವಾಮಿ, ಭಾಗವಹಿಸಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...