Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರುವಲ್ಲಿ ಪ್ರತಿಭಾ ಕಾರಂಜಿ ಸಹಕಾರಿ : ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 25 : ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಹೊರತರುವಲ್ಲಿ ಪ್ರತಿಭಾ ಕಾರಂಜಿ ಸಹಕಾರಿಯಾಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ಹೇಳಿದರು.

ಶಿಕ್ಷಣ ಇಲಾಖೆ ವತಿಯಿಂದ ಸಂತ ಜೋಸೆಫ್ ಕಾನ್ವೆಂಟ್ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಗಾಟಿಸಿ ಮಾತನಾಡಿದರು.

ಮಕ್ಕಳಲ್ಲಿರುವ ಸೃಜನಶೀಲತೆ, ಕಲೆ, ಸಾಹಿತ್ಯ, ಸಂಸ್ಕøತಿಯನ್ನು ಗುರುತಿಸಿ ಹೊರತೆಗೆಯುವ ಕೆಲಸ ಶಿಕ್ಷಕರುಗಳಿಂದ ಮಾತ್ರ ಸಾಧ್ಯ. ಪ್ರತಿಭಾ ಕಾರಂಜಿಯ ಮೂಲಕ ಮಕ್ಕಳು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಪರಿಣಾಮಕಾರಿಯಾಗಲಿದೆ. ಕ್ಲಸ್ಟರ್ ಹಂತದಿಂದ ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸುವ ಅವಕಾಶಗಳು ಮಕ್ಕಳಿಗೆ ಸಿಗುತ್ತದೆ. 2002 ರಲ್ಲಿ ಆರಂಭಗೊಂಡ ಪ್ರತಿಭಾ ಕಾರಂಜಿ ಪ್ರತಿವರ್ಷವೂ ನಿರಂತರವಾಗಿ ನಡೆಯುತ್ತಿದೆ ಎಂದರು.

ತೀರ್ಪುಗಾರರು ಮಕ್ಕಳಲ್ಲಿನ ಕೌಶಲ್ಯವನ್ನು ಗುರುತಿಸಿ ಯಾವುದೇ ಲೋಪವಿಲ್ಲದೆ ಪ್ರಾಮಾಣಿಕವಾಗಿ ತೀರ್ಪು ನೀಡಬೇಕು ಎಂದು ಸೂಚಿಸಿದರು.

ತಾಲ್ಲೂಕಿನ ಎಂಟು ನೂರಕ್ಕೂ ಹೆಚ್ಚು ಮಕ್ಕಳು ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆಯನ್ನು ಹೊರಸೂಸಿದರು.

162 ತೀರ್ಪುಗಾರರು ಭಾಗವಹಿಸಿದ್ದರು. ನೇಗಿಲು ಹೊಡೆಯುವ ರೈತ, ಯಕ್ಷಗಾನ, ರಾಜಾವೀರ ಮದಕರಿನಾಯಕ, ಛದ್ಮವೇಷ ಹೀಗೆ ನಾನಾ ಬಗೆಯ ವೇಷಧರಿಸಿ ನೂರಾರು ಮಕ್ಕಳು ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!