Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಐಎಡಿಎಂಕೆ ಜೊತೆಗೆ ಕಿರಿಕ್ : ಅಣ್ಣಾಮಲೈ ಕಂಟ್ರೋಲ್ ಮಾಡಲು ಬಿಜೆಪಿ ಪ್ಲ್ಯಾನ್ ಏನು..?

---Advertisement---

 

ಚೆನ್ನೈ: ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಲ್ಲಿದ್ದಾರೆ. ಆದರೆ ಇತ್ತಿಚೆಗೆ ಅಣ್ಣಾಮಲೈ ಕಾರಣದಿಂದಾಗಿ ಎಐಎಡಿಎಂಕೆ, ಬಿಜೆಪಿ ಜೊತೆಗಿನ ತನ್ನ ಮೈತ್ರಿ ಮುರಿದುಕೊಂಡಿದೆ. ಇದಕ್ಕೆ ಕಾರಣ ಅಣ್ಣಾಮಲೈ. ಸುಖಾ ಸುಮ್ಮನೆ ಅಣ್ಣಾಮಲೈ, ಪಕ್ಷದ ಹಿರಿಯ ನಾಯಕರ ಮೇಲೆ ಆರೋಪ ಮಾಡುತ್ತಾರೆ ಎಂದು ಎಐಎಡಿಎಂಕೆ ಹೇಳಿತ್ತು. ಇದೀಗ ಇದನ್ನ ಹೀಗೆ ಬಿಟ್ಟರೆ ಪಕ್ಷಕ್ಕೆ ಸಮಸ್ಯೆ ಎಂದು ಅರಿತ ಬಿಜೆಪಿ ಅಣ್ಣಾಮಲೈ ಅವರನ್ನ ಕಂಟ್ರೋಲ್ ಮಾಡುವುದಕ್ಕೆ ಹೊರಟಿದೆ.

ಈಗಾಗಲೇ ಅಣ್ಣಾಮಲೈ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಹೈಕಮಾಂಡ್ ಸಲಹೆಯಂತೆ ದೆಹಲಿಗೆ ಬಂದಿರುವ ಅಣ್ಣಾಮಲೈ ಜೊತೆಗೆ ಬಿಜೆಪಿ ನಾಯಕರು ಒಂದಿಷ್ಟು ಮಾತುಕತೆ ನಡೆಸಿದ್ದಾರೆ. ನಿನ್ನೆಯಷ್ಟೇ ನಿರ್ಮಲಾ ಸೀತರಾಮ್ ಅವರನ್ನು ಭೇಟಿ ಮಾಡಿರುವ ಅಣ್ಣಾಮಲೈ, ಹಲವು ರಾಜಕೀಯ ಬೆಳವಣಿಗೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಷ್ಟೇ ಅಲ್ಲ ಅಮಿತ್ ಶಾ, ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅವರ ಜೊತೆಗೆ ಎಐಎಡಿಎಂಕೆ ಜೊತೆಗಿನ ಜಗಳದ ಕುರಿತು ವಿವರಣೆ ನೀಡಿದ್ದಾರೆ ಎನ್ನಲಾಗಿದೆ.

ಇನ್ನು ಕಳೆದ ವಾರವಷ್ಟೇ ಎಐಎಡಿಎಂಕೆ- ಬಿಜೆಪಿ ಜೊತೆಗಿನ ಮೈತ್ರಿಯನ್ನು ಕಳೆದುಕೊಂಡಿದೆ. ಇದೀಗ ಅಣ್ಣಾಮಲೈ ವಿರುದ್ಧ ಹಲವು ಆರೋಪಗಳನ್ನು ಹಾಕಿರುವ ಎಐಎಡಿಎಂಕೆ, ಅವರನ್ನು ಪಕ್ಷದಿಂದ ಹೊರ ಹಾಕಿದರೆ ಮಾತ್ರ ಮತ್ತೆ ಮೈತ್ರಿ ಎಂದಿದೆ. ಹೀಗಾಗಿ ಬಿಜೆಪಿ ತಮಿಳುನಾಡಿನಲ್ಲಿ ಎಲ್ಲವನ್ನು ಸರಿ ಮಾಡುವ ನಿರ್ಧಾರ ಮಾಡಿದೆ. ಮೂಲತಃ ತಮಿಳರೇ ಆಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ತಮಿಳುನಾಡಿಗೆ ಉಸ್ತುವಾರಿ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...