Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲಿಂಗಾಯತರಿಗೆ ಸೂಕ್ತಸ್ಥಾನಮಾನ ಸಿಗುತ್ತಿಲ್ಲ : ಶಾಮನೂರು ಹೇಳಿಕೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು..?

Facebook
Twitter
Telegram
WhatsApp

 

ಸದ್ಯ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಆಡಳೊತ ನಡೆಸುತ್ತಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ, ಲಿಂಗಾಯತರ ವಿಚಾರವಾಗಿ ಚರ್ಚೆ ಹುಟ್ಟು ಹಾಕಿದ್ದಾರೆ. ಲಿಂಗಾಯತರಿಗೆ ಸೂಕ್ತ ಸ್ಥಾನಮಾನ ಕಾಂಗ್ರೆಸ್ ಪಕ್ಷದಲ್ಲಿ ಸಿಗುತ್ತಿಲ್ಲ. ಲಿಂಗಾಯತರೆಲ್ಲಾ ಒಂದಾದರೆ ಸರ್ಕಾರವನ್ನೇ ಅಲ್ಲಾಡಿಸಬಹುದು ಎಂದಿದ್ದಾರೆ. ಈ ಹೇಳಿಕೆ ಕಾಂಗ್ರೆಸ್ ಪಕ್ಷದಲ್ಲಿ ಕೊಂಚ ಗೊಂದಲವನ್ನುಂಟು ಮಾಡಿದೆ.

ಈ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾತನಾಡಿದ್ದು, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಜನಪರ ಕೆಲಸ ಮಾಡುತ್ತಿದೆ. ಕಾವೇರಿ ಹೋರಾಟದ ನಡುವೆ ಈ ವಿಚಾರ ತಂದು ಡೈವರ್ಟ್ ಮಾಡುವುದು ಬೇಡ. ಮಾನ್ಯ ಶಾಮನೂರು ಶಿವಶಂಕರಪ್ಪ ಅವರು ನಮ್ಮ ಸಮುದಾಯದ ಹಿರಿಯರು. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು. ಅವರ ಭಾವನೆಗಳನ್ನು ನಾವೂ ಗೌರವಿಸುತ್ತೇವೆ.

ನಮ್ಮ ಸಮುದಾಯದಕ್ಕೆ ಆ ರೀತಿ ಏನಾದರೂ ಆಗಿದ್ದರೆ ನಾವೂ ಕೂತು ಚರ್ಚೆ ಮಾಡುತ್ತೇವೆ. ಸದ್ಯಕ್ಕೆ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಏಳು ಜನ ಲಿಂಗಾಯತರೆ ಮಂತ್ರಿಗಳಾಗಿದ್ದೀವಿ. ಎಲ್ಲರೂ ಸಮರ್ಥರಿದ್ದೇವೆ. ಹಿರಿಯರು ಹೇಳಿರುವುದನ್ನು ಖಂಡಿತ ವಿಚಾರ ಮಾಡುತ್ತೇವೆ. ಸಂಬಂಧಪಟ್ಟವರ ಬಳಿ ಈ ಬಗ್ಗೆ ಚರ್ಚೆ ಮಾಡುತ್ತೇವೆ. ಅವರು ಪಕ್ಷದ ವಿಚಾರವಾಗಿ ಮಾತನಾಡಿಲ್ಲ. ಸಮುದಾಯದ ಬಗ್ಗೆ ಮಾತನಾಡಿದ್ದಾರೆ. ನನ್ನ ಬಳಿಯೂ ಈ ಹಿಂದೆ ಈ ಬಗ್ಗೆ ಮಾತನಾಡಿದ್ದರು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೂವಿನ ಹಡಗಲಿ | ಬೂದನೂರಿನಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ವೀ­ರಭದ್ರೇಶ್ವರ ಜಾತ್ರೆ

ಸುದ್ದಿಒನ್, ವಿಜಯನಗರ, ಹೂವಿನ ಹಡಗಲಿ, ಮೇ. 09  : ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಗುರುವಾರ ಸಂಜೆ 5 ಗಂಟೆಗೆ ವೀ­ರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಹಾರಥೋತ್ಸವ ಅನೇಕ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ಜರುಗಿತು.

ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!

ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ

ಚಿತ್ರದುರ್ಗ | ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶ : 100 ಕ್ಕೆ 100 ಫಲಿತಾಂಶ ಪಡೆದ 13 ಶಾಲೆಗಳು

ಸುದ್ದಿಒನ್, ಚಿತ್ರದುರ್ಗ, ಮೇ. 09 :   ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 35 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ ಮಾದರಿ ವಸತಿ ಶಾಲೆಗಳ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ

error: Content is protected !!