Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುಮಾರಸ್ವಾಮಿ, ಮುಸ್ಲಿಂ ಸಮುದಾಯ ವಿರೋಧಿ: ಜಮೀರ್

Facebook
Twitter
Telegram
WhatsApp

ವಿಜಯನಗರ : ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಕೇವಲ ಸಿದ್ಧರಾಮಯ್ಯ ವಿರೋಧಿ ಮಾತ್ರವಲ್ಲ, ಮುಸ್ಲಿಂ ಸಮುದಾಯದ ವಿರೋಧಿಯೂ ಹೌದು ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಆರೋಪಿಸಿದ್ದಾರೆ.

ವಿಜಯಪುರ ಜಿಲ್ಲೆಯ ಮಾತನಾಡಿದ ಅವರು, ಕುಮಾರಸ್ವಾಮಿಗೆ ಅಲ್ಪ ಸಂಖ್ಯಾತರನ್ನು ಬಲಿ ಆಗಿಸುವುದೊಂದೇ ಟಾರ್ಗೆಟ್ ಆಗಿದೆ. ಮುಸ್ಲಿಮರನ್ನು ಮುಗಿಸುವುದು ಅವರ ದುರುದ್ದೇಶವಾಗಿದೆ .ಅಲ್ಪ ಸಂಖ್ಯಾತರ ಜೊತೆಯಲ್ಲೇ ಸಿದ್ದರಾಮಯ್ಯ ಅವರನ್ನೂ ಕುಮಾರಸ್ವಾಮಿ ಟಾರ್ಗೆಟ್ ಮಾಡುತ್ತಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಅವರು ಎಷ್ಟು ಜನ ಮುಸ್ಲಿಮರನ್ನು ಎಂ ಎಲ್ ಎ ಮಾಡಿದ್ದಾರೆ..? ಎಷ್ಟು ಅಲ್ಪ ಸಂಖ್ಯಾತರನ್ನು ಮಂತ್ರಿ ಮಾಡಿದ್ದಾರೆ? ಇದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದು ಕಿಡಿ ಕಾರಿದರು.

ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಾರ್ವತ್ರಿಕ ಚುನಾವಣೆಯಲ್ಲಿ ಯಾಕೆ ಮುಸ್ಲಿಂ ಅಭ್ಯರ್ಥಿಯನ್ನು ಹಾಕುವುದಿಲ್ಲ ಎಂದು ಪ್ರಶ್ನಿಸಿದ ಜಮೀರ್, ಉಪ ಚುನಾವಣೆಯಲ್ಲಿ ಮಾತ್ರ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾರಣವೇನು ಎಂದು ಕೇಳಿದರು.

ನಾನು ಕುಮಾರಸ್ವಾಮಿ ಅವರಿಗೆ ಬಹಳ ಆತ್ಮಿಯನಾಗಿದ್ದೆ. ಆದರೂ ನನಗೆ ಕೇವಲ ವಕ್ಫ್ ಮತ್ತು ಹಜ್ ಖಾತೆ ನೀಡಿದರು. ಈಗ ಹಾನಗಲ್‌ನಲ್ಲೂ ಮುಸ್ಲಿಂ ಅಭ್ಯರ್ಥಿ ಹಾಕಿದ್ದಾರೆ. ಈ ಹಿಂದೆ ಬಸವ ಕಲ್ಯಾಣದಲ್ಲೂ ಮುಸ್ಲಿಂ ಅಭ್ಯರ್ಥಿ ಹಾಕಿದ್ದರು. ಅಲ್ಲಿ ಜೆಡಿಎಸ್‌ಗೆ ಸುಮಾರು 11 ಸಾವಿರ ಮತಗಳು ಬಂದಿದ್ದವು. ಆ ಮತಗಳು ಎಚ್. ಡಿ. ಕುಮಾರಸ್ವಾಮಿ ಅವರಿಂದ ಬಂದಿಲ್ಲ. ಬದಲಾಗಿ, ಜೆಡಿಎಸ್ ಅಭ್ಯರ್ಥಿಯಾಗಿದ್ದ ದರ್ಗಾವೊಂದರ ಪೀಠಾಧಿಪತಿಗಳ ವೈಯಕ್ತಿಕ ವರ್ಚಸ್ಸಿನಿಂದ ವೋಟುಗಳು ಬಂದಿದ್ದವು ಎಂದು ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಜೊತೆಗೆ ರೇವಣ್ಣ ಮೇಲೂ ದೂರು ದಾಖಲು : ಮನೆ ಕೆಲಸದಾಕೆಯಿಂದ ಆರೋಪ..!

ಹಾಸನ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಇರುವ ಪೆನ್ ಡ್ರೈವ್ ಗಳು ಹಾಸನದಾದ್ಯಂತ ಸದ್ದು ಮಾಡುತ್ತಿವೆ. ಈ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಜ್ವಲ್ ರೇವಣ್ಣ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

error: Content is protected !!