ಪುನೀತ್ ಕೆರೆಹಳ್ಳಿ ಭೇಟಿ ಮಾಡಿದ ರಾಜ್ಯ ಬಿಜೆಪಿ ನಿಯೋಗ..!

1 Min Read

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಶಿವಮೊಗ್ಗ ಗಲಾಟೆ ಆರೋಪ – ಪ್ರತ್ಯಾರೋಪದ ತಿಕ್ಕಾಟ ನಡೆಸುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೋಮು ಗಲಭೆ ಹೆಚ್ಚಾಗಿದೆ ಎಂದೇ ಬಿಜೆಪಿ ಆರೋಪಿಸುತ್ತಿದೆ. ಕಾಂಗ್ರೆಸ್ ಕೂಡ ಈ ವಿಚಾರಕ್ಕೆ ತಿರುಗೇಟು ನೀಡಿದೆ. ಇದೀಗ ರಾಜ್ಯ ಬಿಜೆಪಿ ನಿಯೋಗ, ಪುನೀತ್ ಕೆರೆಹಳ್ಳಿಯನ್ನು ಭೇಟಿ ಮಾಡಿದೆ.

‘ಸಮಾಜಘಾತುಕ ಜಿಹಾದಿಗಳನ್ನು ಅಮಾಯಕರೆಂದು ಬಿಡುಗಡೆ ಮಾಡುವ @INCKarnataka ಸರ್ಕಾರ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ, ನಕಲಿ ಪ್ರಕರಣಗಳನ್ನು ದಾಖಲಿಸಿ ಮಾನಸಿಕವಾಗಿ ಹಿಂಸೆ ನೀಡುತ್ತಿದೆ. ಹಿಂದೂ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿ ಮೇಲಿನ ಆರೋಪಗಳು ಸಾಬೀತಾಗದಿದ್ದರೂ ಆತನ ವಿರುದ್ಧ ಬೇರೆ ಪ್ರಕರಣಗಳಲ್ಲಿ ಸಿಲುಕಿಸಿ ಸರ್ಕಾರ ಹತ್ತಿಕ್ಕುವ ಕೃತ್ಯವೆಸಗುತ್ತಿದೆ.

 

@siddaramaiah ಅವರ ಸರ್ಕಾರ ನ್ಯಾಯ ಒದಗಿಸಬೇಕೆಂದು ಅನಿರ್ದಿಷ್ಟಾವಧಿಯವರೆಗೂ ಉಪವಾಸ ಕೈಗೊಂಡು ಆಸ್ಪತ್ರೆಗೆ ದಾಖಲಾಗಿರುವ ಪುನೀತ್‌ರನ್ನು ಬಿಜೆಪಿಯ ಶಾಸಕರುಗಳಾದ ಶ್ರೀ @MTenginkai, ಕು. @BJPBhagirathi, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @siddarajuBJP, ಪರಿಷತ್‌ ಸದಸ್ಯರಾದ ಶ್ರೀ @NswamyChalavadi, ಪ್ರಮುಖರಾದ ಶ್ರೀ ಭಾಸ್ಕರ್ ರಾವ್ ಅವರು ಭೇಟಿ ನೀಡಿ ಆತ್ಮಸ್ಥೈರ್ಯ ತುಂಬಿದರು.

ಬಿಜೆಪಿ ನಿಯೋಗ ಭೇಟಿ ಮಾಡಿರುವ ಫೋಟೋಗಳನ್ನು ಎಕ್ಸ್ ನಲ್ಲಿ ಹಂಚಿಕೊಂಡಿದೆ. ಈ ಬಗ್ಗೆ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks