Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೆಂಡ್ತಿ ಮಕ್ಕಳನ್ನು ಬಿಟ್ಟು ಸೇವೆ ಮಾಡಿ ಅಂದ್ರೆ ಹೇಗೆ : ಶಾಸಕ ವೀರೇಂದ್ರ ಪಪ್ಪಿ ಬೇಸರ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.05 :  ಕವಾಡಿಗರಹಟ್ಟಿಯಲ್ಲಿ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿಯವರರು ನಿನ್ನೆ (ಬುಧವಾರ) ಮಾತನಾಡಿದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.

ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುವಾಗ ಅವರ ಪತ್ನಿಯ ವಿಚಾರ ಮಾತನಾಡಿ ನನ್ನ ಹೆಂಡತಿಗೆ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿರುವುದರಿಂದ ನಾನು ಹೋಗಬೇಕು ಎಂದಿದ್ದಾರೆ. ತಕ್ಷಣವೇ ಅಲ್ಲಿದ್ದ ಮಹಿಳೆಯೋರ್ವರು ನಾವು ನಾಲ್ಕು ತಿಂಗಳಿಂದ ನಾವು ಸಂಬಂಧಿಕರು ಸತ್ತರೂ ಹೋಗೋಕೆ ಆಗಿಲ್ಲ ಎಂದಿದ್ದಾರೆ. ಇದರಿಂದ ಬೇಸರಗೊಂಡ ಶಾಸಕ ಹೆಂಡತಿ ಮಕ್ಕಳನ್ನ ಬಿಟ್ಟು ಸೇವೆ ಮಾಡಿ ಅಂದ್ರೆ ಹೆಂಗೆ, ಅಂಥ ದೊಡ್ಡ ಗುಣಾನೂ ನಂದಲ್ಲ, ನಾನದನ್ನ ಮಾಡಲ್ಲ. ನನಗದು ಬೇಕಾಗಿಲ್ಲ. ನಾನು ರಾಜಕೀಯದಲ್ಲಿ ಹಂಗಾಗಬೇಕು, ಹಿಂಗಾಗಬೇಕು ಅಂತ ಬಂದಿಲ್ಲ. ಬಂದಿದೀನಿ ಸೇವೆ ಮಾಡ್ತೀದೀನಿ ಅಷ್ಟೇ. ನಿಮಗೆ ಇಷ್ಟ ಇದ್ರೆ ಮುಂದಿನ ಬಾರಿ ಗೆಲ್ಸಿ. ಇಲ್ಲ ಅಂದ್ರೆ ಬಿಡಿ ಎಂದು ಬೇಸರದಿಂದಲೇ ಮಾತನಾಡಿದ್ದಾರೆ.

ನನಗೆ ಮತ ಹಾಕಿ ಗೆಲ್ಲಿಸಿ ಅಂತಾನೂ ಕೇಳೋದಿಲ್ಲ. ನನಗೆ ನಿಮ್ಮಿಂದ ಆಗಬೇಕಾಗಿದ್ದು ಏನೂ ಇಲ್ಲ. ನನ್ನ ಫ್ಯಾಮಿಲಿ ಬಗ್ಗೆ ನೀವು ಮಾತನಾಡಬೇಕಾದರೆ ಬಹಳ ಯೋಚನೆ ಮಾಡಿ ಮಾತಾಡ್ಬೇಕು. ನಿಮ್ಮಿಂದ ನನಗೆ ನೋವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ನನ್ನಿಂದ ನಿಮಗೆ ತೊಂದರೆಯಾಗಿಲ್ಲ. ನನ್ನಿಂದ ನಿಮಗೆ ತೊಂದರೆಯಾಗದಾದ್ರೇ ನಿಮ್ಮ ಮಾತನ್ನು ಒಪ್ಪಿಕೊಳ್ಳುತ್ತಿದ್ದೆ ಎಂದು ಶಾಸಕ ಕೆಸಿ ವೀರೇಂದ್ರ ಪಪ್ಪಿ ತೀವ್ರವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

error: Content is protected !!