Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಜಯ : ವಿಶ್ವಕಪ್‌ನಲ್ಲಿ ಮುಂದುವರೆದ ಗೆಲುವಿನ ನಾಗಾಲೋಟ

---Advertisement---

ಸುದ್ದಿಒನ್ : ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾದ ಜೈತ್ರ ಯಾತ್ರೆ ಮುಂದುವರೆದಿದೆ. ಇಂದಿನ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಮುನ್ನ ಆಡಿದ 7 ಏಕದಿನ ವಿಶ್ವಕಪ್ ಪಂದ್ಯಗಳನ್ನು ಭಾರತ ಗೆದ್ದುಕೊಂಡಿದೆ.ಇಂದು ಕೂಡ ಅದೇ ಫಲಿತಾಂಶವನ್ನು ಪುನರಾವರ್ತನೆಯಾಗಿದೆ.

8-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆಲ್ ರೌಂಡ್ ಪ್ರದರ್ಶನ ನೀಡಿ ಪಾಕಿಸ್ತಾನವನ್ನು ಮಣಿಸಿತು. ಮೊದಲಿಗೆ ಬೌಲಿಂಗ್ ನಲ್ಲಿ ಬಿಗಿಯಾಗಿದ್ದ ಟೀಂ ಇಂಡಿಯಾ ಟಿ20 ಶೈಲಿಯ ಆಟದೊಂದಿಗೆ ಬ್ಯಾಟಿಂಗ್ ನಲ್ಲಿ ಸಿಡಿದೆದ್ದಿತು. ಈ ಮೂಲಕ 2023 ರ ODI ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್ ವಿಜಯಗಳನ್ನು ದಾಖಲಿಸಿದೆ.
ನಾಯಕ ರೋಹಿತ್ ಶರ್ಮಾ (86) ಮತ್ತೊಮ್ಮೆ ಅಬ್ಬರದ ಆಟವಾಡಿದ ಪಾಕಿಸ್ತಾನ 30.3 ಓವರ್ ಗಳಲ್ಲಿ 192 ರನ್ ಗಳ ಗುರಿ ಬೆನ್ನಟ್ಟಿತು. ಭಾರತದ ವೇಗಿ ಜಸ್ಪ್ರೀತ್ ಬುಮ್ರಾ ‘ಪಂದ್ಯದ ಆಟಗಾರ’ ಪ್ರಶಸ್ತಿ ಪಡೆದರು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನಕ್ಕೆ ಕನಿಷ್ಠ 50 ಓವರ್‌ಗಳನ್ನು ಸಂಪೂರ್ಣವಾಗಿ ಆಡಲು ಸಾಧ್ಯವಾಗಲಿಲ್ಲ. ಭಾರತದ ಬೌಲರ್‌ಗಳು 42.5 ಓವರ್‌ಗಳಲ್ಲಿ 191 ರನ್‌ಗಳಿಗೆ ಕುಸಿದರು. ಒಂದು ಹಂತದಲ್ಲಿ ಬಲಿಷ್ಠ ಸ್ಥಿತಿಯಲ್ಲಿದ್ದ ಪಾಕಿಸ್ತಾನ ಒತ್ತಡಕ್ಕೆ ಮಣಿದು ಮೇಲಿಂದ ಮೇಲೆ ವಿಕೆಟ್ ಒಪ್ಪಿಸಿತು. ಕೇವಲ 36 ರನ್ ಸೇರಿಸುವಷ್ಟರಲ್ಲಿ ಕೊನೆಯ 8 ವಿಕೆಟ್ ಕಳೆದುಕೊಂಡಿತು.  ತಂಡದ ಬ್ಯಾಟ್ಸ್‌ಮನ್‌ಗಳ ಪೈಕಿ ಬಾಬರ್ ಅಜಮ್ ಮಾತ್ರ ಅರ್ಧಶತಕ ಗಳಿಸಿದರು. ಐದು ಬ್ಯಾಟರ್‌ಗಳನ್ನು ಒಂದೇ ಅಂಕೆಗೆ ಸೀಮಿತಗೊಳಿಸಲಾಯಿತು. ಇದರಿಂದಾಗಿ ಪಾಕಿಸ್ತಾನ 42.5 ಓವರ್‌ಗಳಲ್ಲಿ 191 ರನ್‌ಗಳಿಗೆ ಆಲೌಟಾಯಿತು. ಟೀಂ ಇಂಡಿಯಾದ ಬೌಲರ್‌ಗಳಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್ ಮತ್ತು ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರು.

ಬಳಿಕ ನಿಗಧಿತ ಗುರಿಯನ್ನು ಬೆನ್ನತ್ತಿದ ಟೀಂ ಇಂಡಿಯಾದ ಬ್ಯಾಟ್ಸ್ ಮನ್ ಗಳು ಪಾಕ್ ಬೌಲರ್ ಗಳನ್ನು ಚೆಂಡಾಡಿದರು. ಆರಂಭಿಕ ಆಟಗಾರ ಶುಭಮನ್ ಗಿಲ್ ಜ್ವರದಿಂದಾಗಿ ಮೊದಲ ಎರಡು ಪಂದ್ಯಗಳಿಂದ ಹೊರಗುಳಿದಿದ್ದರು. ಆದರೆ ಈ ಪಂದ್ಯದಲ್ಲಿ ದೊಡ್ಡ ಸ್ಕೋರ್ ಮಾಡಲು ‌ಅವರಿಗೆ ಸಾಧ್ಯವಾಗಲಿಲ್ಲ. 16 ರನ್ ಗಳಿಸಿ ಔಟಾದರು. ನಂತರ ವಿರಾಟ್ ಕೊಹ್ಲಿ (16) ಕೂಡ ಬೇಗನೆ ಔಟಾದರು.

ಆದರೆ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿದ್ದ ರೋಹಿತ್ ಶರ್ಮಾ ಈ ಪಂದ್ಯದಲ್ಲೂ ತಮ್ಮ ಅಬ್ಬರ ಮುಂದುವರಿಸಿದ್ದರು. ಟಿ20ಯಂತೆ ಬ್ಯಾಟಿಂಗ್ ಮಾಡಿದ ಅವರು ಎಲ್ಲೆಂದರಲ್ಲಿ ಬೌಂಡರಿ, ಸಿಕ್ಸರ್ ಬಾರಿಸಿದರು. ಆದರೆ ಅದಾಗಲೇ 6 ಸಿಕ್ಸರ್ ಹಾಗೂ 6 ಬೌಂಡರಿ ಬಾರಿಸಿದ್ದ ರೋಹಿತ್ ಶರ್ಮಾ ಶಾಟ್ ಆಡುವಾಗ ಕ್ಯಾಚ್ ಔಟ್ ಆದರು. ಇದರೊಂದಿಗೆ ಶತಕಕ್ಕೆ ಇನ್ನೂ 14 ರನ್ ಗಳಿಸುವ ಮುನ್ನವೇ ಹತಾಶರಾಗಿ ಪೆವಿಲಿಯನ್ ತಲುಪಿದರು. ಆದರೆ ಶ್ರೇಯಸ್ ಅಯ್ಯರ್ (53) ಮತ್ತು ಕೆಎಲ್ ರಾಹುಲ್ (19) ರನ್ ಗಳಿಸುವ ಮೂಲಕ ಆಟವನ್ನು ಪೂರ್ಣಗೊಳಿಸಿದರು.

ಈ ಪಂದ್ಯದ ಗೆಲುವಿನೊಂದಿಗೆ ಭಾರತ ಏಕದಿನ ವಿಶ್ವಕಪ್ 2023 ರಲ್ಲಿ ಆಡಿದ ಎಲ್ಲಾ ಮೂರು ಪಂದ್ಯಗಳನ್ನು ಗೆದ್ದಿದೆ. ಇದರೊಂದಿಗೆ ಈ ಮೆಗಾ ಟೂರ್ನಿಯಲ್ಲಿ ಆಡಿದ ಎಲ್ಲ 3 ಪಂದ್ಯಗಳನ್ನು ಗೆದ್ದ ಎರಡನೇ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಯಿತು. ನ್ಯೂಜಿಲೆಂಡ್ ತಂಡ ಈಗಾಗಲೇ ಸತತ 3 ಪಂದ್ಯಗಳನ್ನು ಗೆದ್ದಿದೆ.

ಭಾರತ ತನ್ನ ಮುಂದಿನ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಅಕ್ಟೋಬರ್ 19 ರಂದು ಎದುರಿಸಲಿದೆ. ಈ ಪಂದ್ಯ ಪುಣೆಯಲ್ಲಿ ನಡೆಯಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment