Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾನು ಮುಸ್ಲಿಂ ಪರ ನಿಂತೆ.. ಆದರೆ ಅವರು : ಕುಮಾರಸ್ವಾಮಿ ಹೇಳಿದ್ದೇನು..?

---Advertisement---

 

ಬೆಂಗಳೂರು: ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಜೆಡಿಎಸ್ ಲೋಕಸಭೆಯನ್ನು ಎದುರಿಸಲು ಸಜ್ಜಾಗಿದೆ. ಆದರೆ ಈ ಮೈತ್ರಿಯನ್ನು ಮುಸ್ಲಿಂ ನಾಯಕರು ವಿರೋಧಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಈ ಮೈತ್ರಿ ನನಗಾಗಲೀ ಅಥವಾ ನನ್ನ ಕುಟುಂಬಕ್ಕಾಗಲೀ ಅಲ್ಲ. ರಾಜ್ಯದ ಜನರ ಹಿತಕ್ಕಾಗಿ. ವಿಜಯ ದಶಮಿಯಂದು ನಾವೂ ಎಲ್ಲವನ್ನು ಚರ್ಚಿಸುತ್ತೇವೆ. ಬಿಜೆಪಿ ರಾಷ್ಟ್ರೀಯ ನಾಯಕರ ಜೊತೆಗೆ ಮಾತನಾಡಲು ಹಾಗೂ ಅವರ ರಾಜ್ಯದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಎಲ್ಲಾ 28 ಲೋಕಸಭಾ ಸ್ಥಾನಗಳನ್ನು ಗೆಲ್ಲುವುದು ನಮಗೆ ಮುಖ್ಯವಾಗಿದೆ. ಅದಕ್ಕಾಗಿಯೇ ಜಂಟಿಯಾಗಿ ಮಾರ್ಗ ನಕ್ಷೆ ರೂಪಿಸುತ್ತೇವೆ. ರಾಜ್ಯದಲ್ಲಿ ಜಂಟಿ ಪ್ರತಿಪಕ್ಷವಾಗಿ ಕೆಲಸ ಮಾಡುತ್ತೇವೆ. ಯಾವುದೇ ಕಾರ್ಯಾಚರಣೆಯ ಅಗತ್ಯವಿಲ್ಲ. ಹೆಚ್ಚಿನ ಉಪಮುಖ್ಯಮಂತ್ರಿಗಳ ವಿಚಾರ ಸದ್ದಾಗುತ್ತಿರುವುದನ್ನು ಗಮನಿಸಿದರೆ ಸರ್ಕಾರ ಅಸ್ಥಿರವಾಗಿದೆ ಎಂಬುದು ಇದರಿಂದಾನೇ ತಿಳಿಯುತ್ತಿದೆ. ನಮ್ಮ ಕೈಯಲ್ಲಿ ಏನೂ ಇರುವುದಿಲ್ಲ. ಮಹಾರಾಷ್ಟ್ರದಲ್ಲಿ ಏನಾಯಿತು ಎಂದು ಯಾರೂ ನಿರೀಕ್ಷೆ ಮಾಡಲು ಸಾಧ್ಯವಾಗಲಿಲ್ಲ ಎಂದಿದ್ದಾರೆ.

ಇನ್ನು ಮುಸ್ಲಿಂ ನಾಯಕರು ಜೆಡಿಎಸ್ ತೊರೆಯುತ್ತಿರುವ ಬಗ್ಗೆ ಮಾತನಾಡಿದ್ದು, ನಾನು ಈ ನಾಯಕರನ್ನು ಕೇಳಲು ಬಯಸುತ್ತೇನೆ. ಪಕ್ಷಕ್ಕೆ ಇವರ ಕೊಡುಗೆ ಏನು..? ಅವರು ನಿರ್ಗಮನಕ್ಕೆ ಮೈತ್ರಿಯನ್ನು ಕಾರಣವೆಂದು ಹೇಳುತ್ತಿದ್ದಾರೆ. ಹೆಚ್ ಡಿ ದೇವೇಗೌಡ ಅವರು ಈ ಸಮುದಾಯಕ್ಕೆ ಶೇ. 4 ರಷ್ಟು ಮೀಸಲಾತಿ ನೀಡಿದ್ದಾರೆ. ಅವರ ವಿರುದ್ಧ ಘಟಾನುಘಟಿಗಳು ನಿಂತಾಗ, ಕಾಂಗ್ರೆಸ್ ಮೌನವಾಗಿದ್ದಾಗ ಅವರ ಪರವಾಗಿ ನಿಂತಿದ್ದು ನಾವೂ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment