Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಚೆನ್ನಮ್ಮಾಜೀ ವಿಜಯ ವೀರಜ್ಯೋತಿ ಯಾತ್ರೆ ರಥಕ್ಕೆ ಭವ್ಯ ಸ್ವಾಗತ

Facebook
Twitter
Telegram
WhatsApp

 

ಚಿತ್ರದುರ್ಗ. ಅ.13: ಐತಿಹಾಸಿಕ ಕಿತ್ತೂರು ಉತ್ಸವದ ಅಂಗವಾಗಿ ಕಿತ್ತೂರು ಚೆನ್ನಾಮ್ಮಾಜೀಯ ವಿಜಯ ವೀರಜ್ಯೋತಿ ಯಾತ್ರೆಗೆ ಬೆಂಗಳೂರಿನಲ್ಲಿ ಚಾಲನೆ ನೀಡಲಾಗಿದ್ದು, ಯಾತ್ರೆಯ ರಥವು ತುಮಕೂರಿನ ಮಾರ್ಗವಾಗಿ ಶುಕ್ರವಾರ ಸಂಜೆ  ಚಿತ್ರದುರ್ಗ ನಗರಕ್ಕೆ ಆಗಮಿಸಿತು.

ನಗರದ ಚಳ್ಳಕೆರೆ ಗೇಟ್ ಬಳಿ ಚೆನ್ನಾಮ್ಮಾಜಿಯ ವಿಜಯ ವೀರಜ್ಯೋತಿ ಯಾತ್ರೆ ರಥಕ್ಕೆ ಜಿಲ್ಲಾಡಳಿತದ ವತಿಯಿಂದ ಉಪವಿಭಾಗಾಧಿಕಾರಿ ಎಂ.ಕಾರ್ತೀಕ್, ತಹಶೀಲ್ದಾರ್ ಡಾ.ನಾಗವೇಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ‌ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ. ವೈಶಾಲಿ, ರಂಗ ನಿರ್ದೇಶಕ ಕೆ.ಪಿ.ಎಂ.ಗಣೇಶಯ್ಯ, ಕೆ.ಎಫ್.ಸಿ.ಎಸ್.ಸಿ ಸಹಾಯಕ ವ್ಯವಸ್ಥಾಪಕ ಎಂ.ಹನುಮಂತಪ್ಪ, ಮುಖಂಡರಾದ ಶ್ರೀನಿವಾಸ್, ಮೋಕ್ಷಾ ರುದ್ರಸ್ವಾಮಿ, ರೀನಾ ವೀರಭದ್ರಪ್ಪ, ಉಮಾ, ಪ್ರೇಮ, ಪಾರ್ವತಮ್ಮ, ಶ್ವೇತಾ ಹಾಗೂ ಅ.ಭಾ.ವೀ.ಲಿಂ ಮಹಿಳಾ ಘಟಕ, ಪಂಚಮಸಾಲಿ ಸಮಾಜ ಹಾಗೂ ಕಿತ್ತೂರು ರಾಣಿ ಚೆನ್ನಮ್ಮಾಜಿಯ ಅಭಿಮಾನಿ ಬಳಗ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಪೂಜೆ ಸಲ್ಲಿಸುವ ಮೂಲಕ ಗೌರವದಿಂದ ಬರಮಾಡಿಕೊಂಡರು.

ಹುಲ್ಲೇಹಾಳ್ ನಾಗರಾಜ ಮತ್ತು ಸಂಗಡಿಗರು ಕಹಳೆ, ನಾಸಿಕ್ ಡೋಲು ಹಾಗೂ ಛತ್ರಿ ಚಾಮರಗಳೊಂದಿಗೆ ನಗರದ ಚಳ್ಳಕೆರೆ ಗೇಟಿನಿಂದ ವೈಶಾಲಿ ಸರ್ಕಲ್, ಜಿಲ್ಲಾಸ್ಪತ್ರೆಯ ಮುಂಭಾಗ, ಮದಕರಿ ವೃತ್ತ, ಒನಕೆ ಓಬವ್ವ ವೃತ್ತ ಸೇರಿದಂತೆ ನಗರದ ಪ್ರಮುಖ ವೃತ್ತಗಳ್ಲಿ ಸಂಚರಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ವಿಜೃಂಭಣೆಯಿಂದ ಮೆರವಣಿಗೆ ಸಾಗಿಬಂದಿತು.

ಅಪಾರ ಜನಸ್ತೋಮದೊಂದಿಗೆ ಸಾಗಿ ಬಂದ ಕಿತ್ತೂರು ರಾಣಿ ಚನ್ನಮ್ಮಾಜಿಯ ವಿಜಯ ವೀರ ಜ್ಯೋತಿ ಯಾತ್ರೆಯನ್ನು ಜಿಲ್ಲಾಡಳಿತದ ವತಿಯಿಂದ ಅದ್ದೂರಿಯಾಗಿ ಬೀಳ್ಕೊಡಲಾಯಿತು. ವಿಜಯ ರಥಯಾತ್ರೆಯು ಸಂಜೆ 7.30ಕ್ಕೆ ದಾವಣಗೆರೆ ಜಿಲ್ಲೆಗೆ ಪ್ರಯಾಣಿಸಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!