Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಗ್ ಬಾಸ್ ಮನೆಗೆ ಜಗ್ಗೇಶ್ ಹೋಗ್ತಾರಾ..? ಅಭಿಮಾನಿಗಳಿಗೆ ನವರಸ ನಾಯಕ ಹೇಳಿದ್ದೇನು..?

Facebook
Twitter
Telegram
WhatsApp

 

ಬೆಂಗಳೂರು: ಬಿಗ್ ಬಾಸ್ ಸೀಸನ್ 10 ಗಾಗಿ ಇಡೀ ಕರ್ನಾಟಕದ ರಿಯಾಲಿಟಿ ಶೋ ಪ್ರೇಮಿಗಳು ಕಾಯುತ್ತಿದ್ದಾರೆ. ಈ ಬಾರಿಯ ಸೀಸನ್ ಡಿಫ್ರೆಂಟ್ ಎಂದೇ ಹೇಳಲಾಗುತ್ತಿದೆ. ಹೀಗಾಗಿ ಎಲ್ಲರ ಚಿತ್ತ ಬಿಗ್ ಬಾಸ್ ಸೀಸನ್ 10 ರ ಕಡೆಗೆ ನೆಟ್ಟಿದೆ. ಅಕ್ಟೋಬರ್ 10 ಬಿಗ್ ಬಾಸ್ ಎಲ್ಲರ ಮನೆ ಮನಗಳಲ್ಲಿ ಆರಂಭವಾಗಲಿದೆ.

ಇನ್ನು ಈ ಬಾರಿಯ ಬಿಗ್ ಬಾಸ್ ಗೆ ಯಾರೆಲ್ಲಾ ಹೋಗುತ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇದೆ. ಊಹೆ ಮಾಡುವುದಕ್ಕೂ ಶುರು ಮಾಡಿದ್ದಾರೆ. ಆದರೆ ಅಧಿಕೃತವಾಗಿ ಇನ್ನು ಯಾರೆಲ್ಲಾ ಹೋಗ್ತಾರೆ ಎಂಬುದು ಮಾತ್ರ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಇದರ ನಡುವೆ ನವರಸ ನಾಯಕ ಜಗ್ಗೇಶ್ ಕೂಡ ಈ ಬಾರಿಯ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡ್ತಾರೆ ಎಂದೇ ಹೇಳಲಾಗಿತ್ತು. ಆದರೆ ಅದಕ್ಕೆ ಇದೀಗ ನಟ ಜಗ್ಗೇಶ್ ಅವರೇ ಉತ್ತರ ನೀಡಿದ್ದಾರೆ.

ನಟ ಜಗ್ಗೇಶ್ ಅವರು ಬಿಗ್ ಬಾಸ್ ಗೆ ಹೋಗಲಿದ್ದಾರೆ ಎಂದು ಗೊತ್ತಾಗಿದ್ದೆ ತಡ ಅಭಿಮಾನಿಗಳು ತುಂಬಾನೇ ಖುಷಿಯಾಗಿದ್ದರು. ಬಿಗ್ ಬಾಸ್ ಮನೆಯಲ್ಲಿ ತಮ್ಮ ನೆಚ್ಚಿನ ನಟನನ್ನು ನೋಡುವ ಬಯಕೆ ವ್ಯಕ್ತಪಡಿಸಿದ್ದರು. ಆದರೆ ಆ ಆಸೆಗೆ ನಟ ಜಗ್ಗೇಶ್ ಅವರೇ ನಿರಾಸೆಯ ಪರದೆ ಎಳೆದಿದ್ದಾರೆ. ಟ್ವಿಟ್ಟರ್ ನಲ್ಲಿ ಉತ್ತರಿಸಿರುವ ನಟ ಜಗ್ಗೇಶ್, ಸತ್ಯಕ್ಕೆ ದೂರವಾದ ವಿಷಯ.. ನನ್ನ ಅಭಿಮಾನಿಗಳ ಮಾಹಿತಿಗಾಗಿ ಎಂದು ಬರೆದಿದ್ದಾರೆ. ಈ ಮೂಲಕ ತಾವೂ ಬಿಗ್ ಬಾಸ್ ಗೆ ಹೋಗುತ್ತಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಆದ್ರೆ ಜಗ್ಗೇಶ್ ಬಿಗ್ ಬಾಸ್ ಮನೆಗೆ ಹೋಗುತ್ತಾರೆ ಎಂಬ ಗಾಳಿ ಸುದ್ದಿಗೇನೆ ಅಭಿಮಾನಿಗಳೆಲ್ಲಾ ವಿಶ್ ಮಾಡುವುದಕ್ಕೆ ಶುರು ಮಾಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!