Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕ ಪ್ರದೇಶ ಕುರುಬರ ಸಂಘಕ್ಕೆ ಉಪಾಧ್ಯಕ್ಷರಾಗಿ ಚಿತ್ರದುರ್ಗದ ಶ್ರೀಮತಿ ಆರ್.ರಜನಿ ಲೇಪಾಕ್ಷ ಅವಿರೋಧ ಆಯ್ಕೆ

---Advertisement---

 

ಸುದ್ದಿಒನ್, ಬೆಂಗಳೂರು, ಅಕ್ಟೋಬರ್.13 : ಕರ್ನಾಟಕ ಪ್ರದೇಶ ಕುರುಬರ ಸಂಘಕ್ಕೆ ಉಪಾಧ್ಯಕ್ಷರಾಗಿ ಚಿತ್ರದುರ್ಗದ  ಶ್ರೀಮತಿ ಆರ್.ರಜನಿ ಲೇಪಾಕ್ಷ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಗಾಂಧಿನಗರದಲ್ಲಿರುವ ಕೇಂದ್ರ ಕಛೇರಿಯಲ್ಲಿ ಗುರುವಾರ ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ಚಿತ್ರದುರ್ಗದಲ್ಲಿ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಆರ್.ರಜನಿ ಲೇಪಾಕ್ಷ, ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಚುನಾವಣಾ ಅಧಿಕಾರಿಯಾಗಿದ್ದ ಹಾಗೂ ಹಿರಿಯ ನಿರೀಕ್ಷಕರು, ಸಹಕಾರ ಸಂಘಗಳ ಉಪನಿಬಂಧಕರ ಕಛೇರಿ, 4 ನೇ ವಲಯ ಬೆಂಗಳೂರು ನಗರ ಜಿಲ್ಲೆಯ ಶಶಿಧರ ಡಿ. ಪ್ಯಾಟಿಸಿಂಗಿ ಅವರು ಘೋಷಿಸಿದರು.

ಇದೇ ವೇಳೆ ಕರ್ನಾಟಕ ಪ್ರದೇಶ ಕುರುಬರ ಸಂಘಕ್ಕೆ ನೂತನ ರಾಜ್ಯಾಧ್ಯಕ್ಷರಾಗಿ, ಈರಣ್ಣ ಮಾನ್ವಿ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸೋಮಶೇಖರ್ ಆಯ್ಕೆಯಾಗಿದ್ದಾರೆ.

ಆಯ್ಕೆಗೆ ಸಹಕರಿಸಿದ ಬಿ.ಜಿ.ಗೋವಿಂದಪ್ಪ , ಶಾಸಕರು ಹೊಸದುರ್ಗ ಮತ್ತು ಶ್ರೀ ಕನಕ ಗುರುಪೀಠ ಆಡಳಿತಾಧಿಕಾರಿಗಳು, ಸುಬ್ಬಣ್ಣ, ನಿಕಟಪೂರ್ವ ರಾಜ್ಯಾಧ್ಯಕ್ಷರು, ವೆಂಕಟೇಶ್, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ, ರಾಮಚಂದ್ರಪ್ಪನವರು, ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ಚಿತ್ರದುರ್ಗ ಜಿಲ್ಲೆಯ ಬಿ.ಟಿ.ಜಗದೀಶ್, ನಿಕಟಪೂರ್ವ ಹಿರಿಯ ಉಪಾಧ್ಯಕ್ಷರು, ಹಾಗೂ ಡಾ.ಎಂ.ಹೆಚ್.ಕೃಷ್ಣ ಮೂರ್ತಿ, ಡಾ.ಸಿದ್ದರಾಮಪ್ಪ, ಜಿಲ್ಲೆಯ ಸಮಾಜದ ಬಂಧುಗಳು ಮತ್ತು ರಾಜ್ಯದ ಎಲ್ಲಾ ನಿರ್ದೇಶಕರುಗಳಿಗೆ ಸಮಾಜದ ಬಾಂಧವರಿಗೆ ಶ್ರೀಮತಿ ಆರ್.ರಜನಿ ಲೇಪಾಕ್ಷ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಸಮಾಜದ ಹಿರಿಯರ ಸಹಕಾರದಿಂದ ಮತ್ತು ಎಲ್ಲಾ ನಿರ್ದೇಶಕರ ಮಾರ್ಗದರ್ಶನ ಪಡೆದು ಕಾರ್ಯನಿರ್ವಹಿಸುವುದಾಗಿ ನೂತನವಾಗಿ ಉಪಾಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಆರ್.ರಜನಿ ಲೇಪಾಕ್ಷ ಅವರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...