Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಟ ನಾಗಭೂಷಣ್ ಕಾರು ಆಕ್ಸಿಡೆಂಟ್ ನಲ್ಲಿ ಮಹಿಳೆ ಸಾವು : ರಾತ್ರಿಯ ಘಟನೆ ಬಿಚ್ಚಿಟ್ಟ ನಟ..!

Facebook
Twitter
Telegram
WhatsApp

ಬೆಂಗಳೂರು: ನಟ ನಾಗಭೂಷಣ್ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಇದೀಗ ಎಫ್ಐಆರ್ ದಾಖಲಾಗಿದೆ. ನಾಗಭೂಷಣ್ ಅವರನ್ನು ವಶಕ್ಕೆ ಪಡೆದಿರುವ ಪೊಲೀಸೆಉ ತನಿಖೆ ನಡೆಸುತ್ತಿದ್ದು, ಪೊಲೀಸರ ಮುಂದೆ ರಾತ್ರಿ ಏನಾಯಿತು ಎಂಬ ವಿಚಾರವನ್ನು ನಟ ನಾಗಭೂಷಣ್ ವಿವರವಾಗಿ ತಿಳಿಸಿದ್ದಲ್ಲದೆ, ಕಾರನ್ನು ತಾನೇ ಡ್ರೈವ್ ಮಾಡುತ್ತಿದ್ದ ಬಗ್ಗೆ ಒಪ್ಪಿಕೊಂಡಿದ್ದಾರೆ.

ಪೊಲೀಸರ ಮುಂದೆ ಈ ಬಗ್ಗೆ ಮಾತನಾಡಿರುವ ನಾಗಭೂಷಣ್, ‘ನಾನು ನನ್ನ ಸ್ನೇಹಿತನನ್ನು ಭೇಟಿ ಮಾಡಿ ಆರ್ ಆರ್ ನಗರದಿಂದ ಬರುತ್ತಿದ್ದೆ. ನನ್ನ ಕಿಯಾ ಕಾರಿ‌ಲ್ಲಿ ಜೆಪಿ ನಗರಕ್ಕೆ ತೆರಳಿದ್ದೆ. ಉತ್ತರಹಳ್ಳಿಯಿಂದ ಕೋಣನಕುಂಟೆಗೆ ಪ್ರಯಾಣ ಅದಾಗಿತ್ತು. ಈ ವೇಳೆ ಫುಟ್ ಪಾತ್ ಮೇಲಿದ್ದ ದಂಪತಿ ಕೆಳಗಿಳಿದು ಬಂದಿದ್ದಾರೆ. ಗಾಬರಿಯಿಂದ ರಸ್ತೆಗಿಳಿದ ದಂಪತಿಗೆ ಕಾರು ಡಿಕ್ಕಿ ಹೊಡೆದಿದೆ. ನಂತರ ಮುಂದೆ ಇದ್ದ ವಿದ್ಯುತ್ ಕಂಬಕ್ಕೂ ಕಾರು ಡಿಕ್ಕಿಯಾಗಿದೆ.

ಅಲ್ಲಿದ್ದ ಜನರು, ಅಪಾರ್ಟ್ಮೆಂಟ್ ನಿವಾಸಿಗಳು ತಕ್ಷಣ ಅಲ್ಲಿಗೆ ಧಾವಿಸಿದರು. ಆ ದಂಪತಿಯನ್ನು ಮೇಲೆತ್ತಿ ಕಿಉರಿಸೊದರು. ನಾನು ಅಲ್ಲಿಗೆ ಹೋದೆ. ಕಾರಿನಲ್ಲಿಯೇ ಆಸ್ಪತ್ರೆ ಸೇರಿಸಲು ಹೋದಾಗ ಕಾರು ಸ್ಟಾರ್ಟ್ ಆಗಲಿಲ್ಲ. ಆಟೋದಲ್ಲಿಯೇ ಆಸ್ಪತ್ರೆಗೆ ಕರೆದುಕೊಂಡು ಹೋದೆವು. ಗಂಡಸಿಗೆ ಕಾಲು, ಹಿಟ್ಟೆ, ಬೆನ್ನು, ತಲೆ ಭಾಗಕ್ಕೆ ಏಟಾಗಿದೆ. ಹೆಂಗಸಿಗೆ ಜಾಸ್ತಿ ಏಟಾಗಿ ಮಾತನಾಡದ ಸ್ಥಿತಿಯಲ್ಲಿದ್ದರು. ಆದರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಹೆಂಗಸು ಪ್ರಾಣ ಬಿಟ್ಟಿದ್ದರು. ಮತ್ತೊಬ್ಬ ಗಾಯಾಳನ್ನು ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಿ, ಚಿಜಿತ್ಸೆ ಕೊಡಿಸಲಾಗುತ್ತಿದೆ. ಕಾರನ್ನ ನಾನೇ ಚಾಲನೆ ಮಾಡುತ್ತಿದ್ದೆ ಎಂದು ನಾಗಭೂಷಣ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!