Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

135 ಸೀಟು ಗೆದ್ದಿದ್ದೀವಿ ಎಂಬ ಧಿಮಾಕು : ಕಾಂಗ್ರೆಸ್ ಮೇಲೆ ಹರಿಹಾಯ್ದ ಜೆಡಿಎಸ್

Facebook
Twitter
Telegram
WhatsApp

 

ಬೆಂಗಳೂರು: ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ವಾಕ್ಸಮರ ನಡೆಯುತ್ತಲೆ ಇದೆ. ಇದೀಗ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ವಾಗ್ದಾಳಿ ನಡೆಸಿದೆ. ಮೂರ್ಖರಿಗೆ ಬುದ್ಧಿ ಮಂದ ಎನ್ನುವುದು ಮಾತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅದೇ ಆಗಿದೆ. ಅಧಿಕಾರದ ಮದದಿಂದ ಅದರ ಮಿದುಳಿಗೂ ಗೆದ್ದಲು ಹಿಡಿದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ನಾಲ್ಕು ವರ್ಷದ ಹಿಂದೆ ಸರ್ಕಾರ ಮಾಡಲು ಸಿದ್ದರಾಮಯ್ಯ, ಡಿಕೆಶಿ ಮನೆಗೆ ಸಿದ್ದರಾಮಯ್ಯ ಬಂದಿದ್ದರಾ..? ಸುಳ್ಳು ಹೇಳುವುದಕ್ಕೆ ಸಾಸಿವೆ ಕಾಳಿನಷ್ಟಾದರೂ ಸಂಕೋಚ ಬೇಡವೇ..?. 135 ಸೀಟು ಗೆದ್ದಿದ್ದೀವಿ ಎಂಬ ಧಿಮಾಕಿನಲ್ಲಿ ಏನನ್ನೇ ಹೇಳಿದರು ಜನ ನಂಬುತ್ತಾರೆ ಎಂಬ ಅಹಂಕಾರವೇ ಎಂದು ಪ್ರಶ್ನಿಸಿದ್ದಾರೆ.

ದೇವೇಗೌಡರ ಮನೆ ಅಂಗಳದಲ್ಲಿ ಅಂಗಿ ಕಳಚಿ ಮುಖ ಒರೆಸಿಕೊಂಡು ನಿಂತ ಧೀರರು ಯಾರೆಂಬುದು ತಿಳಿದಿಲ್ಲವೆ. ಎಲ್ಲೋ ಇದ್ದ ಕುಮಾರಸ್ವಾಮಿಯನ್ನು ಬೆನ್ನತ್ತಿ, ದೇವೇಗೌಡರ ಪದತಲಕ್ಕೆ ಬಿದ್ದವರ ಪುರಾಣ ಬಿಚ್ಚಿಡಬೇಕೆ. ಕುಮಾರಸ್ವಾಮಿ, ಕೈ ಅಭಯದ ಸಂಕೇತವೆಂದು ನಂಬಿದ್ದರು. ಆದರೆ ಡಿಕೆ ಶಿವಕುಮಾರ್ ಅವರದ್ದು ಕೈ ಎತ್ತುವುದಷ್ಟೇ ಅಲ್ಲ ಕೈ ಕೊಡುವುದರಲ್ಲೂ ಎತ್ತಿದ ಕೈ ಎಂಬುದು ಗೊತ್ತಾಗಲೇ ಇಲ್ಲ. ಅಸೆಂಬ್ಲಿಯಲ್ಲೂ ಕೈ ಎತ್ತಿದರು, ಮಂಡ್ಯದಲ್ಲೂ ಕೈ ಎತ್ತಿದರು, ಬೆಂಗಳೂರು ಗ್ರಾಮಾಂತರದಲ್ಲೂ ಕೈ ಎತ್ತಿದರು. ಪಾಪ ಕುಮಾರಸ್ವಾಮಿ ಅವರು ಅವರನ್ನ ನಂಬಿದರು. ಬೆಂಗಳೂರು ಗ್ರಾಮಾಂತರದಲ್ಲಿ ಅವರ ಕೈ ಹಿಡಿದರು ಕುಮಾರಸ್ವಾಮಿ. ಆದರೆ ಮಂಡ್ಯದಲ್ಲಿ ಅದೇ ಕೈಯನ್ನು ನಡುರಸ್ತೆಯಲ್ಲಿ ಬಿಟ್ಟು ಜಾರಿ ಕೊಂಡರು. ಇದೆಂಥಾ ಕೈ ಚಳಕ ಎಂದು ಕಾಂಗ್ರೆಸ್ ವಿರುದ್ಧ ಜೆಡಿಎಸ್ ವ್ಯಂಗ್ಯವಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ಬಗ್ಗೆ ಹೊಗಳಿದ್ದ ನಟಿ : ಹಿಗ್ಗಾಮುಗ್ಗಾ ಟ್ರೋಲ್ ಆದ ರಶ್ಮಿಕಾ ಮಂದಣ್ಣ..!

ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ. ಹ್ಯಾಟ್ರಿಕ್ ಬಾರಿಸುವ ಕನಸು ಕಾಣುತ್ತಿದ್ದಾರೆ ಮೋದಿ. ಈ ಮಧ್ಯೆ ರಶ್ಮಿಕಾ ಮಂದಣ್ಣ ಮೋದಿಯವರ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ. ಈ ವಿಚಾರ ಚರ್ಚೆಗೆ ಬಂದಿದ್ದು, ಪರ-ವಿರೋಧ ಕೇಳಿ ಬರುತ್ತಿದೆ. ರಶ್ಮಿಕಾ

ಜನಪ್ರತಿನಿಧಿಗಳ ಕೋರ್ಟ್ ನಿಂದ ತಾತ್ಕಾಲಿಕ ರಿಲೀಫ್ : ರೇವಣ್ಣ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ..!

ಬೆಂಗಳೂರು: ಮಹಿಲಕೆಯ ಕಿಡ್ನ್ಯಾಪ್ ಕೇಸಿನಲ್ಲಿ ಮಾಜಿ ಸಚುವ ಹೆಚ್ ಡಿ ರೇವಣ್ಣ ಇನ್ನು ಸಂಕಷ್ಟದಲ್ಲಿಯೇ ಇದ್ದಾರೆ. ಮೊನ್ನೆಯಷ್ಟೇ ಜೈಲಿನಿಂದ ಷರತ್ತು ಬದ್ಧ ಜಾಮೀನು ಪಡೆದು ರಿಲೀಸ್ ಆಗಿರುವ ರೇವಣ್ಣ ಇಂದು ಮತ್ತೆ ಕೋರ್ಟ್ ಗೆ

ಚಿತ್ರದುರ್ಗದಲ್ಲಿ ಮಳೆ | ಜಿಲ್ಲೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ?

ಚಿತ್ರದುರ್ಗ. ಮೇ.17 : ಜಿಲ್ಲೆಯ ಹಲವೆಡೆ ಮಳೆಯಾಗುತ್ತಿದ್ದು ಸಂಜೆ 6 ಗಂಟೆಯ ನಂತರ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಗುಡುಗು ಸಹಿತ  ಮಳೆಯಾಗುತ್ತಿದೆ. ಮಳೆ ಆರಂಭವಾಗಿ ಅರ್ಧ ಗಂಟೆಯ ನಂತರವೂ ಮಳೆ ಮುಂದುವರೆದಿದ್ದು ಉತ್ತಮವಾಗಿ

error: Content is protected !!