ಅಕ್ಟೋಬರ್‌ 14 ಮತ್ತು 15 ರಂದು ದೊಡ್ಡಬಳ್ಳಾಪುರದಲ್ಲಿ ರಾಜ್ಯ ಮಟ್ಟದ ನಾಯಕತ್ವ ತರಬೇತಿ ಶಿಬಿರ

1 Min Read

 

ವರದಿ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.12  : ರಾಜ್ಯ ಮಟ್ಟದ ನಾಯಕತ್ವ ತರಬೇತಿ ಶಿಬಿರ ಅಕ್ಟೋಬರ್‌ 14 ಮತ್ತು 15 ರಂದು ದೊಡ್ಡಬಳ್ಳಾಪುರದ ಸ್ಕೌಟ್ ಕ್ಯಾಂಪ್ ಬೆಸೆಂಟ್ ಪಾರ್ಕ್‍ನಲ್ಲಿ ನಡೆಯಲಿದೆ.

ಅಕ್ಟೋಬರ್ 14 ರಂದು ಬೆಳಿಗ್ಗೆ 9-30 ಕ್ಕೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಗೌರವಾಧ್ಯಕ್ಷ ಡಾ.ಎ.ಎಸ್.ಕಿರಣ್‍ಕುಮಾರ್ ಶಿಬಿರ ಉದ್ಗಾಟಿಸಲಿದ್ದಾರೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ವಿಜ್ಞಾನ ಗ್ರಾಮ ನೀಲನಕ್ಷೆ ಉದ್ಗಾಟಿಸುವರು.

ನನ್ನೊಳಗಿನ ನಾನು, ಪರಿಷತ್ತು ಧ್ಯೇಯ ಬೆಳವಣಿಗೆ ಮತ್ತು ಉತ್ಸಾಹ-ಯಶಸ್ಸು, ಕಾಯಕದ ಪ್ರಸ್ತುತತೆ, ಪರಿಷತ್ತಿನ ಮುಂದಿನ ಗುರಿ-ಬಲವರ್ಧನೆ, ಅಮೃತಾ ಅಮಾವಾಸ್ಯೆ, ಸಮೂಹ ಮಾಧ್ಯಮ ಚಿತ್ತ-ಎತ್ತ, ನಾನೂ ಮಹಿಳೆ ನನ್ನ ನಡಿಗೆ ಎತ್ತ ವಿಚಾರಗೋಷ್ಠಿ ನಡೆಯಲಿದೆ. ಸಂಜೆ ನಾಲ್ಕು ಗಂಟೆಗೆ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಮಾತನಾಡುವರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಪ್ರಶಸ್ತಿ ಪತ್ರ ವಿತರಿಸುವರು.
ಡಾ.ಸೋಮಶೇಖರ್ ಎಂ.ವಿ. ನೆನಪಿನ ಕಾಣಿಕೆ ವಿತರಿಸಲಿದ್ದಾರೆ.

ಚಿತ್ರದುರ್ಗ ಜಿಲ್ಲೆಯಿಂದ ಹನ್ನೆರಡು ಜನ ಶಿಬಿರದಲ್ಲಿ ಭಾಗವಹಿಸಲಿದ್ದಾರೆಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಜಿಲ್ಲಾಧ್ಯಕ್ಷ ನಾಗರಾಜ್ ಸಂಗಂ, ಉಪಾಧ್ಯಕ್ಷ ಕಿರಣ್‍ಶಂಕರ್, ಕಾರ್ಯದರ್ಶಿ ಪಿ.ಲೋಕೇಶ್, ಸಂಘಟನಾ ಕಾರ್ಯದರ್ಶಿ ಎಂ.ರಂಗಪ್ಪ, ಖಜಾಂಚಿ ಬಸಣ್ಣ ಇವರುಗಳು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *