Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೆ. ಸಿ. ರಘು ಅವರ ನಿಧನಕ್ಕೆ ಎಐಡಿವೈಓ ತೀವ್ರ ಸಂತಾಪ

---Advertisement---

 

ಸುದ್ದಿಒನ್, ಬೆಂಗಳೂರು, ಅಕ್ಟೋಬರ್.15 : ನಾಡಿನ ಹೆಸರಾಂತ ಆಹಾರ ತಜ್ಞರು, ಪ್ರಗತಿಪರ ಚಿಂತಕರು ಹಾಗೂ ಸಾಮಾಜಿಕ ಹೋರಾಟಗಾರರಾದ ಕೆ.ಸಿ. ರಘು ಅವರ ನಿಧನಕ್ಕೆ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಓ) ತೀವ್ರ ಸಂತಾಪವನ್ನು ಸೂಚಿಸಿದೆ.

ಸಮಾಜದಲ್ಲಿನ ಸಮಕಾಲಿನ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದ ಡಾ. ಕೆ. ಸಿ. ರಘು ಅವರು, ಬಡವರ ಅದೂ ದುಡಿಯುವ ವರ್ಗದ ಬಗ್ಗೆ ಅಪಾರ ಕಾಳಜಿಯನ್ನು ಹೊಂದಿದ್ದರು. ದೇಶದ ಆರ್ಥಿಕ ಪರಿಸ್ಥಿತಿ, ನಿರುದ್ಯೋಗ ಅಲ್ಲದೇ ಸರ್ಕಾರಗಳ ಆರ್ಥಿಕ ನೀತಿಗಳ ಬಗ್ಗೆ ಸ್ಪಷ್ಟ ಮತ್ತು ವಸ್ತುನಿಷ್ಠ ವಿಶ್ಲೇಷಣೆಯನ್ನು ನೀಡುತ್ತಿದ್ದ ಅವರು ಪ್ರಜತಾಂತ್ರಿಕ ಮತ್ತು ಧರ್ಮ ನಿರಪೇಕ್ಷ ಮೌಲ್ಯಗಳನ್ನು ಎತ್ತಿ ಹಿಡಿಯುತ್ತಿದ್ದ ರೀತಿ ಅನನ್ಯವಾಗಿತ್ತು.

ನಮ್ಮ ಎಐಡಿವೈಓ ಸಂಘಟನೆಯ ಹಲವಾರು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಮಾಜದಲ್ಲಿನ ಅನ್ಯಾಯಗಳ ವಿರುದ್ಧ ಹೋರಾಡಲು ಯುವಜನರನ್ನು ಪ್ರೇರೇಪಿಸುತ್ತಿದ್ದರು. ಅವರ ನಿಧನವು ಪ್ರಗತಿಪರ ಹೋರಾಟಕ್ಕೆ ಅಪಾರ ನಷ್ಟವನ್ನುಂಟು ಮಾಡಿದೆ ಎಂದು ಎಐಡಿವೈಓ ರಾಜ್ಯಾಧ್ಯಕ್ಷರಾದ ಶರಣಪ್ಪ ಉದ್ಬಾಳ ಮತ್ತು ಎಐಡಿವೈಓ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment