Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಎಂ ವಿರುದ್ಧ ಗುಡುಗಿದ ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ..!

Facebook
Twitter
Telegram
WhatsApp

 

ಬೆಂಗಳೂರು: ಬಿಜೆಪಿ ಸರ್ಕಾರವಿದ್ದಾಗ 40% ಕಮೀಷನ್ ಆರೋಪ ಮಾಡಿದ್ದ ಕೆಂಪಣ್ಣ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಹರಿಹಾಯ್ದಿದ್ದಾರೆ. ಇಂದು ಸುದ್ದಿಗೋಷ್ಟಿ ನಡೆಸಿ, ಕಾಂಗ್ರೆಸ್ ಸರ್ಕಾರ ಕೂಡ ಬಾಕಿ ಇರುವ ಬಿಲ್ ಪಾವತಿ ಮಾಡಿಲ್ಲ ಅಂತ ಹೇಳಿ ಆಕ್ರೋಶ ಹೊರ ಹಾಕಿದ್ದಾರೆ.

ಕಳೆದ ಐದು ತಿಂಗಳಿಂದ ಸರ್ಕಾರ ಬಾಕಿ ಇರುವ ಬಿಲ್ ಅನ್ನು ಪಾವತಿ ಮಾಡಿಲ್ಲ. ಮೊನ್ನೆಯಷ್ಟೇ ಒಂದು ಸಾವಿರ ಕೋಟಿ ಇರುವ ಕಾಮಗಾರಿಗಳ ಬಿಲ್ ಕ್ಲಿಯರ್ ಆಗಿದೆ. ಬಿಬಿಎಂಪಿಯಿಂದ ಇನ್ನು ನಾಲ್ಕು ಸಾವಿರ ಕೋಟಿ ರೂಪಾಯಿ ಬಾಕಿ ಇದೆ. ಪ್ರತಿ ಬಾರಿಯೂ ಸರ್ಕಾರಗಳು ಹಿಂದಿನ ಸರ್ಕಾರಗಳ ಮೇಲೆ ಬೊಟ್ಟು ಮಾಡಿ ತೋರಿಸುತ್ತವೆ. ಹುಬ್ಬಳ್ಳಿಯಲ್ಲಿ ಈಗಾಗಲೇ ಗುತ್ತಿಗೆದಾರನೊಬ್ಬ ವಿಷ ತೆಗೆದುಕೊಂಡಿದ್ದಾನೆ. ನಾವೂ ಕಷ್ಟದಲ್ಲಿದ್ದೇವೆ ಎಂದಿದ್ದಾರೆ.

ಇನ್ನು ರೈತರಾದರೂ ಪರವಾಗಿಲ್ಲ. ಆದರೆ ನಮ್ಮ ಪರಿಸ್ಥಿತಿ ಅಯೋಮಯವಾಗಿದೆ. ಕೂಡಲೇ ಬಾಕಿ ಇರುವ ಬಿಲ್ ಅನ್ನು ಪಾವತಿಸಿ. ಸೀನಿಯಾರಿಟಿ ಆಧಾರದ ಮೇಲೆ ಪಾವತಿ‌ಮಾಡಬೇಕು. ಗುತ್ತಿಗೆದಾರರು ಆತ್ಮಹತ್ಯೆಯ ದಾರಿ ಹಿಡಿದಿದ್ದಾರೆ. ಈಗ ಹಣ ಬಿಡುಗಡೆಯಾಗದೆ ಹೋದಲ್ಲಿ ಸಾಕಷ್ಟು ಸಾವು ನೋವಾಗುತ್ತದೆ. ಹೊರ ರಾಜ್ಯದ ಗುತ್ತಿಗೆದಾರರಿಗೆ ಈಗ ಮಣೆ‌ಹಾಕಲಾಗುತ್ತಿದೆ. ರೂಲ್ಸ್ ಪ್ರಕಾರ ಅದು ಕಾನೂನು ಬಾಹಿರ ಅಲ್ಲವಾ. ಹಿಂದಿನ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಕೇಳಿ ಬಂದಿತ್ತು. ಆದರೆ ಈಗ ಕಮಿಷನ್ ಬಗ್ಗೆ ಯಾವುದೇ ದೂರು ಬಂದಿಲ್ಲ. ನಾಲ್ಕು ಬಾರಿ ಸಿಎಂ ಅವರನ್ನು ಭೇಟಿ ಮಾಡಿದ್ದೇವೆ. ನಮ್ಮ ಬಳಿ ಈಗಲೇ ಹಣವಿಲ್ಲ. ಜಿಎಸ್ಟಿ ಎಲ್ಲಾ ಎಲ್ಲಿಂದ ತಂದು ಕಟ್ಟೋಣಾ ಎಂದು ಕೆಂಪಣ್ಣ ಆಕ್ರೋಶ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

error: Content is protected !!