Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಆನೆ ಬಾಗಿಲು ಸಮೀಪ ದುರ್ಗಾದೇವಿ ಪ್ರತಿಷ್ಠಾಪನೆ : ಒಂಬತ್ತು ದಿನ ವಿಶೇಷ ಪೂಜೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.15 : ಆನೆಬಾಗಿಲು ಸಮೀಪವಿರುವ ಆಂಜೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಹಿಂದೂ ಘರ್ಜನೆ ಸೇನಾ ಸಂಸ್ಥಾನ ವತಿಯಿಂದ ದುರ್ಗಾದೇವಿಯನ್ನು ಭಾನುವಾರ ಪ್ರತಿಷ್ಠಾಪಿಸಿ ಒಂಬತ್ತು ದಿನಗಳ ಕಾಲ ಶ್ರದ್ದಾಭಕ್ತಿಯಿಂದ ಪೂಜೆ ಸಲ್ಲಿಸಲಾಗುತ್ತದೆ.
ಒಂದು ಕೈಯಲ್ಲಿ ತ್ರಿಶೂಲ ಮತ್ತೊಂದು ಕೈಯಲ್ಲಿ ಬಾಣ ಹಿಡಿದಿರುವ ದುರ್ಗಾದೇವಿಯನ್ನು ಕಂಗೊಳಿಸುವಂತೆ ಬಣ್ಣ ಬಣ್ಣದ ಹೂವು ಹಾರಗಳಿಂದ ಸಿಂಗರಿಸಲಾಗಿದೆ. ಬೆಳಗಿನಿಂದ ಸಂಜೆಯತನಕ ನೂರಾರು ಭಕ್ತರು ಧಾವಿಸಿ ಶ್ರದ್ದಾಭಕ್ತಿಯನ್ನು ಸಮರ್ಪಿಸಿದರು.

ಅಕ್ಟೋಬರ್ 15 ರಂದು ಸಂಜೆ ಕಲಾಂಜಲಿ ಮೆಲೋಡಿಸ್‍ನವರಿಂದ ವಾದ್ಯಗೋಷ್ಠಿ.

ಅಕ್ಟೋಬರ್ 16 ರಂದು ಸಪ್ತಗಿರಿ ಭಜನಾ ಮಂಡಳಿಯಿಂದ ದೇವರ ನಾಮಗಳು.

ಅಕ್ಟೋಬರ್ 17 ರಂದು ನೃತ್ಯ ಸ್ಪರ್ಧೆ,

ಅಕ್ಟೋಬರ್ 18 ರಂದು ಚಿತ್ರದುರ್ಗ ಸಿಂಗರ್ಸ್ ಜೋನ್ ಇವರಿಂದ ವಾದ್ಯಗೋಷ್ಠಿ,

ಅಕ್ಟೋಬರ್ 19 ರಂದು ಹರಟೆ ಕಟ್ಟೆ ಚರ್ಚಾ ಕಾರ್ಯಕ್ರಮ.

ಅಕ್ಟೋಬರ್ 20 ರಂದು ಶ್ರೀಕಾಂತ್ ಇವರಿಂದ ಅಷ್ಪಲಕ್ಷ್ಮಿ ಪೂಜೆ,

ಅಕ್ಟೋಬರ್ 21 ರಂದು ಬೆಳಿಗ್ಗೆ ಸರಸ್ವತಿ ಪೂಜೆ ಹಾಗೂ ಅಕ್ಷರಾಭ್ಯಾಸ,

ಅಕ್ಟೋಬರ್  22 ರಂದು ದುರ್ಗಾಷ್ಟಮಿ ಪ್ರಯುಕ್ತ ಮೈಸೂರಿನ ದಯಾನಂದ ಶರ್ಮ ಇವರಿಂದ ಗಣ ಹೋಮ, ನವಗ್ರಹ ಹೋಮ, ಧ್ವನಂತರಿ ಹೋಮ, ಸುದರ್ಶನ ಹೋಮ, ನರಸಿಂಹ ಹೋಮ, ಲಕ್ಷ್ಮಿನಾರಾಯಣ ಹೋಮ, ಲಲಿತ ಹೋಮ, ದುರ್ಗಾ ಹೋಮ, ನವ ದುರ್ಗಾ ಹೋಮ, ಅನ್ನಸಂತರ್ಪಣೆ.

ಅಕ್ಟೋಬರ್ 23 ರಂದು ಆಯುಧ ಪೂಜೆ ಪ್ರಯುಕ್ತ ಗುರುರಾಜ್ ಇವರಿಂದ ಕೊಳಲು ವಾದನ,

ಅಕ್ಟೋಬರ್ 24 ರಂದು ಬನ್ನಿ ಮುಡಿಯುವ ಉತ್ಸವ, ಸಂಜೆ ಭಕ್ತಿಗೀತೆಗಳು,

ಅಕ್ಟೋಬರ್ 25 ರಂದು ನಗರದ ಪ್ರಮುಖ ಬೀದಿಗಳಲ್ಲಿ ದುರ್ಗಾದೇವಿಯ ಶೋಭಾಯಾತ್ರೆ ನಂತರ ಚಂದ್ರವಳ್ಳಿಯಲ್ಲಿ ವಿಸರ್ಜಿಸಲಾಗುವುದು. ಭಕ್ತಾಧಿಗಳು ಒಂಬತ್ತು ದಿನಗಳ ಕಾಲ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದುರ್ಗಾದೇವಿಯ ಕೃಪೆಗೆ ಪಾತ್ರರಾಗುವಂತೆ ಹಿಂದೂ ಘರ್ಜನೆ ಸೇನಾ ಸಂಸ್ಥಾನ ಅಧ್ಯಕ್ಷ ಸಾಗರ್ ವಿನಂತಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!