Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಾಲೆಯಂಗಳದಲ್ಲಿ ಇಂದಿನಿಂದ ಚಿಣ್ಣರ ಚಿಲಿಪಿಲಿ : 20 ತಿಂಗಳ ಬಳಿಕ ಮಕ್ಕಳು ಶಾಲೆಯೆಡೆಗೆ..!

Facebook
Twitter
Telegram
WhatsApp

 

ಬೆಂಗಳೂರು: ಕೊರೊನಾ ಸಂಕಷ್ಟದಿಂದ ಶೈಕ್ಷಣಿಕ ಬೆಳವಣಿಗೆ ಸಂಪೂರ್ಣವಾಗಿ ಕುಂಠಿತವಾಗಿತ್ತು. ಇದೀಗ ಎಲ್ಲವೂ ಹಂತ ಹಂತವಾಗಿ ಸರಿಯಾಗುತ್ತಿದೆ. ಅದರಲ್ಲೂ ಮಕ್ಕಳಿಗೆ ಶಾಲೆಗಳು ತೆರೆದಿವೆ. ಇಂದಿನಿಂದ 1-5 ನೇ ತರಗತಿ ಮಕ್ಕಳಿಗೂ ಶಾಲೆ ಆರಂಭವಾಗಿದೆ.

ಕೊರೊನಾದಿಂದಾಗಿ ಕಳೆದ 5 ತಿಂಗಳಿಂದ ಶಾಲೆಗಳು ಮುಚ್ಚಿದ್ದವು. ಇಂದಿನಿಂದ ಪುನಾರಾರಂಭವಾಗಿದೆ. ಒಂದಷ್ಟು ಕಂಡಿಷನ್ ಅಪ್ಲೈ ಆಗಿದೆ. ಹೊಸ ಮಾರ್ಗಸೂಚಿಗಳನ್ನು ನೀಡಲಾಗಿದೆ. ಮೊದಲ ಐದು ದಿನ ಅರ್ಧ ದಿನವಷ್ಟೇ ಶಾಲೆಗಳನ್ನ ನಡೆಸಲು ಸರ್ಕಾರ ನಿರ್ಧರಿಸಿದೆ. ಜೊತೆಗೆ ಶಾಲೆಗೆ ಬರುವ ಮಕ್ಕಳಿಗೆ ಪೋಷಕರ ಒಪ್ಪಿಗೆ ಪತ್ರ ಕಡ್ಡಾಯವಾಗಿರಬೇಕಾಗಿದೆ.

50 ವರ್ಷ ಮೇಲ್ಪಟ್ಟ ಶಿಕ್ಷಕರು ಫೇಸ್ ಮಾಸ್ಕ್ ಹಾಕಿಕೊಂಡೆ ಶಾಲೆಗೆ ಬರಬೇಕು. ಜೊತೆಗೆ ಶಿಕ್ಷಕರಿಗೆ ಎರಡು ಡೋಸ್ ಲಸಿಕೆ ಕಡ್ಡಾಯವಾಗಿ ಹಾಕಿಸಿಕೊಂಡಿರಬೇಕು. ಶೇಕಡ 50 ರಷ್ಟು ಹಾಜರಾತಿಯಲ್ಲಿ ಶಾಲೆ ನಡೆಸಲು ಸೂಚಿಸಲಾಗಿದೆ. ಇನ್ನು ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಶಾಲೆಗಳು ನಡೆಯಲಿವೆ. ಇನ್ನುಳಿದ ಎರಡು ದಿನ ಶಾಲೆಗಳ ಕ್ಲೀನಿಂಗ್ ಕಾರ್ಯ ನಡೆಯಲಿದೆ.

ಹೊಸ ಮಾರ್ಗಸೂಚಿಯಲ್ಲಿ ಒಂದಷ್ಟು ಅಂಶಗಳನ್ನ ಸರ್ಕಾರ ನೀಡಿದೆ. ಮಕ್ಕಳಲ್ಲಿ ಸೋಂಕು ಇರೋದನ್ನ ದೃಢಪಡಿಸಿಕೊಳ್ಳಬೇಕು. ಶಾಲೆಯಲ್ಲಿ ಮಕ್ಕಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಿರಬೇಕು. ವಿದ್ಯಾರ್ಥಿಗಳು ಆನ್ ಲೈನ್ ಅಥವಾ ಆಫ್ಲೈನ್ ತರಗತಿಗೆ ಅವಕಾಶವಿದೆ. ಮಕ್ಕಳಲ್ಲಿ ಒಂದು ಮೀಟರ್ ಅಂತರ ಪಾಲನೆ ಮಾಡಬೇಕು ಎಂಬ ಹೊಸ ನಿಯಮಗಳನ್ನ ಜಾರಿಗೆ ತಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಗುತ್ತಿಗೆದಾರನ  ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..! ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..?

error: Content is protected !!