Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿವಮೊಗ್ಗ ಗಲಾಟೆ : ಬಾಣಂತಿ, ಹಸುಗೂಸು ಸಹಾಯಕ್ಕೆ ಬಾರದ ಜನ..!

---Advertisement---

 

ಶಿವಮೊಗ್ಗ: ಈದ್ ಮಿಲಾದ್ ಆಚರಣೆ ವೇಳೆ ನಡೆದ ಗಲಭೆಗೆ ಶಿವಮೊಗ್ಗದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಸದ್ಯಕ್ಕೆ ಶಿವಮೊಗ್ಗವನ್ನು ಹತೋಟಿಗೆ ತಂದಿದ್ದಾರೆ. ನಿಶ್ಯಬ್ದವಾಗಿದೆ. ಆದರೆ ಅಂದು ಮೆರವಣಿಗೆ ವೇಳೆ ಬಾಣಂತಿಯ ಮನೆಯ ಮೇಲೂ ದಾಳಿ ನಡೆದಿದೆ‌. ಕೆಲವೊಂದು ಮನೆಗಳನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಬಾಣಂತಿಯ ಮನೆಯೂ ಒಂದು ಎನ್ನಲಾಗಿದೆ.

 

ರಾಗಿಗುಡ್ಡದಲ್ಲಿ ಒಂದು ಹಸುಗೂಸು, ಬಾಣಂತಿ ಇರುವ ಮನೆಯ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ. ಈ ವೇಳೆ ಬಾಣಂತಿಯ ಮನೆಯವರು ಗಾಬರಿಯಾಗಿದ್ದರಂತೆ. ಕಿಟಕಿ, ಗಾಜುಗಳನ್ನು ಒಡೆದು ಹಾಕಿದ್ದ ಮುಷ್ಕರ್ಮಿಗಳು, ಒಳಗೆ ನುಗ್ಗುವುದಕ್ಕೂ ಪ್ರಯತ್ನ ಪಟ್ಟಿದ್ದರಂತೆ. ಹೀಗಾಗಿ ಮನೆಯೊಳಗೆ ಇದ್ದವರು ಗಾಬರಿಯಾಗಿದ್ದರಂತೆ. ಅಂದು ಇಡೀ ಶಿವಮೊಗ್ಗದಲ್ಲಿಯೇ ಗಲಭೆಯ ವಾತಾವರಣ ನಿರ್ಮಾಣವಾಗಿತ್ತು. ಹಲವರಿಗೆ ಗಂಭೀರ ಗಾಯವೂ ಆಗಿದೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಂದಿನ ಭಯದ ಬಗ್ಗೆ ವ್ಯಕ್ತಿಯೊಬ್ಬರು ಹೇಳಿಕೊಂಡಿದ್ದು, ನಮ್ಮ‌ ಅಕ್ಕಪಕ್ಕದಲ್ಲಿ ಅನ್ಯಕೋಮಿನ ಜನ ಇದ್ದರು. ನಮಗೆ ತೀರಾ ಪರಿಚಯಸ್ಥರೇ. ಆದರೆ ಅಂದು ನಮ್ಮ ಸಹಾಯಕ್ಕೆ ಬರಲಿಲ್ಲ. ಅಲ್ಲದೆ ಅಂದು ಅವರ ಮನೆ ಮೇಲೆ ಯಾವುದೇ ರೀತಿಯ ದಾಳಿ ಮಾಡದೆ ನಮಗೆ ಮಾತ್ರ ತೊಂದರೆ ಕೊಟ್ಟಿದ್ದಾರೆ. ಒಂದು ತಿಂಗಳ ಮಗು ಮನೆಯಲ್ಲಿತ್ತು. ಕಫ ಕಟ್ಟಿಕೊಂಡರು ಕೂಡ ಅದಕ್ಕೆ ಆಸ್ಪತ್ರೆಗೆಂದು ಹೊರಗೆ ಕರೆದುಕೊಂಡು ಹೋಗುವುದಕ್ಕೂ ಭಯವಾಗುತ್ತಿತ್ತು ಎಂದಿದ್ದಾರೆ.

ಶಿವಮೊಗ್ಗದ ಗಲಭೆಗೆ ಸಂಬಂಧಿಸಿದಂತೆ ಹಲವರು ಗಾಯಗೊಂಡಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಾಜಿ ಸಚಿವ ಈಶ್ವರಪ್ಪ ಆಸ್ಪತ್ರೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿಕೊಂಡು ಬಂದಿದ್ದಾರೆ. ಈ ವೇಳೆ ಗಲಭೆಕೋರರ ಬಗ್ಗೆ ಆಕ್ರೋಶವನ್ನು ಹೊರ ಹಾಕಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment