Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೆಡಿಎಸ್ ನಿಂದ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಉಚ್ಛಾಟನೆ

---Advertisement---

 

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವುದಕ್ಕೆ ಜೆಡಿಎಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ನೇರವಾಗಿಯೇ ಬೇಸರ ಹೊರ ಹಾಕುತ್ತಿದ್ದಾರೆ. ಅಷ್ಟೇ ಅಲ್ಲ ಒರಿಜಿನಲ್ ಜೆಡಿಎಸ್ ನಮ್ಮದೆ ಎಂಬ ಚರ್ಚೆ ಹುಟ್ಟು ಹಾಕಿದ್ದಾರೆ. ನಿನ್ನೆಯಷ್ಟೇ ಕುಮಾರಸ್ವಾಮಿ ಅವರನ್ನು ಉಚ್ಛಾಟನೆ ಮಾಡುವ ಬಗ್ಗೆ ಅಭಿಪ್ರಾಯಗಳು ಕೇಳಿ ಬರುತ್ತಿವೆ ಎಂದಿದ್ದರು. ಕುಮಾರಸ್ವಾಮಿ ಅವರನ್ನು ಉಚ್ಛಾಟನೆ ಮಾಡುವ ಮಾತುಗಳನ್ನು ಆಡಿದ್ದರು. ಈ ಹೇಳಿಕೆ ನೀಡಿದ ಬೆನ್ನಲ್ಲೇ ಇದೀಗ ಇಬ್ರಾಹಿಂ ಸಹಿಯೊಂದಿಗೆ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನು ಉಚ್ಛಾಟನೆ ಮಾಡಿರುವ ಪತ್ರವೊಂದು ಹರಿದಾಡುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ಪತ್ರ ವೈರಲ್ ಆಗಿದೆ.

ಇದೀಗ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನು ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ ಎಂಬ ಪತ್ರದಲ್ಲಿ ಈ ರೀತಿ ಇದೆ. ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿ ಎಂ ಇಬ್ರಾಹಿಂ, ಜೆಡಿಎಸ್ ಪಕ್ಷವೂ ದಶಕಗಳಿಂದ ಜಾತ್ಯಾತೀತ ಸಿದ್ಧಾಂತವನ್ನು ಪಾಲಿಸುತ್ತಾ ಬಂದಿದ್ದು, ನಮ್ಮ ಪಕ್ಷದಲ್ಲಿ ಎಲ್ಲಾ ಜಾತಿ ಧರ್ಮಗಳ ನಾಯಕರು, ಕಾರ್ಯಕರ್ತರು ಪಕ್ಷಕ್ಕಾಗಿ ದುಡಿದಿದ್ದು, ಇತ್ತಿಚೆಗೆ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕ ಎಚ್ ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕೋಮುವಾದಿ ಬಿಜೆಪಿ ಪಕ್ಷದೊಂದಿಗೆ ಮೈತ್ರಿಯಾಗಿರುವುದು ಕಂಡು ಬಂದಿದ್ದು, ಈ ತತ್ ತಕ್ಷಣದಿಂದ ಹೆಚ್ ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನ ಉಚ್ಛಾಟಿಸಲು ಪಕ್ಷ ತೀರ್ಮಾನಿಸಲಾಗಿದೆ ಎಂದು ಪತ್ರದ ಮೂಲಕ ಆದೇಶ ಹೊರಡಿಸಿದ್ದಾರೆ.

ಇನ್ನು ಒರಿಜಿನಲ್ ಜೆಡಿಎಸ್ ನಮ್ಮದು ಎಂದಿದ್ದ ಇಬ್ರಾಹಿಂ ಗೆ ಕುಮಾರಸ್ವಾಮಿ ಹಾಗೂ ದೇವೇಗೌಡ್ರು ತಿರುಗೇಟು ನೀಡಿದ್ದರು. ಇದೀಗ ಉಚ್ಛಾಟನೆಯ ಪತ್ರಿಕಾ ಪ್ರಕಟಣೆಗೆ ಯಾವ ರೀತಿ ಉತ್ತರ ನೀಡುತ್ತಾರೆ ಎಂಬುದನ್ನು ನೋಡಬೇಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment