ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಶ್ರೀಮತಿ ಸಿ.ಕೆ. ಸಂಧ್ಯಾರವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರಧಾನ

1 Min Read

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.23 : ಉತ್ತಮ ಸೇವೆಗಾಗಿ ಜಿಲ್ಲಾ ಗೃಹ ರಕ್ಷಕ ದಳದ ಕಮಾಂಡೆಂಟ್ ಸಿ.ಕೆ ಸಂದ್ಯಾರವರಿಗೆ ಬೆಂಗಳೂರಿನ ಜಯನಗರದ  ಮುಂಢ್ಕರ್ ಅಗ್ನಿಶಾಮಕ  ಅಕಾಡೆಮಿ ಸಂಭಾಗಣದಲ್ಲಿ ಗೃಹ ಸಚಿವರಾದ ಪರಮೇಶ್ವರ್‍ರವರು ಮುಖ್ಯ ಮಂತ್ರಿಗಳ ಚಿನ್ನದ ಪದಕ ಪ್ರದಾನ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಅಭಿನಂದನೆ : ಚಿತ್ರದುರ್ಗ ಜಿಲ್ಲಾ ಗೃಹರಕ್ಷಕದಳದ ಕಾಮೆಂಡೆಂಟ್ ಸಿ.ಕೆ. ಸಂಧ್ಯಾರವರ ಸೇವೆ ಪರಿಗಣಿಸಿ ಚಿನ್ನದ ಪದಕ ಲಭಿಸಿದಕ್ಕೆ ಗೃಹಕಛೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯರವರು ಅಭಿನಂದನೆ ಸಲ್ಲಿಸಿದರು.

ಮಾದಾರ ಶ್ರೀಗಳಿಂದ ಅಭಿನಂದನೆ : ಮಾದಾರ ಗುರುಪೀಠದಲ್ಲಿ ನಡೆದ ಸರಳ ಸಮಾರಂಭದಲ್ಲಿ ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಶ್ರೀಮತಿ ಸಿ.ಕೆ. ಸಂಧ್ಯಾರವರಿಗೆ ಮಾದಾರ ಗುರುಪೀಠದ ಚನ್ನಯ್ಯ ಸ್ವಾಮೀಜಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮೈಲಾರಲಿಂಗೇಶ್ವರ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಬಿ.ಟಿ.ಮಲ್ಲಯ್ಯ  ಟಿ.ಎಂ. ಪ್ರದೀಪ್‍ಕುಮಾರ್ ಹಾಗೂ ಜನಸಾಗರ ಪತ್ರಿಕೆ ಸಂಪಾದಕ ಡಿ.ಎನ್.ಕೃಷ್ಣಮೂರ್ತಿ ಉಪಸ್ಥಿತರಿದ್ದರು.

ಗೃಹರಕ್ಷಕ ಸಿಬ್ಬಂದಿಯವರಿಂದ ಅಭಿನಂದನೆ : ಚಿನ್ನದ ಪದಕ ಪ್ರಶಸ್ತಿ ಪಡೆದ ಸಿ.ಕೆ.ಸಂಧ್ಯಾರವರಿಗೆ ಗೃಹ ರಕ್ಷಕ ದಳದ ಸಿಬ್ಬಂದಿ ವರ್ಗದವರು ಕಛೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಿದರು.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks