Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಿ, ಜನಸ್ನೇಹಿ ಪೊಲೀಸ್ ಆಗಿ ಕಾರ್ಯನಿರ್ವಹಿಸಿ : ಎಡಿಜಿಪಿ ಎಸ್. ಮುರುಗನ್

Facebook
Twitter
Telegram
WhatsApp

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಸುದ್ದಿಒನ್,  ಚಿತ್ರದುರ್ಗ. ಅ.11:  ಸಾರ್ವಜನಿಕರ ದೂರುಗಳಿಗೆ ಸ್ಪಂದಿಸುವ ಮೂಲಕ ಜನಸ್ನೇಹಿ ಪೋಲಿಸ್ ಆಗಿ ಕಾರ್ಯನಿರ್ವಹಿಸಬೇಕು ಎಂದು ಎಡಿಜಿಪಿ ಎಸ್.ಮುರುಗನ್ ಪೋಲಿಸರಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪೊಲೀಸ್ ಕಚೇರಿಗೆ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆ ವಿಭಾಗಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಜಿಲ್ಲೆಯ ಎಲ್ಲ ಪೋಲಿಸ್ ಠಾಣೆ ಹಾಗೂ ಕಚೇರಿಗಳಲ್ಲಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಆಡಳಿತಾತ್ಮಕವಾಗಿ ಜಿಲ್ಲಾ ಪೊಲೀಸ್ ಕಚೇರಿಯ ಲಿಪಿಕ ಸಿಬ್ಬಂದಿಯು ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕುಂದು ಕೊರತೆ,  ಪೊಲೀಸ್ ಅಧಿಕಾರಿಗಳ ಕುಟುಂಬದವರ ಕುಂದು ಕೊರತೆಗಳ ವಿಚಾರಣೆ ನಡೆಸಿದರು.

ಎಡಿಜಿಪಿ ಎಸ್.ಮುರುಗನ್ ಅವರು ಹಿರಿಯೂರು ಡಿ ಎಸ್ ಪಿ ಕಚೇರಿ, ಐಮಂಗಲ, ಅಬ್ಬಿನಹೊಳೆ ಪೊಲೀಸ್ ಠಾಣೆ ಸೇರಿದಂತೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಧಮೇಂದ್ರ ಕುಮಾರ್ ಮೀನಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಸೇರಿದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

IPL 2024 : ಆರ್‌ಸಿಬಿ vs ಸಿಎಸ್‌ಕೆ : ಆರ್‌ಸಿಬಿಗೆ ಉಂಟು 18 ರ ನಂಟು : ಇಂದು ಇತಿಹಾಸ ಮರುಕಳಿಸುತ್ತಾ ?

ಸುದ್ದಿಒನ್ :  IPL 2024 ನಲ್ಲಿ RCB vs CSK ನಡುವಿನ ಇಂದಿನ ಪಂದ್ಯ ಬಹಳ ಮಹತ್ವದ್ದಾಗಿದೆ. ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಗಳ ಕಣ್ಣು ಈ ಪಂದ್ಯದ ಮೇಲಿದೆ. ಏಕೆಂದರೆ ಇಂದಿನ ಪಂದ್ಯ ನಾಕೌಟ್ ಪಂದ್ಯವಾಗಿದೆ.

ಚಿತ್ರದುರ್ಗ | ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಳೆ ವರದಿ

    ಚಿತ್ರದುರ್ಗ, ಮೇ.18:  ಶುಕ್ರವಾರ ಸಂಜೆ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 42.8ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-2ರಲ್ಲಿ 9.2ಮಿ.ಮೀ, ಭರಮಸಾಗರದಲ್ಲಿ 4.4ಮಿ.ಮೀ

error: Content is protected !!