Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕುಂಚಿಟಿಗ ಜನಾಂಗಕ್ಕೆ ಕೇಂದ್ರ ಸರ್ಕಾರ ಓ.ಬಿ.ಸಿ. ಮೀಸಲಾತಿ ನೀಡುವಂತೆ ಒತ್ತಾಯಿಸಿ ಚಿತ್ರದುರ್ಗದಲ್ಲಿ ಧರಣಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ಅಕ್ಟೋಬರ್.13 : ಕುಂಚಿಟಿಗ ಜನಾಂಗಕ್ಕೆ ಕೇಂದ್ರ ಸರ್ಕಾರ ಓ.ಬಿ.ಸಿ. ಮೀಸಲಾತಿ ನೀಡುವಂತೆ ಹಿರಿಯೂರು ತಾಲ್ಲೂಕು ಕುಂಚಿಟಿಗರ ಕ್ಷೇಮಾಭಿವೃದ್ದಿ ಸಂಘದಿಂದ ಒನಕೆ ಓಬವ್ವ ವೃತ್ತದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು.

ಕಳೆದ ಹನ್ನೊಂದರಂದು ಹಿರಿಯೂರಿನಿಂದ ಪಾದಯಾತ್ರೆ ಹೊರಟ ಕುಂಚಿಟಿಗ ಜನಾಂಗದವರು ಶುಕ್ರವಾರ ಚಿತ್ರದುರ್ಗಕ್ಕೆ ಆಗಮಿಸಿ ಧರಣಿ ಆರಂಭಿಸಿದರು.

ರಾಜ್ಯದ ಹದಿನೆಂಟು ಜಿಲ್ಲೆ ನಲವತ್ತೈದು ತಾಲ್ಲೂಕುಗಳಲ್ಲಿರುವ 26 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿರುವ ಕುಂಚಿಟಿಗರು ಕಳೆದ 26 ವರ್ಷಗಳಿಂದಲೂ ಸರ್ಕಾರಕ್ಕೆ ಬೇಡಿಕೆಯಿಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕುಲಶಾಸ್ತ್ರ ಅಧ್ಯಯನ ನಡೆಸಿ ವರದಿಯನ್ನು ಸಚಿವ ಸಂಪುಟದಲ್ಲಿ ಮಂಡಿಸಿ ಅನುಮೋದನೆಗೊಳಿಸಿದ್ದು, ಕೇಂದ್ರ ಸರ್ಕಾರಕ್ಕೆ ರವಾನಿಸಬೇಕಿದೆ ಎಂದು ಧರಣಿನಿರತರು ಒತ್ತಾಯಿಸಿದರು.

ಕುಂಚಿಟಿಗರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಹೆಚ್.ರಂಗನಾಥ, ಗೌರವಾಧ್ಯಕ್ಷ ಎಂ.ಗಿರಿಸ್ವಾಮಿ, ಉಪಾಧ್ಯಕ್ಷ ಜೋಗೇಶ್, ಸಂಘಟನಾ ಕಾರ್ಯದರ್ಶಿ ಡಿ.ಚಂದ್ರಗಿರಿ, ಸಹ ಕಾರ್ಯದರ್ಶಿ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ವಿ.ಕುಬೇರಪ್ಪ, ಖಜಾಂಚಿ ಡಿ.ಹನುಮಂತರಾಯ ಇನ್ನು ಮುಂತಾದವರು ಧರಣಿಯಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...