Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಾ. ಬಿ.ರಾಜಶೇಖರಪ್ಪ ನವರಿಗೆ ಇತಿಹಾಸ ಸಂಸ್ಕೃತಿ ಶ್ರೀ ಪ್ರಶಸ್ತಿ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.15 :  ನಾಡಿನ ಹಿರಿಯ ವಿದ್ವಾಂಸರು, ಖ್ಯಾತ ಇತಿಹಾಸ ಸಂಶೋಧಕರು, ಶಾಸನ, ಮೋಡಿ ಲಿಪಿ ತಜ್ಞರು ಹಾಗೂ ಸಾಹಿತಿಗಳು ಆದ   ಡಾ. ಬಿ. ರಾಜಶೇಖರಪ್ಪ ಇವರನ್ನು ಕರ್ನಾಟಕ ಇತಿಹಾಸ ಅಕಾಡೆಮಿಯು ಕೊಡಮಾಡುವ ಅತ್ಯುನ್ನತ ‘ಇತಿಹಾಸ ಸಂಸ್ಕೃತಿ ಶ್ರೀ’ ಪ್ರಶಸ್ತಿಗೆ ಈ ಸಾಲಿಗೆ ಆಯ್ಕೆ ಮಾಡಲಾಗಿದೆ.

ಈ ಪ್ರಶಸ್ತಿಯನ್ನು ಬಿ.ಆರ್. ಆರ್. ಫ್ಯಾಮಿಲಿ ಚಾರಿಟಬಲ್ ಟ್ರಸ್ಟ್ ಪ್ರಾಯೋಜಿಸುತ್ತಿದ್ದು ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ನಗದು ಹಾಗೂ ಪಾರಿತೋಷಕಗಳನ್ನು ಒಳಗೊಂಡಿರುತ್ತದೆ. ಈ ಪ್ರಶಸ್ತಿಯನ್ನು ಪಾವಗಡದಲ್ಲಿ ನವಂಬರ್ ತಿಂಗಳ ಏಳು, ಎಂಟು ಮತ್ತು ಒಂಬತ್ತನೇ ತಾರೀಖಿನಂದು ನಡೆಯಲಿರುವ ಕರ್ನಾಟಕ ಇತಿಹಾಸ ಅಕಾಡೆಮಿಯ 37ನೇ ವಾರ್ಷಿಕ ಸಮ್ಮೇಳನದಲ್ಲಿ ಪ್ರಧಾನ ಮಾಡಲಾಗುವುದು.

ಪ್ರಶಸ್ತಿಗೆ ಭಾಜನರಾಗಿರುವ ಡಾ. ಬಿ. ರಾಜಶೇಖರಪ್ಪನವರನ್ನು ಇತಿಹಾಸ ಅಕಾಡೆಮಿಯ ಸದಸ್ಯರಾದ ಸಿ.ಎಂ. ತಿಪ್ಪೇಸ್ವಾಮಿ, ಹೆಚ್. ವಿ. ಇಂದುಶೇಖರ್ ಚಿನಿವಾರ್ ಅಭಿನಂದಿಸಿದರು. ಈ ಸಮಯದಲ್ಲಿ ಸನ್ಮಾನಿತರ ಪತ್ನಿಯವರಾದ ಡಾಕ್ಟರ್ ಯಶೋಧ ರಾಜಶೇಖರಪ್ಪನವರು ಹಾಜರಿದ್ದರು.

ಇತಿಹಾಸ ಅಕಾಡೆಮಿಯು ಈ ಹಿಂದೆಯೂ ಡಾಕ್ಟರ್ ಬಿ. ರಾಜಶೇಖರಪ್ಪ ನವರಿಗೆ ಪ್ರತಿಷ್ಠಿತ “ಬಾ.ರ. ಗೋಪಾಲ್ ಶಾಸನ ತಜ್ಞ” ಮತ್ತು “ಸಂಶೋಧನಾ ಶ್ರೀ” ಪ್ರಶಸ್ತಿ ನೀಡಿತ್ತು. ಪ್ರಶಸ್ತಿ ಪುರಸ್ಕೃತರು 2018ರಲ್ಲಿ ಬಾದಾಮಿ ಬಳಿಯ ಶಿವಯೋಗ ಮಂದಿರದಲ್ಲಿ ನಡೆದ ಇತಿಹಾಸ ಅಕಾಡೆಮಿ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!