Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

66 ನೇ ವರ್ಷದ ಪ್ರಸನ್ನ ಗಣಪತಿಯ ಮೆರವಣಿಗೆ ಮಹೋತ್ಸವಕ್ಕೆ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಚಾಲನೆ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.29 : ನಗರದ ಆನೆಬಾಗಿಲು ಬಳಿಯಿರುವ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಟಾಪಿಸಲಾಗಿರುವ 66 ನೇ ವರ್ಷದ ಪ್ರಸನ್ನ ಗಣಪತಿಯ ಮೆರವಣಿಗೆ ಮಹೋತ್ಸವಕ್ಕೆ ಶಾಸಕ ಕೆ.ಸಿ.ವೀರೇಂದ್ರಪಪ್ಪಿರವರು ಶುಕ್ರವಾರ ಸಂಜೆ ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು.

ಆನೆಬಾಗಿಲಿನಿಂದ ಹೊರಟ ಪ್ರಸನ್ನ ಗಣಪತಿ ಮೆರವಣಿಗೆ ಗಾಂಧಿವೃತ್ತ, ಧರ್ಮಶಾಲಾ ರಸ್ತೆ, ದೊಡ್ಡಪೇಟೆ, ಚಿಕ್ಕಪೇಟೆ, ಬುರುಜನಹಟ್ಟಿ, ಹೊಳಲ್ಕೆರೆ ರಸ್ತೆ ಮೂಲಕ ಸಾಗಿತು. ರಾತ್ರಿ ಹನ್ನೊಂದು ಗಂಟೆಗೆ ಚಂದ್ರವಳ್ಳಿಯಲ್ಲಿ ವಿಸರ್ಜಿಸಲಾಯಿತು.

ನಾಸಿಕ್‍ಡೋಲು, ಡೊಳ್ಳುಕುಣಿತ, ಕೀಲುಕುದರೆ, ಅನೇಕ ಕಲಾ ತಂಡಗಳು, ಶಾರದ ಬ್ರಾಸ್‍ಬ್ಯಾಂಡ್ ಗುರುಮೂರ್ತಿಯವರಿಂದ ವಾದ್ಯಗೋಷ್ಠಿ ಮೆರವಣಿಗೆಯಲ್ಲಿ ಪ್ರಮುಖ ಆಕರ್ಷಣೆಯಾಗಿತ್ತು.

ಪ್ರಸನ್ನ ಗಣಪತಿ ಸೇವಾ ಸಮಿತಿ ಅಧ್ಯಕ್ಷ ಗೋಪಾಲ್‍ರಾವ್ ಜಾಧವ್, ಉಪಾಧ್ಯಕ್ಷ ರಾಜ್‍ಕುಮಾರ್, ನಾಗರಾಜ್‍ಬೇದ್ರೆ, ಕಾರ್ಯದರ್ಶಿ ಶಿವಕುಮಾರ್, ಖಜಾಂಚಿ ಆನಂದ್, ನಿರ್ದೇಶಕರುಗಳಾದ ವೆಂಕಟೇಶ್, ಶಂಭು, ಯಶವಂತ್, ಕಾರ್ತಿಕ್, ರಮೇಶ್, ನಾರಾಯಣರಾವ್, ಶ್ಯಾಂಪ್ರಸಾದ್ ಇನ್ನು ಅನೇಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಮೆರವಣಿಗೆಯುದ್ದಕ್ಕೂ ನೂರಾರು ಭಕ್ತರು ಜಮಾಯಿಸಿ ಪ್ರಸನ್ನ ಗಣಪತಿಯ ದರ್ಶನ ಪಡೆದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

ಸಾಲ ಇರುವ ಜಮೀನು ನೀಡಿ ಜ್ಯೂ.ಎನ್ಟಿಆರ್ ಗೆ ಮೋಸ ಮಾಡಿದ ಯುವತಿ ವಿರುದ್ಧ ನಟ ದೂರು..!

ಜ್ಯೂ. NTR ಆಸ್ತಿಯೊಂದನ್ನು ಖರೀದಿಸಲು ಹೋಗಿ ಮೋಸ ಹೋಗಿದ್ದಾರೆ. ಇದೀಗ ಮೋಸ ಮಾಡಿದ ಯುವತಿ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ. ಆಸ್ತಿ ಮೇಲೆ ಕೋಟ್ಯಾಂತರ ರೂಪಾಯಿ ಸಾಲವಿದ್ದು, ನ್ಯಾಯ ಕೇಳುತ್ತಿದ್ದಾರೆ. ಜ್ಯೂ. NTR, ಆರ್

error: Content is protected !!