Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಂಗ್ರೆಸ್ ಪಕ್ಷದ 6ನೇ ಗ್ಯಾರಂಟಿ ಮದ್ಯಭಾಗ್ಯ : ಕುಮಾರಸ್ವಾಮಿ ಆಕ್ರೋಶ

---Advertisement---

ಬೆಂಗಳೂರು: ಕರ್ನಾಟಕ ರಾಜ್ಯವು ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ ಐಟಿ-ಬಿಟಿಗೆ ಪ್ರಸಿದ್ಧಿ. ಇನ್ನು ಮುಂದೆ ಇದು ಬದಲಾಗಬಹುದು! ಕಾರಣವಿಷ್ಟೇ; ಕಾಂಗ್ರೆಸ್ ಸರಕಾರ ‘ಕರ್ನಾಟಕವನ್ನು ಕುಡುಕರ ತೋಟ’ವನ್ನಾಗಿ ಮಾಡಲಿದೆ!!

ಚುನಾವಣೆಗೆ ಮುನ್ನ ‘ಸರ್ವಜನಾಂಗದ ಶಾಂತಿಯ ತೋಟ’ ಎನ್ನುತ್ತಿದ್ದರು, ಗೆದ್ದ ನಂತರ ‘ಕರ್ನಾಟಕ ಕುಡುಕರ ತೋಟ’ ಎನ್ನುತ್ತಿದ್ದಾರೆ. ಇದು @INCKarnataka ಸರಕಾರದ ಸಂಕಲ್ಪ.

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರಕಾರದ್ದು. ಒಂದೆಡೆ ಮನೆಮನೆಗೂ ಗೃಹಜ್ಯೋತಿ ಎಂದ್ಹೇಳಿ, ಈಗ ಮನೆಮನೆಗೂ ‘ಮದ್ಯಭಾಗ್ಯ’ ನೀಡಲು ಹೊರಟಿದೆ. ಸರಕಾರವು ಧನಪಿಶಾಚಿ ಅವತಾರವೆತ್ತಿಅಬಕಾರಿ ಹೆಚ್ಚಿಸಿಕೊಳ್ಳಲು ಈಗ ಮದ್ಯ ಸಮಾರಾಧನೆಗೆ ಶ್ರೀಕಾರ ಹಾಡಿದೆ. ಇದು 6ನೇ ಗ್ಯಾರಂಟಿ!!

ಖೊಟ್ಟಿ ಗ್ಯಾಟಂಟಿಗಳಿಂದ ಜನರನ್ನು ಯಾಮಾರಿಸಿದ್ದು ಸಾಲದೆಂಬಂತೆ ಪ್ರತೀ ಪಂಚಾಯಿತಿಯಲ್ಲೂ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ನಡೆಸಿರುವುದು ನಾಚಿಕೆಗೇಡು.
ಅಕ್ಕಿ, ಬೇಳೆ, ದವಸಧಾನ್ಯ, ಹಣ್ಣು ತರಕಾರಿ, ಹಾಲು-ಮೊಸರು ಸಿಗುವ ಸೂಪರ್ ಮಾರುಕಟ್ಟೆಗಳಲ್ಲೂ ಮುಕ್ತವಾಗಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದು ಅಸಹ್ಯದ ಪರಮಾವಧಿ. ಇದಾ ಸಮಾಜವಾದ?

3,000 ಜನಸಂಖ್ಯೆಯುಳ್ಳ ಪ್ರತೀ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾರ್ ತೆಗೆದು ಮನೆಹಾಳು ಮಾಡಲಿದೆ ಸರಕಾರ.
ಸುಳ್ಳು ಗ್ಯಾರಂಟಿಗಳನ್ನು ನಂಬಿ ಮೋಸ ಹೋದ ಮಹಿಳೆಯರಿಗೆ ಕರ್ನಾಟಕದಲ್ಲಿ ಕೇಡುಗಾಲ ಶುರುವಾಗಿದೆ. ಅವರ ಸೌಭಾಗ್ಯಕ್ಕೆ ಎದುರಾಗಿದೆ ಸಂಚಕಾರ. ಇದು ಮನೆಹಾಳು ಸರಕಾರ.

ನಾರಿಯರಿಗೆ ‘ಶಕ್ತಿ’ ತುಂಬುತ್ತೇವೆ ಎಂದ ಸರಕಾರ, ಈಗ ಅವರ ಬಾಳಿಗೆ ಬೆಂಕಿ ಹಾಕುತ್ತಿದೆ. ‘ಗೃಹಲಕ್ಷ್ಮೀ’ ಎಂದ ಸರಕಾರ ಅವರ ಬಾಳಿಗೆ ಗ್ರಹಣವಾಗಿದೆ. ‘ಗೃಹಜ್ಯೋತಿ’ ಎಂದ ಸರಕಾರ ಅವರ ಬಾಳಜ್ಯೋತಿಯನ್ನೇ ನಂದಿಸುತ್ತಿದೆ. ‘ಅನ್ನಭಾಗ್ಯ’ ಎಂದ ಸರಕಾರ, ಈಗ ‘ಮದ್ಯಭಾಗ್ಯ’ ಎನ್ನುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment