Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮಂಗಳವಾರ ಬೆಂಗಳೂರು ಬಂದ್.. ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ..!

---Advertisement---

ಕಾವೇರಿಗಾಗಿ ಹೋರಾಟ ನಡೆಯುತ್ತಲೇ ಇದೆ. ಆದರೆ ಇದರ ನಡುವೆ ರಾಜ್ಯ ಸರ್ಕಾರ, ಸುಪ್ರೀಂ ಆದೇಶದಂತೆ ತಮಿಳುನಾಡಿಗೆ ನೀರನ್ನು ಬಿಡುತ್ತಲೆ ಇದೆ. ಇದನ್ನು ವಿರೋಧಿಸಿ, ಈಗಾಗಲೇ ಮಂಗಳವಾರದಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಇದೀಗ ಕರ್ನಾಟಕದ ಬಂದ್ ಗೂ ಪ್ಲ್ಯಾನ್ ನಡೆಸಲಾಗಿದೆ.

ಕನ್ನಡ ಪರ ಸಂಘಟನೆಗಳು ಈ ನಿರ್ಧಾರ ಮಾಡಿದ್ದಾರೆ. ಕಾವೇರಿ ನೀರು ಬರೀ ಬೆಂಗಳೂರಿಗೆ ಮಾತ್ರ ಸೀಮಿತವಲ್ಲ. ಬರೀ ರಾಜ್ಯಕ್ಕೆ ಸೀಮಿತವಲ್ಲ. ಈ ಹೋರಾಟ ಕೇಂದ್ರ ಸರ್ಕಾರಕ್ಕೆ ತಲುಪಬೇಕು. ಹೀಗಾಗಿ ಅಖಂಡ ಕರ್ನಾಟಕ ಬಂದ್ ಮಾಡಬೇಕು ಎಂದು ಕನ್ನಡ ಒಕ್ಕೂಟ ತೀರ್ಮಾನ ಮಾಡಿದೆ. ಸೆಪ್ಟೆಂಬರ್ 29ರಂದು ಬಂದ್ ಗೆ ಕರೆ ನೀಡಿದ್ದಾರೆ.

ಕಾವೇರಿ ನೀರು ಕೂಡ ದಿನೇ ದಿನೇ ಕೂಡ ಕುಸಿತ ಕಾಣುತ್ತಿದೆ. ಜಲಾಶಯದಲ್ಲಿ ನೀರಿನ ಮಟ್ಟ ಕುಸಿಯುತ್ತಿರುವುದೇ ರೈತರಿಗೆ ಆತಂಕ ಸೃಷ್ಡಿಯಾಗಿದೆ. ಹೀಗೆ ತಮಿಳುನಾಡು ಕೇಳಿದೆ ಅಂತ ನೀರು ಬಿಡುತ್ತಾ ಹೋದರೆ, ಬೆಂಗಳೂರಿಗರಿಗೆ ಕುಡಿಯುವ ನೀರಿಗೂ ಸಮಸ್ಯೆ ಎದುರಾಗಲಿದೆ. ಹೀಗಾಗಿ ರೈತರು ಕೃಷಿ ಹಾಗೂ ಕುಡಿಯುವ ನೀರನ್ನು ಉಳಿಸಲು ರೈತರು ಹೋರಾಟ ನಡೆಸುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...