ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದಿಲ್ಲ ಎಂದು ಆಗ್ರಹಿಸಿ ಇಂದು ಹಲವಾರು ಸಂಘಟನೆಗಳು ಪ್ರತಿಭಟಿಸುತ್ತಿವೆ. ಈ ಮಧ್ಯೆ ಮಾಜಿ ಪ್ರಧಾನಿ ದೇವೇಗೌಡ್ರು ಸುದ್ದಿಗೋಷ್ಟಿ ನಡೆಸಿ, ಕಾವೇರಿ ವಿಚಾರಕ್ಕೆ ಕಣ್ಣೀರು ಹಾಕಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಅಣೆಕಟ್ಟೆಗೆ ಹೋಗಿ ಖುದ್ದು ಪರಿಶೀಲನೆ ನಡೆಸಿದ್ದಾರೆ. ಅಲ್ಲಿನ ವಿವರ ನೀಡಿದ ಬಳಿಕ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ತಮಿಳುನಾಡಿನವರೂ ಬದುಕಬೇಕು, ನಾವೂ ಬದುಕಬೇಕು. ಹೊರರಾಜ್ಯದವರನ್ನು ಕಳುಹಿಸಿ ಎಂದು ಹೇಳಿದ್ದೆ. ನನ್ನ ಶಕ್ತಿ ಮೀರಿ ರಾಜ್ಯಸಭೆಯಲ್ಲಿ ಮಾತನಾಡಿದ್ದೇನೆ.
ನಾಳೆ ಬಂದ್ ವಿಚಾರಕ್ಕೆ ಯಾರ್ ಯಾರು ಏನೇನು ಮಾತನಾಡುತ್ತಾರೆ ಎಂಬುದು ಮುಖ್ಯವಲ್ಲ. ರಾಜ್ಯದ ಜನರನ್ನು ಉಳಿಸಲು 91ನೇ ವಯಸ್ಸಿನಲ್ಲಿ ಮಾತನಾಡಿದೆ. ನಾಳೆ ಬಂದ್ ನಡೆದು ಹೋಗಲಿ. ಕುಮಾರಸ್ವಾಮಿ ಅವರು ಬಂದ್ ಗೆ ಬೆಂಬಲ ಸೂಚಿಸಿದ್ದಾರೆ. ಬಂದ್ ಶಾಂತಿಯುತವಾಗಿ ನಡೆಯಲಿ. ಕಾವೇರಿ ವಿಚಾರಕ್ಕೆ ಕೇಂದ್ರ ಜಲಶಕ್ತಿ ಇಲಾಖೆ ಅರ್ಜಿ ಸಲ್ಲಿಸಬೇಕು. ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಾಕಬೇಕು. ಕಾವೇರಿ ವ್ಯಾಪ್ತಿಯ ಸಮಸ್ಯೆ ತಿಳಿಯಲು ಕೇಂದ್ರ ಸಮಿತಿ ಕಳುಹಿಸಲಿ. ಈ ಸಂಬಂಧ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ಪ್ರಧಾನಿ ಮೋದಿ ಅವರು ನನ್ನ ಮನವಿಯನ್ನು ಪುರಸ್ಕರಿಸುತ್ತಾರೆ ಎಂಬ ವಿಶ್ವಾಸ ನನಗೆ ಇದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಅವರು ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್