Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿವಮೊಗ್ಗ ಗಲಾಟೆ ಬಗ್ಗೆ ಏರುಧ್ವನಿಯಲ್ಲಿ ಪ್ರಶ್ನಿಸಿದ ಮಹಿಳೆಗೆ ಸಚಿವ ಮಧು ಬಂಗಾರಪ್ಪ ಕೊಟ್ಟ ಉತ್ತರವೇನು..?

---Advertisement---

 

 

ಶಿವಮೊಗ್ಗ: ಈದ್ ಮಿಲಾದ್ ವೇಳೆ ಶಿವಮೊಗ್ಗದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಲು ಇಂದು ಸಚಿವ ಮಧು ಬಂಗಾರಪ್ಪ ಆಸ್ಪತ್ರೆಗೆ ಭೇಟಿ ನೀಡಿದ್ದರು. ಸ್ಥಳಕ್ಕೂ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಎರಡೂ ಸಮುದಾಯದವರ ಜೊತೆಗೂ ಮಾತನಾಡಿದ್ದಾರೆ.

ಇನ್ನು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ವೈದ್ಯರ ಬಳಿಯೂ ಗಾಯಾಳುಗಳ ಆರೋಗ್ಯದ ಮಾಹಿತಿ ಪಡೆದುಕೊಂಡಿದ್ದಾರೆ. ಆದಷ್ಟು ಬೇಗ ಗುಣಮುಖರಾಗುವಂತೆ ಹಾರೈಸಿದ್ದಾರೆ. ವೈದ್ಯರಿಗೂ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.

ಇದೆ ವೇಳೆ ಶಿವಮೊಗ್ಗದ ಆಸ್ಪತ್ರೆಗೂ ಭೇಟಿ ನೀಡಿದ ಮಧು ಬಂಗಾರಪ್ಪ ಅವರನ್ನ ಮಹಿಳೆಯೊಬ್ಬರು ಪ್ರಶ್ನೆ ಮಾಡಿದ್ದಾರೆ. ಮುಸ್ಲಿಂ ಹುಡುಗರ ಮೇಲೆ ಕೇಸ್ ಹಾಕಿರುವುದನ್ನು ಏರು ಧ್ವನಿಯಲ್ಲಿ ಪ್ರಶ್ನೆ ಮಾಡಿದ್ದಾರೆ. ಈ ಬಗ್ಗೆ ಮಧು ಬಂಗಾರಪ್ಪ ಕೂಡ ಜೋರು ಧ್ವನಿಯಲ್ಲಿಯೇ ಉತ್ತರಿಸಿದ್ದಾರೆ. 144 ಸೆಕ್ಷನ್ ಇದ್ದರು ಕೂಡ ಆತ ಬ್ಯಾರಿಕೇಡ್ ತಳ್ಳಿ ಹೋಗಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ. ಕೆಲ ಕಿಡಿಗೇಡಿಗಳು ಬೇಕು ಅಂತಾನೇ ಈ ರೀತಿಯ ಗಲಾಟೆ ಮಾಡಿದ್ದಾರೆ. ಯಾರನ್ನೂ ಇದರಿಂದ ರಕ್ಷಣೆ ಮಾಡುವುದಿಲ್ಲ. ಕಾನೂನು ರೀತಿ ಕ್ರಮ ಕೈಗೊಳ್ಳುತ್ತೇವೆ ಎಂದೇ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಗಾಯಾಳುಗಳ ಆರೋಗ್ಯ ವಿಚಾರಿಸಿ, ಆಸ್ಪತ್ರೆಯಿಂದ ತೆರಳಿದ್ದಾರೆ. ಮಹಿಳೆ ಪ್ರಶ್ನೆ ಮಾಡುವಾಗ ವಿಡಿಯೋ ಮಾಡುತ್ತಿದ್ದನ್ನು ಗಮನಿಸಿದ ಸಚಿವ ಮಧು ಬಂಗಾರಪ್ಪ ಆ ವಿಚಾರಕ್ಕೆ ಗದರಿದ್ದಾರೆ. ಈಗಾಗಲೇ ಗಾಯಾಳುಗಳನ್ನು ನೋಡಲು ಆಸ್ಪತ್ರೆಗೆ ರಾಜಕಾರಣಿಗಳ ದಂಡು ಬರುತ್ತಿದೆ. ಗಾಯಾಳುಗಳ ಪರಿಸ್ಥಿತಿಯನ್ನು ವಿಚಾರಿಸುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರೇಣುಕಾಸ್ವಾಮಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌: ಬೆದರಿಕೆ ಪ್ರಕರಣದ ಉದ್ಯಮಿ ಜೊತೆ ವಿಜಯಲಕ್ಷ್ಮಿ ಕಾಣಿಸಿಕೊಂಡಿದ್ದೇಕೆ?

ಏತ ನೀರಾವರಿ ಯೋಜನೆಗೆ ಭೂಮಿ ಪೂಜೆ: ಮಾಯಕೊಂಡ ಕ್ಷೇತ್ರ ಅಭಿವೃದ್ಧಿಗೆ ಸರ್ಕಾರದ ಬದ್ಧ : ಸಚಿವ ಎಸ್.ಎಸ್. ಮಲ್ಲಿಕಾರ್ಜುನ

ಕಾವ್ಯ ಬರೆಯುವುದು, ಕಟ್ಟುವುದು ಹೃದಯಕ್ಕೆ ಸಂಬಂಧಿಸಿದ ಕೆಲಸ: ಇತಿಹಾಸ ಸಂಶೋಧಕ ಡಾ. ಬಿ. ರಾಜಶೇಖರಪ್ಪ

ಹನುಮಾನ್ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದವನ ವಿರುದ್ಧ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು : ಬೊಮ್ಮಾಯಿ

ಬಾಂಗ್ಲಾದೇಶದಲ್ಲಿ ನಿವೃತ್ತ ಶಿಕ್ಷಕ ಸೇರಿ ಒಂದೇ ಕುಟುಂಬದ ನಾಲ್ವರ ಸಾವು : ಮನೆಯಲ್ಲಿ ಮೃತದೇಹಗಳು ಪತ್ತೆ.!

Leave a Comment