Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ನವರು ಗೆಲ್ಲುತ್ತಾರೆ ಎಂಬ ಕಾರಣಕ್ಕೆ ಮೈತ್ರಿ ಮಾಡಿಕೊಂಡ್ರಾ..? : ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ದೇವೇಗೌಡ್ರು ಹೇಳಿದ್ದೇನು..?

Facebook
Twitter
Telegram
WhatsApp

 

ದಕ್ಷಿಣ ಕನ್ನಡ : ಜೆಡಿಎಸ್ ತತ್ವ ಸಿದ್ದಾಂತವೇ ಬೇರೆ, ಬಿನೆಪಿಯ ತತ್ವ ಸಿದ್ಧಂತವೇ ಬೇರೆ. ಉತ್ತರ ಧ್ರುವ‌ಮತ್ತು ದಕ್ಷಿಣ ಧ್ರುವ ಒಟ್ಟಾಗುವುದಕ್ಕೆ ಹೊರಟಿದೆ. ಅಂದ್ರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ‌ ಮಾಡಿಕೊಂಡು ಚುನಾವಣೆ ಎದುರಿಸಲು ಹೊರಟಿದೆ. ಈ ಮೈತ್ರಿ ಸಂಬಂಧ ಸ್ವತಃ ಎರಡು ಪಕ್ಷದ ಕಾರ್ಯಕರ್ತರು, ಶಾಸಕರಿಗೇನೆ ಇಷ್ಟವಿಲ್ಲ. ವಿರೋಧದ ನಡುವೆಯೂ ಮೈತ್ರಿ‌ ಮಾಡಿಕೊಂಡಿದ್ದು ಯಾಕೆ ಎಂಬುದನ್ನು ಹೇಳಿದ್ದಾರೆ.

ಇಂದು ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ. ಬಳಿಕ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಕ್ಷೇತ್ರಗಳ ಟಿಕೆಟ್ ಇನ್ನು ಹಂಚಿಕೆಯಾಗಬೇಕು ಅಷ್ಟೇ. ಈಗಾಗಲೇ ಅಮಿತ್ ಷಾ ಜೊತೆಗೆ ಕುಮಾರಸ್ವಾಮಿ ಅವರು ಮಾತನಾಡಿದ್ದಾರೆ. ದಸರಾ ಹಬ್ಬ ಮುಗಿದ ಬಳಿಕ ಸೀಟು ಹಂಚಿಕೆಯ ಚರ್ಚೆ ನಡೆಯುತ್ತದೆ. ಮಂಡ್ಯ ಸೇರಿದಂತೆ ಬೇರೆ ಯಾವುದೇ ಕ್ಷೇತ್ರಗಳ ಬಗ್ಗೆ ಇನ್ನು ಯಾವುದೇ ಚರ್ಚೆಯಾಗಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರು ಇರುವ 28 ಕ್ಷೇತ್ರಗಳನ್ನು ಗೆದ್ದು ಬಿಡುತ್ತೀವಿ ಎಂಬ ಉತ್ಸಾಹದಲ್ಲಿದ್ದಾರೆ. ಅದಕ್ಕೆ ನಾವೂ ಬಿಜೆಒಇ ಜೊತೆಗೆ ಮೈತ್ರಿ ಮಾಡಿಕೊಂಡೆವು ಎಂದಿದ್ದಾರೆ.

ಸದ್ಯಕ್ಕೆ ನನ್ನ ಆರೋಗ್ಯ ಸುಧಾರಿಸಿದರೆ ನಾನು, ಕುಮಾರಸ್ವಾಮಿ ಮತ್ತೆ ಕೇಂದ್ರ ಗೃಹಮಂತ್ರಿಗಳ ಜೊತೆಗೆ ಚರ್ಚೆ ನಡೆಸಲಿದ್ದೇವೆ. ಈಗಾಗಲೇ ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ ಜೊತೆಗೆ ಎರಡು ಸುತ್ತಿನ ಮಾತುಕತೆ ನಡೆಸಿದ್ದೇವೆ. ಅದಾದ ಬಳಿಕ ಕುಮಾರಸ್ವಾಮಿ ಅವರು ಕೇಂದ್ರ ಗೃಹ ಮಂತ್ರಿಯವರನ್ನು ಭೇಟಿ ಮಾಡಿದ್ದಾರೆ. ಹಿಂದಿನ ಚುನಾವಣೆಯ ಮತಗಳನ್ನು ಇಟ್ಟುಗೂಡಿಸಿ ಒಂದು ನಿರ್ಧಾರಕ್ಕೆ ಬರಲಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪಕ್ಷಕ್ಕಾಗಿ ದುಡಿದವರಿಗೆ ಅಧಿಕಾರ ಕೊಡಬೇಕೆಂಬ ಪರಿಕಲ್ಪನೆ ರಾಜೀವ್‍ಗಾಂಧಿಯವರಲ್ಲಿತ್ತು : ಕೆ. ಅನಂತ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 21: ತಳಮಟ್ಟದಿಂದ ಪಕ್ಷಕ್ಕಾಗಿ ದುಡಿದವರಿಗೆ ಅಧಿಕಾರ ಕೊಡಬೇಕೆಂಬ ಪರಿಕಲ್ಪನೆ ರಾಜೀವ್‍ಗಾಂಧಿಯವರಲ್ಲಿತ್ತು ಎಂದು ಜಿಲ್ಲಾ ಕಾಂಗ್ರೆಸ್

ಪಠ್ಯಗಳ ಜೊತೆಗೆ ದಿನಪತ್ರಿಕೆ ಓದುವ ಅಭ್ಯಾಸವಿದ್ದರೆ  ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧ್ಯ : ಡಾ. ಜಿ. ಎನ್. ಸಂದೀಪ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 21 : ಶಾಲಾ ಕಾಲೇಜುಗಳ ಪಠ್ಯಗಳ ಜೊತೆಗೆ ಸಾಮಾನ್ಯ ಜ್ಞಾನಕ್ಕಾಗಿ ದಿನಪತ್ರಿಕೆ ಹಾಗೂ ಮ್ಯಾಗ್ಜಿನ್‍ಗಳನ್ನು ಓದುವ

ಚಿತ್ರದುರ್ಗ | ಜಿಲ್ಲೆಯಲ್ಲಿ ಸೋಮವಾರ ಸುರಿದ ಮಳೆ ವರದಿ

ಚಿತ್ರದುರ್ಗ. ಮೇ.21 :  ಸೋಮವಾರ ರಾತ್ರಿ ಸುರಿದ ಮಳೆಗೆ ಹಿರಿಯೂರು ತಾಲ್ಲೂಕಿನ ಸೂಗೂರಿನಲ್ಲಿ 108.6 ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 54.4 ಮಿ.ಮೀ, ಇಕ್ಕನೂರಿನಲ್ಲಿ 68.4

error: Content is protected !!