Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಸೆಂಬರ್ ನಲ್ಲಿ ರಾಜ್ಯಾದ್ಯಂತ ರಸ್ತೆಗಳ ದುರಸ್ತಿ ಕಾರ್ಯ ಆರಂಭ: ಸಿ. ಸಿ. ಪಾಟೀಲ್

Facebook
Twitter
Telegram
WhatsApp

ವಿಜಯಪುರ : ಡಿಸೆಂಬರ್ ನಲ್ಲಿ ರಾಜ್ಯಾದ್ಯಂತ ರಸ್ತೆಗಳ ದುರಸ್ತಿ ಕಾರ್ಯ ಆರಂಭವಾಗಲಿದೆ ಎಂದು ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲ್ ಹೇಳಿದರು.

ಬೈ ಎಲೆಕ್ಷನ್ ನಲ್ಲಿ ಜಾತಿ ರಾಜಕಾರಣ ಪ್ರಸ್ತಾಪಿಸುವುದು ಸರಿಯಲ್ಲ. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ.

ಪಂಚಮಸಾಲಿ ಸಮಾಜವನ್ನು 2ಎ ಮೀಸಲಾತಿ ಪಟ್ಟಿಗೆ ಸೇರಿಸಲು ಮುಖ್ಯಮಂತ್ರಿಗಳು ಈಗಾಗಲೇ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಜಯಪ್ರಕಾಶ ಹೆಗಡೆ ಅವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ದಾರೆ. ಮೂರ್ನಾಲ್ಕು ಸಮಾಜಗಳ ಬೇಡಿಕೆ ಇದೇ ರೀತಿ ಇದೇ. ಎಲ್ಲವನ್ನು ಕ್ರೋಢಿಕರಿಸಿ, ಪರಿಶೀಲಿಸಿ ನಮ್ಮ ಸರಕಾರ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ ಎಂದು ಅವರು ತಿಳಿಸಿದರು.

ಸಿಂದಗಿ ಮತ್ತು ಹಾನಗಲ್ ಮತಕ್ಷೇತ್ರದ ಮತದಾರ ಪ್ರಭುಗಳು ಬಿಜೆಪಿ ಬೆಂಬಲಿಸಲಿದ್ದಾರೆ. ಈ ಚುನಾವಣೆಯಲ್ಲಿ ಪರಿಸ್ಥಿತಿಯ ಲಾಭ ತೆಗೆದುಕೊಳ್ಳಲು ವಿಜಯಾನಂದ ಕಾಶಪ್ಪನವರ ಪ್ರಯತ್ನಿಸುವುದಿಲ್ಲ ಎಂಬ ನಂಬಿಕೆಯಿದೆ. ನಮಗಿಂತಲೂ ಮುಂಚೆ ಅವರೇ ಅಧಿಕಾರದಲ್ಲಿದ್ದರು. ಆಗ ಯಾಕೆ ಮೀಸಲಾತಿ ಧ್ವನಿ ಎತ್ತಲಿಲ್ಲ? ಎಂದು ಪ್ರಶ್ನಿಸಿದ ಸಿ. ಸಿ. ಪಾಟೀಲ, ನಮ್ಮ ಸರಕಾರ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಿದೆ.

ಈಗಾಗಲೇ ಮುಖ್ಯಮಂತ್ರಿಗಳು ಕೂಡಲಸಂಗಮ ಸ್ವಾಮಿಗಳ ಜೊತೆ ಒಂದು ಗಂಟೆ 10 ನಿಮಿಷ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಸ್ವಾಮೀಜಿಗಳು ಈ ಸಭೆಯಿಂದ ಸಂತೃಪ್ತರಾಗಿದ್ದಾರೆ. ಅಂದು ಕಾಶಪ್ಪನವರ ಕೂಡ ಸಮಾಧಾನ ವ್ಯಕ್ತಪಡಿಸಿದ್ದರು. ಈಗ ಅವರು ಈ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ ಎಂಬ ವಿಶ್ವಾಸ ಇದೆ ಎಂದು ಸಚಿವರು ತಿಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!