Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾರತ- ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ,ಶುಭಕೋರಿದ ಸಚಿವ ಸುನೀಲ್ ಕುಮಾರ್

Facebook
Twitter
Telegram
WhatsApp

 

ಬೆಂಗಳೂರು: ಪಾಕಿಸ್ತಾನ ವಿರುದ್ಧ ಪಂದ್ಯ ಗೆದ್ದು ಇಡೀ ಭಾರತವನ್ನ ಗೆಲ್ಲಿಸಲಿ ಎಂದು ಸಚಿವ ಸುನೀಲ್ ಕುಮಾರ್ ಶುಭಕೋರಿದರು. ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಭಾರತ ಗೆದ್ದು ಬರಲಿ, ಎಲ್ಲಾ ಹಂತದಲ್ಲಿ ಭಾರತ ತನ್ನ ಪ್ರದರ್ಶನವನ್ನ ತೋರಿದೆ.

ಸಹಜವಾಗಿ ಕುತೂಹಲ ನಿರೀಕ್ಷೆ ಆಸಕ್ತಿ ಇರುತ್ತೆ ಕನ್ನಡನಾಡಿನ ಪರವಾಗಿ ಶುಭಕೋರುತ್ತೇನೆ ಎಂದರು.

ಕನ್ನಡಕ್ಕೆ ನಾವು ವಿಶೇಷ ಅಭಿಯಾನ ರಾಜ್ಯಾದ್ಯಂತ ಆರಂಭ ಆಗಿದೆ. ಮಾತಾಡ್ ಮಾತಾಡ್ ಸಂಕಲ್ಪ ಇಟ್ಟಕೊಂಡು ನವೆಂಬರ್ 1ರವರೆಗೂ ಅಭಿಯಾನ ಇರುತ್ತೆ,ರಾಜ್ಯದಲ್ಲಿ ಬೇರೆ ಭಾಷೆ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ಕನ್ನಡ ಬೆಳೆಸಬೇಕಾಗಿದೆ.ಒಂದು ವಾರಗಳ ಕಾಲ ಕನ್ನಡಕ್ಕಾಗಿ ಅಭಿಯಾನ ಆರಂಭ ಆಗಿದೆ ನಾವು ಕುಟುಂಬದ ಸದಸ್ಯರ ಜೊತೆಗೆ ಕನ್ನಡ ಮಾತಾಡೋಣ‌.ಮಕ್ಕಳು ಹಾಗೂ ಕುಟುಂಬದ ನಡುವೆ ಕನ್ನಡ ಮಾತನಾಡುವುದು ಕಡಿಮೆ ಆಗ್ತಿದೆ
ಕನ್ನಡದಲ್ಲೇ ಸಹಿ ಮಾಡುವ ಅಭ್ಯಾಸ ‌ಮಾಡೋಣ, ಚರವಾಣಿ ಕನ್ನಡದಲ್ಲೇ ಕಳುಹಿಸುವ ಅಭ್ಯಾಸ ಮಾಡೋಣ
ಎಲ್ಲಾ ಜಿಲ್ಲಾ,ತಾಲೂಕಿನಲ್ಲಿ ಕನ್ನಡ ಸಾಮೂಹಿಕ ಗಾಯನ ಹಮ್ಮಿಕೊಂಡಿದ್ದೇವೆ. ಕನ್ನಡದ ಮೂರು ಗೀತೆ ಹಾಡನ್ನು ಪ್ರತಿಯೊಬ್ಬರೂ ಹಾಡಬೇಕು
ಕನ್ನಡದ ಪ್ರೇಮ ಭಾಷಣದ ವಸ್ತು ಅಲ್ಲ, ಇಂದು ಸಿಎಂ ಬಸವರಾಜ ಬೊಮ್ಮಾಯಿ‌ ನೇತೃತ್ವದಲ್ಲಿ ಅಭಿಯಾನ ಮಾಡ್ತಿದ್ದೇವೆ ಎಂದರು.

ಕನ್ನಡದಲ್ಲಿ ಸಹಿ ಅಭಿಯಾನ ವಿಚಾರವಾಗಿ ಮಾತನಾಡಿದ ಅವರು
ಕನ್ನಡದಲ್ಲಿ ಸಹಿ ಹಾಗೂ ಸುತ್ತೂಲೆ ಎರಡು ಕನ್ನಡದಲ್ಲೇ ಆಗಬೇಕು
ಇದಕ್ಕೆ ನನ್ನ ಬೆಂಬಲವಿದೆ. ಈ ಅಭಿಯಾನದ ಮೂಲಕ ಹೊಸ ರೂಪ ಪಡೆದುಕೊಂಡಿದೆ ಸ್ಪಷ್ಟಪಡಿಸುತ್ತೇನೆ.ಹಿಂದೆ ಯಾವ ರೀತಿ ಇತ್ತು ಅನ್ನೋ ಚರ್ಚೆಬೇಡ
ಮುಂದೆ ಯಾವರೀತಿ ಆಗಬೇಕು ಅನ್ನೋದನ್ನ ಚರ್ಚೆ ಮಾಡೋಣ ಎಂದರು.

ಇನ್ನೂ ಮೆಟ್ರೋದಲ್ಲಿ ಕನ್ನಡ ಕಡಗಣನೆ ವಿಚಾರವಾಗಿ ಮಾತನಾಡಿದ ಅವರು, ಕಳೆದ ಬಾರಿ ವ್ಯತ್ಯಾಸ ಆಗಿತ್ತು,ಆ ಅಧಿಕಾರಿಗಳಿಗೆ ನೊಟೀಸ್ ನ್ನ ಕೊಟ್ಟಿದ್ದೇವೆ. ಇನ್ಮುಂದೆ ಆ ರೀತಿ ಆಗದಂತೆ ಎಚ್ಚರಿಕೆವಹಿಸುತ್ತೇವೆ ಎಂದರು. ರಾಜ್ಯದಲ್ಲಿ ಕೇಂದ್ರ ಸರ್ಕಾರದ ಕಾರ್ಯಕ್ರಮದಲ್ಲಿ ಕನ್ನಡ ಕಡಗಣನೆ ವಿಚಾರವಾಗಿ ಮಾತನಾಡಿದ ಸಚಿವರು, ಕರ್ನಾಟಕದಲ್ಲಿ ಕನ್ನಡವೇ ಅಳವಡಿಸಬೇಕು ನಾವೂ ಕೂಡ ಹತ್ತಾರು ಬಾರಿ ಮನವಿ ಕೂಡ ಮಾಡಿದ್ದೇವೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!