Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಸಿಎಂ ಸುದ್ದಿಗೋಷ್ಠಿ ನಡುವೆ ಮೊಬೈಲ್ ನಲ್ಲಿ ಅಲರ್ಟ್ ಶಬ್ಧ : ಒಂದು ಕ್ಷಣ ಗೊಂದಲದಲ್ಲಿ ಡಿಕೆಶಿ

ಡಿಕೆ ಶಿವಕುಮಾರ್
---Advertisement---

 

ಬೆಂಗಳೂರು: ಇಂದು ಎಲ್ಲರ ಮೊಬೈಲ್ ಗೂ ಅಲರ್ಟ್ ಮೆಸೇಜ್ ಬಂದಿದೆ. ಅದು ಏಕಕಾಲಕ್ಕೆ. ಕಳೆದ ಎರಡ್ಮೂರು ದಿನದ ಹಿಂದೆಯೇ ಈ ಬಗ್ಗೆ ಸರ್ಕಾರ ಎಚ್ಚರಿಕೆ ನೀಡಿತ್ತು. ಅದನ್ನು ಓದಿದವರಿಗೆ ಇಂದು ಶಾಕ್ ಅಂತ ಏನು ಅನ್ನಿಸಿಲ್ಲ. ಆದರೆ ಏಕಕಾಲಕ್ಕೆ ಮೆಸೇಜ್ ನಲ್ಲಿ ಅದರಲ್ಲೂ ಎಮರ್ಜೆನ್ಸಿ ಅಲರ್ಟ್ ಅಂತ ಬಂದಿದ್ದು ನೋಡಿ ಕೆಲವರು ಶಾಕ್ ಆಗಿದ್ದಾರೆ.

ಹೀಗೆ ಡಿಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನಡೆಸುತ್ತಿದ್ದರು. ಈ ವೇಳೆ ಏಕಕಾಲಕ್ಕೆ‌ ಎಲ್ಲರ ಮೆಸೇಜ್ ನಲ್ಲೂ ಗುರ್ ಗುರ್ ಸೌಂಡ್ ಕೇಳಿಸಿದೆ. ಈ ಸೌಂಡ್ ಕೇಳಿ ಮಾತು ನಿಲ್ಲಿಸಿದ ಡಿಸಿಎಂ, ಒಂದು ಕ್ಷಣ ಎಲ್ಲರ ಮುಖವನ್ನು ನೋಡಿದ್ದಾರೆ. ಏನಾಗ್ತಿದೆ ಎಂಬ ಪ್ರಶ್ನೆಯನ್ನು ಕೇಳುವಂತೆ ಇತ್ತು. ಬಳಿಕ ಅಕ್ಕ ಪಕ್ಕ ಇದ್ದವರೇ ಇದು ಕೇಂದ್ರ ಸರ್ಕಾರದಿಂದ ಬಂದಂತ ಅಲರ್ಟಗ ಮೆಸೇಜ್ ಎಂದು ಹೇಳಿದ್ದಾರೆ. ಬಳಿಕ ಇರಲಿ ಇರಲಿ ಬಿಡಿ ನಮ್ಮನ್ನು, ನಿಮ್ಮನ್ನು ಅಲರ್ಟ್ ಮಾಡುತ್ತಿದ್ದಾರೆ ಎಂದು ಮಾತು ಮುಂದುವರೆಸಿದ್ದಾರೆ ಡಿಸಿಎಂ.

ಇನ್ನು ಸುನಾಮಿ, ಪ್ರವಾಹ, ಭೂಕಂಪದಂತ ತುರ್ತು ಸಮಯದಲ್ಲಿ ಜನರನ್ನು ಎಚ್ಚರಿಸುವ ಕೆಲಸಕ್ಕೆ ಕೇಂದ್ರ ಸರ್ಕಾರ ಕೈ ಹಾಕಿದ್ದು, ಅದರ ಭಾಗವಾಗಿ ಇಂದು ಎಲ್ಲರ ಮೊಬೈಲ್ ಗಳಿಗೂ ನೋಟಿಫಿಕೇಷನ್ ಕಳುಹಿಸಲಾಗಿದೆ. ಮೊದಲಿಗೆ ಆ ಸಂದೇಶವನ್ನು ಇಂಗ್ಲಿಷ್ ನಲ್ಲಿ ಕಳುಹಿಸಿದ್ದು, ಬಳಿಕ ಕನ್ನಡದಲ್ಲಿಯೂ ಕಳುಹಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...