Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಲೆಕ್ಷನ್ ‘ ಕೈ ‘ ಚಳಕ ಜೋರಾಗಿದೆ, ಪಂಚರಾಜ್ಯಗಳ ಪಾಲಿಗೆ ಕರ್ನಾಟಕ ಸಮೃದ್ಧ ಎಟಿಎಮ್ : ಐಟಿ ರೇಡ್ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ

Facebook
Twitter
Telegram
WhatsApp

 

ಬೆಂಗಳೂರು: ಇಂದು ಐಟಿ ರೇಡ್ ವೇಳೆ ಗುತ್ತಿಗೆದಾರನ ಮನೆಯಲ್ಲಿ 42 ಕೋಟಿ ಹಣ ಸಿಕ್ಕಿದೆ. ಈ ಬಗ್ಗೆ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಪಂಚರಾಜ್ಯ ಚುನಾವಣೆ ಘೋಷಣೆ ಆಗಿದ್ದೇ ತಡ, ರಾಜ್ಯದಲ್ಲಿ ಕುರುಡು ಕಾಂಚಾಣ ಕಂತೆ ಕಂತೆಯಾಗಿ ಬಾಕ್ಸ್ ಗಳಲ್ಲಿ ಕುಣಿಯುತ್ತಿದೆ! ಅದೂ ಮಂಚದ ಕೆಳಗೆ ಎಂದಿದ್ದಾರೆ.

ಐಟಿದಾಳಿ ವೇಳೆ ಗುತ್ತಿಗೆದಾರನ ಮನೆಯಲ್ಲಿ ಪತ್ತೆಯಾದ ಹಣ ಯಾರದ್ದು? ಯಾರ ಹೆಣದ ಮೇಲೆ ಸಂಗ್ರಹಿಸಿದ ಪಾಪದ ಹಣವಿದು? ಈ ಪ್ರಶ್ನೆಗಳಿಗೆ ಉತ್ತರ ಬೇಕಿದೆ. ಆಯ್ದ ಗುತ್ತಿಗೆದಾರರಿಗೆ ಬಿಬಿಎಂಪಿಯಿಂದ 650 ಕೋಟಿ ರೂ. ಬಿಡುಗಡೆಯಾದ ಬೆನ್ನಲ್ಲೇ ಈ 42 ಕೋಟಿ ರೂ. ಐಟಿ ಅಧಿಕಾರಿಗಳಿಗೆ ಸಿಕ್ಕಿಬೀಳುತ್ತದೆ. ಅಲ್ಲಿಗೆ ಕಲೆಕ್ಷನ್ ನಿಜ ಎಂದಾಯಿತು. ಅದು ಎಷ್ಟು ಪರ್ಸಂಟೇಜ್ ? ಅದರ ಹಿಂದೆ ಅಡಗಿ ಕೂತಿರುವ ಆದಿಪುರುಷರು ಯಾರು ?

23 ಬಾಕ್ಸ್ ಗಳಲ್ಲಿ ತುಂಬಿಡಲಾಗಿದ್ದ ಈ ಇಡುಗಂಟು ಪಕ್ಕದ ತೆಲಂಗಾಣಕ್ಕೆ ಹೊರಟು ನಿಂತಿತ್ತು ಎನ್ನುವುದು ಮಾಹಿತಿ. ಅಲ್ಲಿಗೆ ಚುನಾವಣೆಗಾಗಿ ಈ ಹಣವನ್ನು ಸಂಗ್ರಹ ಮಾಡಲಾಗಿತ್ತು ಎನ್ನುವುದು ಸತ್ಯ. ಈ ಕನಕ ಮಹಾಲಕ್ಷ್ಮಿಯ ಕಲೆಕ್ಷನ್ ಗೆ ‘ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ’ಯ ಕೈ ಕರಾಮತ್ತು ಅಂತ ಇನ್ನೊಂದು ಮಾಹಿತಿ. ಅಷ್ಟರಲ್ಲಿ ಐಟಿ ಇಲಾಖೆ ಮುಗಿಬಿದ್ದ ಪರಿಣಾಮ, ಗುಟ್ಟು ರಟ್ಟಾಗಿದೆ. ಅಲ್ಲಿಗೆ @INCKarnataka ಸರಕಾರದಲ್ಲಿ ಪರ್ಸಂಟೇಜ್ ಪಾರಮ್ಯ ಅವ್ಯಾಹತ ಎಂದಾಯಿತು?

ಈಗ ಹೇಳಿ ಸನ್ಮಾನ್ಯ @siddaramaiah ನವರೇ.. 42 ಕೋಟಿ ರೂ. ಬಗ್ಗೆ ಯಾವ ತನಿಖೆ ಮಾಡಿಸುತ್ತೀರಿ? ಸಿಬಿಐ, ಈಡಿ, ಹಾಲಿ ನ್ಯಾಯಾಧೀಶರು, ನಿವೃತ್ತ ನ್ಯಾಯಾಧೀಶರು..? ದಯಮಾಡಿ ಹೇಳಿ. ರೈತರು ಬರ, ವಿದ್ಯುತ್ ಬಿಕ್ಕಟ್ಟಿನಿಂದ ಕಂಗೆಟ್ಟಿದ್ದಾರೆ. ಗುತ್ತಿಗೆದಾರರು ಅಯೋಮಯ ಸ್ಥಿತಿಯಲ್ಲಿದ್ದಾರೆ. ಆದರೂ ಕಲೆಕ್ಷನ್ ‘ ಕೈ ‘ ಚಳಕ ಜೋರಾಗಿದೆ. ಪಂಚರಾಜ್ಯಗಳ ಪಾಲಿಗೆ ಕರ್ನಾಟಕ ಸಮೃದ್ಧ ಎಟಿಎಮ್. ಕಾವೇರಿ ನೀರು  ತಮಿಳುನಾಡಿಗೆ ನಿರಂತರ ಹರಿಯುತ್ತಿದ್ದರೆ, ಕನ್ನಡಿಗರ ತೆರಿಗೆಲಕ್ಷ್ಮೀ ಎಲೆಕ್ಷನ್ ರಾಜ್ಯಗಳ ಪಾಲಾಗುತ್ತಿದ್ದಾಳೆ.

ಆದಿಯಿಂದಲೂ ಇದೇ ಕಥೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೈಕಮಾಂಡ್ ಗೆ ಹಬ್ಬ. ಈಗಲೂ ಅದೇ ಆಗುತ್ತಿದೆ. ಪಂಚರಾಜ್ಯಗಳ ಚುನಾವಣೆಗಾಗಿ ಕರ್ನಾಟಕಕ್ಕೆ ಕನ್ನ ಹೊಡೆಯಲಾಗಿದೆ. ವೋಟು ಕೊಟ್ಟ ತಪ್ಪಿಗೆ ಕಾಂಗ್ರೆಸ್ ಉಂಡು ಹೋಗುತ್ತಿದೆ, ಕೊಂಡು ಹೋಗುತ್ತಿದೆ. ಇದು ಕನ್ನಡಿಗರ ಕರ್ಮ ಎಂದು ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಳೆರಾಯನನ್ನೇ ಬೇಡಿದ ಅಭಿಮಾನಿಗಳು : RCB ಗೆಲುವಿಗಾಗಿ ವಿಶೇಷ ಪೂಜೆ

RCB ಅಭಿಮಾನಿಗಳು ಕಡೆಯ ತನಕ ತಮ್ಮ ಟೀಂ ಬಗ್ಗೆ ಹೋಪ್ ಕಳೆದುಕೊಳ್ಳುವುದೇ ಇಲ್ಲ. ಯಾಕಂದ್ರೆ ಆರ್ಸಿಬಿ ಆಟಗಾರರು ಸಹ ಅದೇ ಥರ ಕೊನೆಯಲ್ಲಿ ಚೋಕ್ ಕೊಡ್ತಾರೆ. ಈ ಬಾರಿಯ ಐಪಿಎಲ್ ನಲ್ಲಿ ಆರಂಭದ ಅಷ್ಟು

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

error: Content is protected !!