ಚಾಮರಾಜನಗರ: ಸಿಎಂ ಸಿದ್ದರಾಮಯ್ಯ ಅವರು ಇಂದು ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಧಾರ್ಮಿಕ ಕ್ಷೇತ್ರದ ಅಭಿವೃದ್ದಿಗಾಗಿ ಹೊರಟಿರುವ ಸಿದ್ದರಾಮಯ್ಯ ಸರ್ಕಾರ, ಇಂದು ಮಲೆಮಹದೇಶ್ವರ ಬೆಟ್ಟದ ಪ್ರಾಧಿಕಾರದ ಜೊತೆ ಸಭೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಾಧಿಕಾರದ ಅಧಿಕಾರಿಗಳು ಸಹ ಸಮಸ್ಯೆಗಳ ವಿಚಾರವನ್ನು ಸಿಎಂ ಮುಂದಿಡಲಿದ್ದಾರೆ.
* ಮಾದಪ್ಪನಿಗೆ ಸೇರಿರಯವ 122 ಎಕರೆ ಜಮೀನಿನಲ್ಲಿ ಕೆಲವರು ಒತ್ತುವರಿ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಅದನ್ನು ಮಾದಪ್ಪನ ಪ್ರಾಧಿಕಾರಕ್ಕೆ ಸಂಪೂರ್ಣ ಹಿಡಿತ ನೀಡಬೇಕು ಎಂದು ಮನವಿ ಮಾಡಲಿದ್ದಾರೆ.
* ದೇವಲಾಯದ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಕೂಡ ಹೆಚ್ಚಾಗಿದೆ. ಇದರಿಂದ ಭಕ್ತರಿಗೂ ಕಿರಿಕಿರಿ. ಅದನ್ನು ಕೂಡ ತಪ್ಪಿಸುವಂತೆ ಮನವಿ ಮಾಡಲಿದ್ದಾರೆ.
* ಇನ್ನು ಕಾವೇರಿ ಕೊಳ್ಳದಲ್ಲಿ ನೀರು ಬತ್ತುತ್ತಾ ಹೋಗುತ್ತಿದೆ. ಹೀಗಾಗಿ ನೀರಿನ ಸರಬರಾಜು ಕಡಿಮೆಯಾಗಿದೆ. ಅದಕ್ಕೂ ಪರ್ಯಾಯ ಮಾರ್ಗ ಕಲ್ಪಿಸಿಕೊಡುವುದರ ವಿಚಾರವಾಗಿ ಮನವಿ ಮಾಡಲಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಚಾಮರಾಜನಗರಕ್ಕೆ ಭೇಟಿ ನೀಡಿ, ಮಲೆಮಹದೇಶ್ವರ ಬೆಟ್ಟದಲ್ಲಿ ದೇವರ ದರ್ಶನ ಪಡೆದು, ಬಳಿಕ ಅಧಿಕಾರ ಜೊತೆಗೆ ಸಭೆ ನಡೆಸಲಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















