ಮುಂದಿನ ದಿನಗಳಲ್ಲಿ ಕುಮಾರಣ್ಣ ನೂರಕ್ಕೆ ನೂರರಷ್ಟು ಸಿಎಂ ಆಗ್ತಾರೆ : ಜಿಟಿಡಿ

1 Min Read

 

ಹುಬ್ಬಳ್ಳಿ: ಈ ಬಾರಿ ಜನಗಳಿಂದ ಬಹುಮತ ಪಡೆದು ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಗ್ಯಾರಂಟಿಗಳನ್ನು ನೀಡುವ ಮೂಲಕ ಜನಮನ ಗೆಲ್ಲುತ್ತಿದೆ. ಇದರ ನಡುವೆ ಜೆಡಿಎಸ್ ಶಾಸಕ ಕಾಂಗ್ರೆಸ್ ಪತನವಾಗಲಿದೆ ಎಂದಿದ್ದಾರೆ.

ಈಗಾಗಲೇ ಹಲವರು, ಕಾಂಗ್ರೆಸ್ ಸರ್ಕಾರ ಲೋಕಸಭೆಯ ಬಳಿಕ ಇರುವುದು ಅನುಮಾನ ಎಂದೇ ಹೇಳಿದ್ದರು. ಇದೀಗ ಜಿಡಿ ದೇವೇಗೌಡ ಅವರು, ಕಾಂಗ್ರೆಸ್ ನವರಿಂದಾನೇ ಸರ್ಕಾರ ಪತನವಾಗಲಿದೆ ಎಂದಿದ್ದಾರೆ. ಕಾಂಗ್ರೆಸ್ ಶಾಸಕರಾದ ಬಿ ಆರ್ ಪಾಟೀಲ್, ರಾಜು ಕಾಗೆ, ಕಂಪ್ಲಿ ಗಣೇಶ್, ಬಸವರಾಜ ರಾಯರೆಡ್ಡಿ ಸರ್ಕಾರದ ವಿರುದ್ಧವೇ ಮಾತನಾಡುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರೇ ಸರ್ಕಾರವನ್ನು ಬೀಳಿಸುತ್ತಾರೆ ಎಂದಿದ್ದಾರೆ.

ಇದೆ ವೇಳೆ ಕುಮಾರಸ್ವಾಮಿ ಬಗ್ಗೆ ಮಾತನಾಡಿದ ಜಿಟಿ ದೇವೇಗೌಡ ಅವರು, ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ಅವರು ಸಿಎಂ ಆಗಿಯೇ ಆಗುತ್ತಾರೆ. ನೂರಕ್ಕೆ ನೂರರಷ್ಟು ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸುತ್ತಾರೆ ಎಂದಿದ್ದಾರೆ. ಕಾಂಗ್ರೆಸ್ ನಾಯಕರು ಜೆಡಿಎಸ್ ಪಕ್ಷವನ್ನು ದಕ್ಷಿಣಕ್ಕೆ ಮಾತ್ರ ಸೀಮಿತ ಎಂದು ಬಿಂಬಿಸಿದ್ದರು. ಆದರೆ ನಾವೂ ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಭಾಗದಲ್ಲಿಯೇ ಬಲಿಷ್ಠವಾಗಿದ್ದೇವೆ. ಕುಮಾರಣ್ಣ ಅವರನ್ನು ಮುಖ್ಯಮಂತ್ರಿ ಮಾಡಲು, ಜೆಡಿಎಸ್ ಪುನಶ್ಚೇತನ ಕಾರ್ಯಕ್ರಮ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ಖಚಿತ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *