Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹನಿ ನೀರು ತಮಿಳುನಾಡಿಗೆ ಹೋಗದಂತೆ ಮಾಡುವ ತಾಕತ್ತು ಕನ್ನಡಿಗರಿಗೆ ಇದೆ : ಪೂಜಾ ಗಾಂಧಿ

Facebook
Twitter
Telegram
WhatsApp

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುವ ವಿಚಾರಕ್ಕೆ ಇಂದು ಕನ್ನಡಪರ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ರಾಜ್ಯಾದ್ಯಂತ ಬಂದ್ ಗೆ ಬೆಂಬಲ ವ್ಯಕ್ತವಾಗಿದೆ. ಕನ್ನಡ ಚಿತ್ರರಂಗ ಕೂಡ ಕಾವೇರಿಗಾಗಿ ಕೈ ಜೋಡಿಸಿದೆ. ಹಲವಾರು ಕಲಾವಿದರು ಪ್ರತಿಭಟನೆಯಲ್ಲಿ ಭಾಗಿಯಾಗಿವೆ.

ಈ ವೇಳೆ ನಟಿ ಪೂಜಾಗಾಂಧಿ ಮಾತನಾಡಿದ್ದು, ಕನ್ನಡಿಗರನ್ನು ಕೆಣಕಿದರೆ ಹುಷಾರ್. ಒಂದು ಹನಿ‌ನೀರನ್ನು ತಮಿಳುನಾಡಿಗೆ ಬಿಡದಂತೆ ಮಾಡುವ ತಾಕತ್ತು ಕನ್ನಡಿಗರಿಗೆ ಇದೆ. ಸುಮಾರು ಹನ್ನೆರಡು ವರ್ಷದ ಹಿಂದೆ ಇಲ್ಲೆ ಒಂದು ಹೋರಾಟದಲ್ಲಿ ಭಾಗಿಯಾಗಿದ್ದೆವು. ಕನ್ನಡಿಗರಿಗೆ ಸಹನೆ ಇದೆ. ಆದರೆ ಪರೀಕ್ಷೆ ಮಾಡುವುದಕ್ಕೆ ಹೋಗಬೇಡಿ. ನಮ್ಮ ಕರ್ನಾಟಕ ಸರ್ಕಾರ ರೈತರ ಸಮಸ್ಯೆ ಬಗ್ಗೆ ಚರ್ಚೆ ಮಾಡಬೇಕು. ನಮ್ಮ ರೈತರಿಗೆ ಏನಾದರೂ ಆಗಲಿ, ತಮಿಳುನಾಡು ರೈತರು ಮಾತ್ರ ಚೆನ್ನಾಗಿರಲಿ ಎಂದು ನಮ್ಮನ್ನು ಕೆಣಕಿದರೆ ಸುಮ್ಮನೆ ಇರುವುದಿಲ್ಲ.

ಬೆಳ್ಳಿಯ ಬಾಗಿಲು, ಚಿನ್ನದ ದೇಗುಲ ಒಳಗಡೆ ಬಹು ಮುತ್ತುರತ್ನ. ಬೀಗದ ಕೈತಂದು ಬಾಗಿಲನ್ನು ತೆರೆಯಲು ನೀನೊಮ್ಮೆ ಪ್ರಯತ್ನ ಮಾಡು. ಎಲ್ಲಾ ಖಜಾನೆಗಳಿಗೆ ಒಂದು ಬೀಗದ ಕೈ ಇರುವಂತೆ ಎಲ್ಲಾ ಸಮಸ್ಯೆಗಳಿಗೂ ಒಂದು ಪರಿಹಾರ ಇದ್ದೆ ಇರುತ್ತೆ ಎಂದು ಪೂಜಾ ಗಾಂಧಿ ಕವಿ ಪರಮೇಶ್ವರ ಭಟ್ ಅವರ ಮಾತುಗಳನ್ನು ಹೇಳಿದ್ದಾರೆ. ಹಾಗೇ ಇನ್ನು ಮುಂದೆ ಒಳ್ಳೆಯ ಮಳೆಯಾಗಲಿ. ಎರಡು ರಾಜ್ಯದ ರೈತರಿಗೆ ಒಳೀತಾಗಲಿ ಎಂದೇ ಬಯಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!